Homeಮುಖಪುಟಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

- Advertisement -
- Advertisement -

 

 

| ದೇವು ಪತ್ತಾರ್ |

ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ’ನ್ಯಾಯ’ ನೀಡುವುದಕ್ಕಿಂತ ಹೆಚ್ಚಿನದನ್ನು ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಹೈದರಾಬಾದ್ ಕರ್ನಾಟಕದಲ್ಲಿ ‘ಶಹಾಪುರ ನ್ಯಾಯ’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ‘ಶಹಾಪುರ ನ್ಯಾಯ’ ಮಾಡುವ ವ್ಯಕ್ತಿಯನ್ನು ನಿಂದಾತ್ಮಕ ರೀತಿಯಲ್ಲಿ ಗುರುತಿಸಲಾಗುತ್ತದೆ. ಹಾಗಂತ ಅದು ಅನ್ಯಾಯವೇನಲ್ಲ.

ಏನಿದು ಶಹಾಪುರ ನ್ಯಾಯ?

ಧಾನ್ಯ ಅಳೆಯಲು ಸೇರು ಅಥವಾ ಬಳ್ಳ ಬಳಸಲಾಗುತ್ತದೆ. ಸೇರಿನ ಬಾಯನ್ನು ಮೇಲ್ಮುಖವಾಗಿ ಇಟ್ಟು ಅಳೆದರೆ ಅದು ನ್ಯಾಯ. ಸೇರನ್ನು ಬೋರಲಾಗಿ ಹಾಕಿ ಅಳೆದರೆ ಅನ್ಯಾಯ. ಶಹಾಪುರ ನ್ಯಾಯ ಅದೆರಡನ್ನೂ ಮಾಡುವುದಿಲ್ಲ. ಬದಲಿಗೆ ಸೇರನ್ನು ಅಡ್ಡಲಾಗಿ ಮಲಗಿಸಿ ಅದರ ಮೇಲೆ ಧಾನ್ಯ ಸುರಿಯುತ್ತ ಹೋಗುತ್ತದೆ. ಸೇರಿನ ಎರಡೂ ಬದಿಯಲ್ಲಿ ಬೀಳುವ ಧಾನ್ಯವನ್ನು ಎರಡೂ ಪಕ್ಷಗಳಿಗೆ ಹಂಚಲಾಗುತ್ತದೆ. ಮೇಲ್ನೋಟಕ್ಕೆ ಹಾಗೂ ತಾರ್ಕಿಕವಾಗಿ ಸರಿ ಎನ್ನಿಸುವ ಈ ವಿಧಾನವನ್ನು ’ನ್ಯಾಯ’ ಎಂದು ಯಾರೂ ಪರಿಗಣಿಸಲು ಸಾಧ್ಯವಿಲ್ಲ.

ಮತ್ತೊಂದು ಉದಾಹರಣೆ
ಇಬ್ಬರು ನೆರೆಹೊರೆಯವರ ನಡುವೆ ತಮ್ಮ ಮನೆಯ ನಡುವಿನ ಮರವೊಂದಕ್ಕೆ ಸಂಬಂಧಿಸಿದಂತೆ ಜಗಳ-ಭಿನ್ನಾಭಿಪ್ರಾಯ ಉಂಟಾಯಿತು. ಒಬ್ಬರು ಮರ ಇರುವ ನೆಲ (ಜಾಗ) ನನಗೆ ಸೇರಿದ್ದು ಎಂದು ವಾದಿಸಿದ. ಆದರೆ, ಮತ್ತೊಬ್ಬ ಮರ ಹಚ್ಚಿ, ನೀರೆರೆದು ಬೆಳೆಸಿದ್ದರಿಂದ ಅದು ನನ್ನದು ಹಾಗೂ ಅಷ್ಟೇ ಅಲ್ಲ ಮರ ಇರುವ ಪ್ರದೇಶ ನನಗೇ ಸೇರಿದ್ದು ಎಂದುಕೊಂಡು ಅದನ್ನು ಬೆಳೆಸಿದೆ. ಬೇರೆಯವರ ಜಾಗದಲ್ಲಿರುವ ಮರವನ್ನ ನಾನೇಕೆ ನೀರು ಹಾಕಿ ಬೆಳೆಸಲಿ? ಎಂಬ ಆಕ್ಷೇಪ ವ್ಯಕ್ತಪಡಿಸಿದ. ’ಶಹಾಪುರ ನ್ಯಾಯ ಮಾಡಿದ ಹಿರಿಯ, ಮರವನ್ನು ಎರಡನೆಯವನಿಗೂ ಜಾಗವನ್ನೂ ಮೊದಲನೆಯವನಿಗೂ ಹಂಚಿ ತೀರ್ಪು ನೀಡಿದ. ಊರವರೆಲ್ಲ ಇಬ್ಬರೂ ಕಳೆದುಕೊಂಡದ್ದಕ್ಕಿಂತ ಪಡೆದದ್ದೇ ಹೆಚ್ಚು ಎಂದು ಭಾವಿಸಿ ಸಂಭ್ರಮಿಸಿದರು.

ಯಾವುದೇ ರೀತಿಯ ತಗಾದೆ, ಜಗಳ, ಭಿನ್ನಾಭಿಪ್ರಾಯ ಉಂಟಾದರೆ ಮಧ್ಯಸ್ಥಿಕೆ ವಹಿಸಿ ಮಾತನಾಡುವವರನ್ನು ‘ನೀ ಇಲ್ಲಿ ಶಾಪುರ ನ್ಯಾಯ ಮಾಡಾಕ ಬರಬ್ಯಾಡ’ ಎಂದು ಪ್ರತಿಕ್ರಿಯಿಸುತ್ತಾರೆ. ‘ನ್ಯಾಯ’ ಪ್ರಕ್ರಿಯೆಯ ಅಣಕದಂತಿರುವ ಈ ನ್ಯಾಯವನ್ನು ಅನ್ಯಾಯ ಎಂದು ತಿರಸ್ಕರಿಸಲಾಗುವುದಿಲ್ಲ. ಹಾಗೆಯೇ ನ್ಯಾಯ ಎಂದು ಒಪ್ಪಿಕೊಳ್ಳುವುದು ಕೂಡ ಕಷ್ಟ.

ಈ ರೀತಿಯ ನ್ಯಾಯ ನೀಡುವ ಪ್ರಕ್ರಿಯೆಯನ್ನು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಮುಂಬೈ ಕರ್ನಾಟಕದಲ್ಲಿ ‘ಹಾವೇರಿ ನ್ಯಾಯ’ ಎಂದು ಗುರುತಿಸಲಾಗುತ್ತದೆ. ಹಾವೇರಿ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಮನಿಸಬೇಕು. ಕೆಲವು ಕಡೆ ಇದನ್ನು ’ಕಾಜಿ ನ್ಯಾಯ’ ಎಂದೂ ಕರೆಯಲಾಗುತ್ತದೆ. ಪತ್ನಿಯ ತಕರಾರು ಇಲ್ಲದ ಕಾರಣ ನೀಡಿ ಪತಿಗೆ ನಾಲ್ಕಕ್ಕಿಂತ ಹೆಚ್ಚು ಮದುವೆಗೆ ಅವಕಾಶ ನೀಡುವ ಪದ್ಧತಿಯಿದು. ಕೆಲವೆಡೆ ಖಾಪ್ ಪಂಚಾಯ್ತಿ ಎಂದೂ ಕರೆಯಲಾಗುತ್ತದೆ. ’ಜಿಸ್ ಲಾಠಿ ಉಸ್ ಕಾ ಭೈಂಸ್’ ಎಂಬ ಮಾತು ಕೂಡ ಇಂತಹ ನ್ಯಾಯಿಕ ಪ್ರಕ್ರಿಯೆಯ ಕಾರಣದಿಂದಾಗಿ ಹುಟ್ಟಿಕೊಂಡದ್ದು.

ನ್ಯಾಯಾಂಗದ ಬಗ್ಗೆ ಇರುವ ಎರಡು ಪ್ರಮುಖ ಸಂಗತಿಗಳನ್ನು ಇಲ್ಲಿ ಉಲ್ಲೇಖಿಸಬಹುದು. ನ್ಯಾಯ ನೀಡುವುದು ಮಾತ್ರವಲ್ಲ. ನೀಡಿದ್ದು ನ್ಯಾಯ ಎಂದು ಖಚಿತಪಡಿಸುವ ಹಾಗಿರಬೇಕು. ಮತ್ತೊಂದು ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಯಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ಎರಡೂ ಮಾತುಗಳು ನ್ಯಾಯಾಂಗದ ಘನತೆ ಮತ್ತು ಅದಕ್ಕಿರುವ ಮಹತ್ವವನ್ನು ವಿವರಿಸುತ್ತವೆ.

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...