Homeಮುಖಪುಟಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

- Advertisement -
- Advertisement -

 

 

| ದೇವು ಪತ್ತಾರ್ |

ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ’ನ್ಯಾಯ’ ನೀಡುವುದಕ್ಕಿಂತ ಹೆಚ್ಚಿನದನ್ನು ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಹೈದರಾಬಾದ್ ಕರ್ನಾಟಕದಲ್ಲಿ ‘ಶಹಾಪುರ ನ್ಯಾಯ’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ‘ಶಹಾಪುರ ನ್ಯಾಯ’ ಮಾಡುವ ವ್ಯಕ್ತಿಯನ್ನು ನಿಂದಾತ್ಮಕ ರೀತಿಯಲ್ಲಿ ಗುರುತಿಸಲಾಗುತ್ತದೆ. ಹಾಗಂತ ಅದು ಅನ್ಯಾಯವೇನಲ್ಲ.

ಏನಿದು ಶಹಾಪುರ ನ್ಯಾಯ?

ಧಾನ್ಯ ಅಳೆಯಲು ಸೇರು ಅಥವಾ ಬಳ್ಳ ಬಳಸಲಾಗುತ್ತದೆ. ಸೇರಿನ ಬಾಯನ್ನು ಮೇಲ್ಮುಖವಾಗಿ ಇಟ್ಟು ಅಳೆದರೆ ಅದು ನ್ಯಾಯ. ಸೇರನ್ನು ಬೋರಲಾಗಿ ಹಾಕಿ ಅಳೆದರೆ ಅನ್ಯಾಯ. ಶಹಾಪುರ ನ್ಯಾಯ ಅದೆರಡನ್ನೂ ಮಾಡುವುದಿಲ್ಲ. ಬದಲಿಗೆ ಸೇರನ್ನು ಅಡ್ಡಲಾಗಿ ಮಲಗಿಸಿ ಅದರ ಮೇಲೆ ಧಾನ್ಯ ಸುರಿಯುತ್ತ ಹೋಗುತ್ತದೆ. ಸೇರಿನ ಎರಡೂ ಬದಿಯಲ್ಲಿ ಬೀಳುವ ಧಾನ್ಯವನ್ನು ಎರಡೂ ಪಕ್ಷಗಳಿಗೆ ಹಂಚಲಾಗುತ್ತದೆ. ಮೇಲ್ನೋಟಕ್ಕೆ ಹಾಗೂ ತಾರ್ಕಿಕವಾಗಿ ಸರಿ ಎನ್ನಿಸುವ ಈ ವಿಧಾನವನ್ನು ’ನ್ಯಾಯ’ ಎಂದು ಯಾರೂ ಪರಿಗಣಿಸಲು ಸಾಧ್ಯವಿಲ್ಲ.

ಮತ್ತೊಂದು ಉದಾಹರಣೆ
ಇಬ್ಬರು ನೆರೆಹೊರೆಯವರ ನಡುವೆ ತಮ್ಮ ಮನೆಯ ನಡುವಿನ ಮರವೊಂದಕ್ಕೆ ಸಂಬಂಧಿಸಿದಂತೆ ಜಗಳ-ಭಿನ್ನಾಭಿಪ್ರಾಯ ಉಂಟಾಯಿತು. ಒಬ್ಬರು ಮರ ಇರುವ ನೆಲ (ಜಾಗ) ನನಗೆ ಸೇರಿದ್ದು ಎಂದು ವಾದಿಸಿದ. ಆದರೆ, ಮತ್ತೊಬ್ಬ ಮರ ಹಚ್ಚಿ, ನೀರೆರೆದು ಬೆಳೆಸಿದ್ದರಿಂದ ಅದು ನನ್ನದು ಹಾಗೂ ಅಷ್ಟೇ ಅಲ್ಲ ಮರ ಇರುವ ಪ್ರದೇಶ ನನಗೇ ಸೇರಿದ್ದು ಎಂದುಕೊಂಡು ಅದನ್ನು ಬೆಳೆಸಿದೆ. ಬೇರೆಯವರ ಜಾಗದಲ್ಲಿರುವ ಮರವನ್ನ ನಾನೇಕೆ ನೀರು ಹಾಕಿ ಬೆಳೆಸಲಿ? ಎಂಬ ಆಕ್ಷೇಪ ವ್ಯಕ್ತಪಡಿಸಿದ. ’ಶಹಾಪುರ ನ್ಯಾಯ ಮಾಡಿದ ಹಿರಿಯ, ಮರವನ್ನು ಎರಡನೆಯವನಿಗೂ ಜಾಗವನ್ನೂ ಮೊದಲನೆಯವನಿಗೂ ಹಂಚಿ ತೀರ್ಪು ನೀಡಿದ. ಊರವರೆಲ್ಲ ಇಬ್ಬರೂ ಕಳೆದುಕೊಂಡದ್ದಕ್ಕಿಂತ ಪಡೆದದ್ದೇ ಹೆಚ್ಚು ಎಂದು ಭಾವಿಸಿ ಸಂಭ್ರಮಿಸಿದರು.

ಯಾವುದೇ ರೀತಿಯ ತಗಾದೆ, ಜಗಳ, ಭಿನ್ನಾಭಿಪ್ರಾಯ ಉಂಟಾದರೆ ಮಧ್ಯಸ್ಥಿಕೆ ವಹಿಸಿ ಮಾತನಾಡುವವರನ್ನು ‘ನೀ ಇಲ್ಲಿ ಶಾಪುರ ನ್ಯಾಯ ಮಾಡಾಕ ಬರಬ್ಯಾಡ’ ಎಂದು ಪ್ರತಿಕ್ರಿಯಿಸುತ್ತಾರೆ. ‘ನ್ಯಾಯ’ ಪ್ರಕ್ರಿಯೆಯ ಅಣಕದಂತಿರುವ ಈ ನ್ಯಾಯವನ್ನು ಅನ್ಯಾಯ ಎಂದು ತಿರಸ್ಕರಿಸಲಾಗುವುದಿಲ್ಲ. ಹಾಗೆಯೇ ನ್ಯಾಯ ಎಂದು ಒಪ್ಪಿಕೊಳ್ಳುವುದು ಕೂಡ ಕಷ್ಟ.

ಈ ರೀತಿಯ ನ್ಯಾಯ ನೀಡುವ ಪ್ರಕ್ರಿಯೆಯನ್ನು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಮುಂಬೈ ಕರ್ನಾಟಕದಲ್ಲಿ ‘ಹಾವೇರಿ ನ್ಯಾಯ’ ಎಂದು ಗುರುತಿಸಲಾಗುತ್ತದೆ. ಹಾವೇರಿ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಮನಿಸಬೇಕು. ಕೆಲವು ಕಡೆ ಇದನ್ನು ’ಕಾಜಿ ನ್ಯಾಯ’ ಎಂದೂ ಕರೆಯಲಾಗುತ್ತದೆ. ಪತ್ನಿಯ ತಕರಾರು ಇಲ್ಲದ ಕಾರಣ ನೀಡಿ ಪತಿಗೆ ನಾಲ್ಕಕ್ಕಿಂತ ಹೆಚ್ಚು ಮದುವೆಗೆ ಅವಕಾಶ ನೀಡುವ ಪದ್ಧತಿಯಿದು. ಕೆಲವೆಡೆ ಖಾಪ್ ಪಂಚಾಯ್ತಿ ಎಂದೂ ಕರೆಯಲಾಗುತ್ತದೆ. ’ಜಿಸ್ ಲಾಠಿ ಉಸ್ ಕಾ ಭೈಂಸ್’ ಎಂಬ ಮಾತು ಕೂಡ ಇಂತಹ ನ್ಯಾಯಿಕ ಪ್ರಕ್ರಿಯೆಯ ಕಾರಣದಿಂದಾಗಿ ಹುಟ್ಟಿಕೊಂಡದ್ದು.

ನ್ಯಾಯಾಂಗದ ಬಗ್ಗೆ ಇರುವ ಎರಡು ಪ್ರಮುಖ ಸಂಗತಿಗಳನ್ನು ಇಲ್ಲಿ ಉಲ್ಲೇಖಿಸಬಹುದು. ನ್ಯಾಯ ನೀಡುವುದು ಮಾತ್ರವಲ್ಲ. ನೀಡಿದ್ದು ನ್ಯಾಯ ಎಂದು ಖಚಿತಪಡಿಸುವ ಹಾಗಿರಬೇಕು. ಮತ್ತೊಂದು ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಯಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ಎರಡೂ ಮಾತುಗಳು ನ್ಯಾಯಾಂಗದ ಘನತೆ ಮತ್ತು ಅದಕ್ಕಿರುವ ಮಹತ್ವವನ್ನು ವಿವರಿಸುತ್ತವೆ.

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...