Homeಮುಖಪುಟಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

- Advertisement -
- Advertisement -

 

 

| ದೇವು ಪತ್ತಾರ್ |

ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ’ನ್ಯಾಯ’ ನೀಡುವುದಕ್ಕಿಂತ ಹೆಚ್ಚಿನದನ್ನು ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಹೈದರಾಬಾದ್ ಕರ್ನಾಟಕದಲ್ಲಿ ‘ಶಹಾಪುರ ನ್ಯಾಯ’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ‘ಶಹಾಪುರ ನ್ಯಾಯ’ ಮಾಡುವ ವ್ಯಕ್ತಿಯನ್ನು ನಿಂದಾತ್ಮಕ ರೀತಿಯಲ್ಲಿ ಗುರುತಿಸಲಾಗುತ್ತದೆ. ಹಾಗಂತ ಅದು ಅನ್ಯಾಯವೇನಲ್ಲ.

ಏನಿದು ಶಹಾಪುರ ನ್ಯಾಯ?

ಧಾನ್ಯ ಅಳೆಯಲು ಸೇರು ಅಥವಾ ಬಳ್ಳ ಬಳಸಲಾಗುತ್ತದೆ. ಸೇರಿನ ಬಾಯನ್ನು ಮೇಲ್ಮುಖವಾಗಿ ಇಟ್ಟು ಅಳೆದರೆ ಅದು ನ್ಯಾಯ. ಸೇರನ್ನು ಬೋರಲಾಗಿ ಹಾಕಿ ಅಳೆದರೆ ಅನ್ಯಾಯ. ಶಹಾಪುರ ನ್ಯಾಯ ಅದೆರಡನ್ನೂ ಮಾಡುವುದಿಲ್ಲ. ಬದಲಿಗೆ ಸೇರನ್ನು ಅಡ್ಡಲಾಗಿ ಮಲಗಿಸಿ ಅದರ ಮೇಲೆ ಧಾನ್ಯ ಸುರಿಯುತ್ತ ಹೋಗುತ್ತದೆ. ಸೇರಿನ ಎರಡೂ ಬದಿಯಲ್ಲಿ ಬೀಳುವ ಧಾನ್ಯವನ್ನು ಎರಡೂ ಪಕ್ಷಗಳಿಗೆ ಹಂಚಲಾಗುತ್ತದೆ. ಮೇಲ್ನೋಟಕ್ಕೆ ಹಾಗೂ ತಾರ್ಕಿಕವಾಗಿ ಸರಿ ಎನ್ನಿಸುವ ಈ ವಿಧಾನವನ್ನು ’ನ್ಯಾಯ’ ಎಂದು ಯಾರೂ ಪರಿಗಣಿಸಲು ಸಾಧ್ಯವಿಲ್ಲ.

ಮತ್ತೊಂದು ಉದಾಹರಣೆ
ಇಬ್ಬರು ನೆರೆಹೊರೆಯವರ ನಡುವೆ ತಮ್ಮ ಮನೆಯ ನಡುವಿನ ಮರವೊಂದಕ್ಕೆ ಸಂಬಂಧಿಸಿದಂತೆ ಜಗಳ-ಭಿನ್ನಾಭಿಪ್ರಾಯ ಉಂಟಾಯಿತು. ಒಬ್ಬರು ಮರ ಇರುವ ನೆಲ (ಜಾಗ) ನನಗೆ ಸೇರಿದ್ದು ಎಂದು ವಾದಿಸಿದ. ಆದರೆ, ಮತ್ತೊಬ್ಬ ಮರ ಹಚ್ಚಿ, ನೀರೆರೆದು ಬೆಳೆಸಿದ್ದರಿಂದ ಅದು ನನ್ನದು ಹಾಗೂ ಅಷ್ಟೇ ಅಲ್ಲ ಮರ ಇರುವ ಪ್ರದೇಶ ನನಗೇ ಸೇರಿದ್ದು ಎಂದುಕೊಂಡು ಅದನ್ನು ಬೆಳೆಸಿದೆ. ಬೇರೆಯವರ ಜಾಗದಲ್ಲಿರುವ ಮರವನ್ನ ನಾನೇಕೆ ನೀರು ಹಾಕಿ ಬೆಳೆಸಲಿ? ಎಂಬ ಆಕ್ಷೇಪ ವ್ಯಕ್ತಪಡಿಸಿದ. ’ಶಹಾಪುರ ನ್ಯಾಯ ಮಾಡಿದ ಹಿರಿಯ, ಮರವನ್ನು ಎರಡನೆಯವನಿಗೂ ಜಾಗವನ್ನೂ ಮೊದಲನೆಯವನಿಗೂ ಹಂಚಿ ತೀರ್ಪು ನೀಡಿದ. ಊರವರೆಲ್ಲ ಇಬ್ಬರೂ ಕಳೆದುಕೊಂಡದ್ದಕ್ಕಿಂತ ಪಡೆದದ್ದೇ ಹೆಚ್ಚು ಎಂದು ಭಾವಿಸಿ ಸಂಭ್ರಮಿಸಿದರು.

ಯಾವುದೇ ರೀತಿಯ ತಗಾದೆ, ಜಗಳ, ಭಿನ್ನಾಭಿಪ್ರಾಯ ಉಂಟಾದರೆ ಮಧ್ಯಸ್ಥಿಕೆ ವಹಿಸಿ ಮಾತನಾಡುವವರನ್ನು ‘ನೀ ಇಲ್ಲಿ ಶಾಪುರ ನ್ಯಾಯ ಮಾಡಾಕ ಬರಬ್ಯಾಡ’ ಎಂದು ಪ್ರತಿಕ್ರಿಯಿಸುತ್ತಾರೆ. ‘ನ್ಯಾಯ’ ಪ್ರಕ್ರಿಯೆಯ ಅಣಕದಂತಿರುವ ಈ ನ್ಯಾಯವನ್ನು ಅನ್ಯಾಯ ಎಂದು ತಿರಸ್ಕರಿಸಲಾಗುವುದಿಲ್ಲ. ಹಾಗೆಯೇ ನ್ಯಾಯ ಎಂದು ಒಪ್ಪಿಕೊಳ್ಳುವುದು ಕೂಡ ಕಷ್ಟ.

ಈ ರೀತಿಯ ನ್ಯಾಯ ನೀಡುವ ಪ್ರಕ್ರಿಯೆಯನ್ನು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಮುಂಬೈ ಕರ್ನಾಟಕದಲ್ಲಿ ‘ಹಾವೇರಿ ನ್ಯಾಯ’ ಎಂದು ಗುರುತಿಸಲಾಗುತ್ತದೆ. ಹಾವೇರಿ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಮನಿಸಬೇಕು. ಕೆಲವು ಕಡೆ ಇದನ್ನು ’ಕಾಜಿ ನ್ಯಾಯ’ ಎಂದೂ ಕರೆಯಲಾಗುತ್ತದೆ. ಪತ್ನಿಯ ತಕರಾರು ಇಲ್ಲದ ಕಾರಣ ನೀಡಿ ಪತಿಗೆ ನಾಲ್ಕಕ್ಕಿಂತ ಹೆಚ್ಚು ಮದುವೆಗೆ ಅವಕಾಶ ನೀಡುವ ಪದ್ಧತಿಯಿದು. ಕೆಲವೆಡೆ ಖಾಪ್ ಪಂಚಾಯ್ತಿ ಎಂದೂ ಕರೆಯಲಾಗುತ್ತದೆ. ’ಜಿಸ್ ಲಾಠಿ ಉಸ್ ಕಾ ಭೈಂಸ್’ ಎಂಬ ಮಾತು ಕೂಡ ಇಂತಹ ನ್ಯಾಯಿಕ ಪ್ರಕ್ರಿಯೆಯ ಕಾರಣದಿಂದಾಗಿ ಹುಟ್ಟಿಕೊಂಡದ್ದು.

ನ್ಯಾಯಾಂಗದ ಬಗ್ಗೆ ಇರುವ ಎರಡು ಪ್ರಮುಖ ಸಂಗತಿಗಳನ್ನು ಇಲ್ಲಿ ಉಲ್ಲೇಖಿಸಬಹುದು. ನ್ಯಾಯ ನೀಡುವುದು ಮಾತ್ರವಲ್ಲ. ನೀಡಿದ್ದು ನ್ಯಾಯ ಎಂದು ಖಚಿತಪಡಿಸುವ ಹಾಗಿರಬೇಕು. ಮತ್ತೊಂದು ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಯಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ಎರಡೂ ಮಾತುಗಳು ನ್ಯಾಯಾಂಗದ ಘನತೆ ಮತ್ತು ಅದಕ್ಕಿರುವ ಮಹತ್ವವನ್ನು ವಿವರಿಸುತ್ತವೆ.

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...