Homeಮುಖಪುಟಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

- Advertisement -
- Advertisement -

 

 

| ದೇವು ಪತ್ತಾರ್ |

ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ’ನ್ಯಾಯ’ ನೀಡುವುದಕ್ಕಿಂತ ಹೆಚ್ಚಿನದನ್ನು ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಹೈದರಾಬಾದ್ ಕರ್ನಾಟಕದಲ್ಲಿ ‘ಶಹಾಪುರ ನ್ಯಾಯ’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ‘ಶಹಾಪುರ ನ್ಯಾಯ’ ಮಾಡುವ ವ್ಯಕ್ತಿಯನ್ನು ನಿಂದಾತ್ಮಕ ರೀತಿಯಲ್ಲಿ ಗುರುತಿಸಲಾಗುತ್ತದೆ. ಹಾಗಂತ ಅದು ಅನ್ಯಾಯವೇನಲ್ಲ.

ಏನಿದು ಶಹಾಪುರ ನ್ಯಾಯ?

ಧಾನ್ಯ ಅಳೆಯಲು ಸೇರು ಅಥವಾ ಬಳ್ಳ ಬಳಸಲಾಗುತ್ತದೆ. ಸೇರಿನ ಬಾಯನ್ನು ಮೇಲ್ಮುಖವಾಗಿ ಇಟ್ಟು ಅಳೆದರೆ ಅದು ನ್ಯಾಯ. ಸೇರನ್ನು ಬೋರಲಾಗಿ ಹಾಕಿ ಅಳೆದರೆ ಅನ್ಯಾಯ. ಶಹಾಪುರ ನ್ಯಾಯ ಅದೆರಡನ್ನೂ ಮಾಡುವುದಿಲ್ಲ. ಬದಲಿಗೆ ಸೇರನ್ನು ಅಡ್ಡಲಾಗಿ ಮಲಗಿಸಿ ಅದರ ಮೇಲೆ ಧಾನ್ಯ ಸುರಿಯುತ್ತ ಹೋಗುತ್ತದೆ. ಸೇರಿನ ಎರಡೂ ಬದಿಯಲ್ಲಿ ಬೀಳುವ ಧಾನ್ಯವನ್ನು ಎರಡೂ ಪಕ್ಷಗಳಿಗೆ ಹಂಚಲಾಗುತ್ತದೆ. ಮೇಲ್ನೋಟಕ್ಕೆ ಹಾಗೂ ತಾರ್ಕಿಕವಾಗಿ ಸರಿ ಎನ್ನಿಸುವ ಈ ವಿಧಾನವನ್ನು ’ನ್ಯಾಯ’ ಎಂದು ಯಾರೂ ಪರಿಗಣಿಸಲು ಸಾಧ್ಯವಿಲ್ಲ.

ಮತ್ತೊಂದು ಉದಾಹರಣೆ
ಇಬ್ಬರು ನೆರೆಹೊರೆಯವರ ನಡುವೆ ತಮ್ಮ ಮನೆಯ ನಡುವಿನ ಮರವೊಂದಕ್ಕೆ ಸಂಬಂಧಿಸಿದಂತೆ ಜಗಳ-ಭಿನ್ನಾಭಿಪ್ರಾಯ ಉಂಟಾಯಿತು. ಒಬ್ಬರು ಮರ ಇರುವ ನೆಲ (ಜಾಗ) ನನಗೆ ಸೇರಿದ್ದು ಎಂದು ವಾದಿಸಿದ. ಆದರೆ, ಮತ್ತೊಬ್ಬ ಮರ ಹಚ್ಚಿ, ನೀರೆರೆದು ಬೆಳೆಸಿದ್ದರಿಂದ ಅದು ನನ್ನದು ಹಾಗೂ ಅಷ್ಟೇ ಅಲ್ಲ ಮರ ಇರುವ ಪ್ರದೇಶ ನನಗೇ ಸೇರಿದ್ದು ಎಂದುಕೊಂಡು ಅದನ್ನು ಬೆಳೆಸಿದೆ. ಬೇರೆಯವರ ಜಾಗದಲ್ಲಿರುವ ಮರವನ್ನ ನಾನೇಕೆ ನೀರು ಹಾಕಿ ಬೆಳೆಸಲಿ? ಎಂಬ ಆಕ್ಷೇಪ ವ್ಯಕ್ತಪಡಿಸಿದ. ’ಶಹಾಪುರ ನ್ಯಾಯ ಮಾಡಿದ ಹಿರಿಯ, ಮರವನ್ನು ಎರಡನೆಯವನಿಗೂ ಜಾಗವನ್ನೂ ಮೊದಲನೆಯವನಿಗೂ ಹಂಚಿ ತೀರ್ಪು ನೀಡಿದ. ಊರವರೆಲ್ಲ ಇಬ್ಬರೂ ಕಳೆದುಕೊಂಡದ್ದಕ್ಕಿಂತ ಪಡೆದದ್ದೇ ಹೆಚ್ಚು ಎಂದು ಭಾವಿಸಿ ಸಂಭ್ರಮಿಸಿದರು.

ಯಾವುದೇ ರೀತಿಯ ತಗಾದೆ, ಜಗಳ, ಭಿನ್ನಾಭಿಪ್ರಾಯ ಉಂಟಾದರೆ ಮಧ್ಯಸ್ಥಿಕೆ ವಹಿಸಿ ಮಾತನಾಡುವವರನ್ನು ‘ನೀ ಇಲ್ಲಿ ಶಾಪುರ ನ್ಯಾಯ ಮಾಡಾಕ ಬರಬ್ಯಾಡ’ ಎಂದು ಪ್ರತಿಕ್ರಿಯಿಸುತ್ತಾರೆ. ‘ನ್ಯಾಯ’ ಪ್ರಕ್ರಿಯೆಯ ಅಣಕದಂತಿರುವ ಈ ನ್ಯಾಯವನ್ನು ಅನ್ಯಾಯ ಎಂದು ತಿರಸ್ಕರಿಸಲಾಗುವುದಿಲ್ಲ. ಹಾಗೆಯೇ ನ್ಯಾಯ ಎಂದು ಒಪ್ಪಿಕೊಳ್ಳುವುದು ಕೂಡ ಕಷ್ಟ.

ಈ ರೀತಿಯ ನ್ಯಾಯ ನೀಡುವ ಪ್ರಕ್ರಿಯೆಯನ್ನು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಮುಂಬೈ ಕರ್ನಾಟಕದಲ್ಲಿ ‘ಹಾವೇರಿ ನ್ಯಾಯ’ ಎಂದು ಗುರುತಿಸಲಾಗುತ್ತದೆ. ಹಾವೇರಿ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಮನಿಸಬೇಕು. ಕೆಲವು ಕಡೆ ಇದನ್ನು ’ಕಾಜಿ ನ್ಯಾಯ’ ಎಂದೂ ಕರೆಯಲಾಗುತ್ತದೆ. ಪತ್ನಿಯ ತಕರಾರು ಇಲ್ಲದ ಕಾರಣ ನೀಡಿ ಪತಿಗೆ ನಾಲ್ಕಕ್ಕಿಂತ ಹೆಚ್ಚು ಮದುವೆಗೆ ಅವಕಾಶ ನೀಡುವ ಪದ್ಧತಿಯಿದು. ಕೆಲವೆಡೆ ಖಾಪ್ ಪಂಚಾಯ್ತಿ ಎಂದೂ ಕರೆಯಲಾಗುತ್ತದೆ. ’ಜಿಸ್ ಲಾಠಿ ಉಸ್ ಕಾ ಭೈಂಸ್’ ಎಂಬ ಮಾತು ಕೂಡ ಇಂತಹ ನ್ಯಾಯಿಕ ಪ್ರಕ್ರಿಯೆಯ ಕಾರಣದಿಂದಾಗಿ ಹುಟ್ಟಿಕೊಂಡದ್ದು.

ನ್ಯಾಯಾಂಗದ ಬಗ್ಗೆ ಇರುವ ಎರಡು ಪ್ರಮುಖ ಸಂಗತಿಗಳನ್ನು ಇಲ್ಲಿ ಉಲ್ಲೇಖಿಸಬಹುದು. ನ್ಯಾಯ ನೀಡುವುದು ಮಾತ್ರವಲ್ಲ. ನೀಡಿದ್ದು ನ್ಯಾಯ ಎಂದು ಖಚಿತಪಡಿಸುವ ಹಾಗಿರಬೇಕು. ಮತ್ತೊಂದು ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಯಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ಎರಡೂ ಮಾತುಗಳು ನ್ಯಾಯಾಂಗದ ಘನತೆ ಮತ್ತು ಅದಕ್ಕಿರುವ ಮಹತ್ವವನ್ನು ವಿವರಿಸುತ್ತವೆ.

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...