Homeಮುಖಪುಟಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

- Advertisement -
- Advertisement -

 

 

| ದೇವು ಪತ್ತಾರ್ |

ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ’ನ್ಯಾಯ’ ನೀಡುವುದಕ್ಕಿಂತ ಹೆಚ್ಚಿನದನ್ನು ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಹೈದರಾಬಾದ್ ಕರ್ನಾಟಕದಲ್ಲಿ ‘ಶಹಾಪುರ ನ್ಯಾಯ’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ‘ಶಹಾಪುರ ನ್ಯಾಯ’ ಮಾಡುವ ವ್ಯಕ್ತಿಯನ್ನು ನಿಂದಾತ್ಮಕ ರೀತಿಯಲ್ಲಿ ಗುರುತಿಸಲಾಗುತ್ತದೆ. ಹಾಗಂತ ಅದು ಅನ್ಯಾಯವೇನಲ್ಲ.

ಏನಿದು ಶಹಾಪುರ ನ್ಯಾಯ?

ಧಾನ್ಯ ಅಳೆಯಲು ಸೇರು ಅಥವಾ ಬಳ್ಳ ಬಳಸಲಾಗುತ್ತದೆ. ಸೇರಿನ ಬಾಯನ್ನು ಮೇಲ್ಮುಖವಾಗಿ ಇಟ್ಟು ಅಳೆದರೆ ಅದು ನ್ಯಾಯ. ಸೇರನ್ನು ಬೋರಲಾಗಿ ಹಾಕಿ ಅಳೆದರೆ ಅನ್ಯಾಯ. ಶಹಾಪುರ ನ್ಯಾಯ ಅದೆರಡನ್ನೂ ಮಾಡುವುದಿಲ್ಲ. ಬದಲಿಗೆ ಸೇರನ್ನು ಅಡ್ಡಲಾಗಿ ಮಲಗಿಸಿ ಅದರ ಮೇಲೆ ಧಾನ್ಯ ಸುರಿಯುತ್ತ ಹೋಗುತ್ತದೆ. ಸೇರಿನ ಎರಡೂ ಬದಿಯಲ್ಲಿ ಬೀಳುವ ಧಾನ್ಯವನ್ನು ಎರಡೂ ಪಕ್ಷಗಳಿಗೆ ಹಂಚಲಾಗುತ್ತದೆ. ಮೇಲ್ನೋಟಕ್ಕೆ ಹಾಗೂ ತಾರ್ಕಿಕವಾಗಿ ಸರಿ ಎನ್ನಿಸುವ ಈ ವಿಧಾನವನ್ನು ’ನ್ಯಾಯ’ ಎಂದು ಯಾರೂ ಪರಿಗಣಿಸಲು ಸಾಧ್ಯವಿಲ್ಲ.

ಮತ್ತೊಂದು ಉದಾಹರಣೆ
ಇಬ್ಬರು ನೆರೆಹೊರೆಯವರ ನಡುವೆ ತಮ್ಮ ಮನೆಯ ನಡುವಿನ ಮರವೊಂದಕ್ಕೆ ಸಂಬಂಧಿಸಿದಂತೆ ಜಗಳ-ಭಿನ್ನಾಭಿಪ್ರಾಯ ಉಂಟಾಯಿತು. ಒಬ್ಬರು ಮರ ಇರುವ ನೆಲ (ಜಾಗ) ನನಗೆ ಸೇರಿದ್ದು ಎಂದು ವಾದಿಸಿದ. ಆದರೆ, ಮತ್ತೊಬ್ಬ ಮರ ಹಚ್ಚಿ, ನೀರೆರೆದು ಬೆಳೆಸಿದ್ದರಿಂದ ಅದು ನನ್ನದು ಹಾಗೂ ಅಷ್ಟೇ ಅಲ್ಲ ಮರ ಇರುವ ಪ್ರದೇಶ ನನಗೇ ಸೇರಿದ್ದು ಎಂದುಕೊಂಡು ಅದನ್ನು ಬೆಳೆಸಿದೆ. ಬೇರೆಯವರ ಜಾಗದಲ್ಲಿರುವ ಮರವನ್ನ ನಾನೇಕೆ ನೀರು ಹಾಕಿ ಬೆಳೆಸಲಿ? ಎಂಬ ಆಕ್ಷೇಪ ವ್ಯಕ್ತಪಡಿಸಿದ. ’ಶಹಾಪುರ ನ್ಯಾಯ ಮಾಡಿದ ಹಿರಿಯ, ಮರವನ್ನು ಎರಡನೆಯವನಿಗೂ ಜಾಗವನ್ನೂ ಮೊದಲನೆಯವನಿಗೂ ಹಂಚಿ ತೀರ್ಪು ನೀಡಿದ. ಊರವರೆಲ್ಲ ಇಬ್ಬರೂ ಕಳೆದುಕೊಂಡದ್ದಕ್ಕಿಂತ ಪಡೆದದ್ದೇ ಹೆಚ್ಚು ಎಂದು ಭಾವಿಸಿ ಸಂಭ್ರಮಿಸಿದರು.

ಯಾವುದೇ ರೀತಿಯ ತಗಾದೆ, ಜಗಳ, ಭಿನ್ನಾಭಿಪ್ರಾಯ ಉಂಟಾದರೆ ಮಧ್ಯಸ್ಥಿಕೆ ವಹಿಸಿ ಮಾತನಾಡುವವರನ್ನು ‘ನೀ ಇಲ್ಲಿ ಶಾಪುರ ನ್ಯಾಯ ಮಾಡಾಕ ಬರಬ್ಯಾಡ’ ಎಂದು ಪ್ರತಿಕ್ರಿಯಿಸುತ್ತಾರೆ. ‘ನ್ಯಾಯ’ ಪ್ರಕ್ರಿಯೆಯ ಅಣಕದಂತಿರುವ ಈ ನ್ಯಾಯವನ್ನು ಅನ್ಯಾಯ ಎಂದು ತಿರಸ್ಕರಿಸಲಾಗುವುದಿಲ್ಲ. ಹಾಗೆಯೇ ನ್ಯಾಯ ಎಂದು ಒಪ್ಪಿಕೊಳ್ಳುವುದು ಕೂಡ ಕಷ್ಟ.

ಈ ರೀತಿಯ ನ್ಯಾಯ ನೀಡುವ ಪ್ರಕ್ರಿಯೆಯನ್ನು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಮುಂಬೈ ಕರ್ನಾಟಕದಲ್ಲಿ ‘ಹಾವೇರಿ ನ್ಯಾಯ’ ಎಂದು ಗುರುತಿಸಲಾಗುತ್ತದೆ. ಹಾವೇರಿ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಮನಿಸಬೇಕು. ಕೆಲವು ಕಡೆ ಇದನ್ನು ’ಕಾಜಿ ನ್ಯಾಯ’ ಎಂದೂ ಕರೆಯಲಾಗುತ್ತದೆ. ಪತ್ನಿಯ ತಕರಾರು ಇಲ್ಲದ ಕಾರಣ ನೀಡಿ ಪತಿಗೆ ನಾಲ್ಕಕ್ಕಿಂತ ಹೆಚ್ಚು ಮದುವೆಗೆ ಅವಕಾಶ ನೀಡುವ ಪದ್ಧತಿಯಿದು. ಕೆಲವೆಡೆ ಖಾಪ್ ಪಂಚಾಯ್ತಿ ಎಂದೂ ಕರೆಯಲಾಗುತ್ತದೆ. ’ಜಿಸ್ ಲಾಠಿ ಉಸ್ ಕಾ ಭೈಂಸ್’ ಎಂಬ ಮಾತು ಕೂಡ ಇಂತಹ ನ್ಯಾಯಿಕ ಪ್ರಕ್ರಿಯೆಯ ಕಾರಣದಿಂದಾಗಿ ಹುಟ್ಟಿಕೊಂಡದ್ದು.

ನ್ಯಾಯಾಂಗದ ಬಗ್ಗೆ ಇರುವ ಎರಡು ಪ್ರಮುಖ ಸಂಗತಿಗಳನ್ನು ಇಲ್ಲಿ ಉಲ್ಲೇಖಿಸಬಹುದು. ನ್ಯಾಯ ನೀಡುವುದು ಮಾತ್ರವಲ್ಲ. ನೀಡಿದ್ದು ನ್ಯಾಯ ಎಂದು ಖಚಿತಪಡಿಸುವ ಹಾಗಿರಬೇಕು. ಮತ್ತೊಂದು ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಯಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ಎರಡೂ ಮಾತುಗಳು ನ್ಯಾಯಾಂಗದ ಘನತೆ ಮತ್ತು ಅದಕ್ಕಿರುವ ಮಹತ್ವವನ್ನು ವಿವರಿಸುತ್ತವೆ.

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...