Homeಮುಖಪುಟಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಅಯೋಧ್ಯ ತೀರ್ಪು: ಶಹಾಪುರ ನ್ಯಾಯವೋ, ಹಾವೇರಿ ನ್ಯಾಯವೋ?

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

- Advertisement -
- Advertisement -

 

 

| ದೇವು ಪತ್ತಾರ್ |

ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪು ’ನ್ಯಾಯ’ ನೀಡುವುದಕ್ಕಿಂತ ಹೆಚ್ಚಿನದನ್ನು ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಹೈದರಾಬಾದ್ ಕರ್ನಾಟಕದಲ್ಲಿ ‘ಶಹಾಪುರ ನ್ಯಾಯ’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ‘ಶಹಾಪುರ ನ್ಯಾಯ’ ಮಾಡುವ ವ್ಯಕ್ತಿಯನ್ನು ನಿಂದಾತ್ಮಕ ರೀತಿಯಲ್ಲಿ ಗುರುತಿಸಲಾಗುತ್ತದೆ. ಹಾಗಂತ ಅದು ಅನ್ಯಾಯವೇನಲ್ಲ.

ಏನಿದು ಶಹಾಪುರ ನ್ಯಾಯ?

ಧಾನ್ಯ ಅಳೆಯಲು ಸೇರು ಅಥವಾ ಬಳ್ಳ ಬಳಸಲಾಗುತ್ತದೆ. ಸೇರಿನ ಬಾಯನ್ನು ಮೇಲ್ಮುಖವಾಗಿ ಇಟ್ಟು ಅಳೆದರೆ ಅದು ನ್ಯಾಯ. ಸೇರನ್ನು ಬೋರಲಾಗಿ ಹಾಕಿ ಅಳೆದರೆ ಅನ್ಯಾಯ. ಶಹಾಪುರ ನ್ಯಾಯ ಅದೆರಡನ್ನೂ ಮಾಡುವುದಿಲ್ಲ. ಬದಲಿಗೆ ಸೇರನ್ನು ಅಡ್ಡಲಾಗಿ ಮಲಗಿಸಿ ಅದರ ಮೇಲೆ ಧಾನ್ಯ ಸುರಿಯುತ್ತ ಹೋಗುತ್ತದೆ. ಸೇರಿನ ಎರಡೂ ಬದಿಯಲ್ಲಿ ಬೀಳುವ ಧಾನ್ಯವನ್ನು ಎರಡೂ ಪಕ್ಷಗಳಿಗೆ ಹಂಚಲಾಗುತ್ತದೆ. ಮೇಲ್ನೋಟಕ್ಕೆ ಹಾಗೂ ತಾರ್ಕಿಕವಾಗಿ ಸರಿ ಎನ್ನಿಸುವ ಈ ವಿಧಾನವನ್ನು ’ನ್ಯಾಯ’ ಎಂದು ಯಾರೂ ಪರಿಗಣಿಸಲು ಸಾಧ್ಯವಿಲ್ಲ.

ಮತ್ತೊಂದು ಉದಾಹರಣೆ
ಇಬ್ಬರು ನೆರೆಹೊರೆಯವರ ನಡುವೆ ತಮ್ಮ ಮನೆಯ ನಡುವಿನ ಮರವೊಂದಕ್ಕೆ ಸಂಬಂಧಿಸಿದಂತೆ ಜಗಳ-ಭಿನ್ನಾಭಿಪ್ರಾಯ ಉಂಟಾಯಿತು. ಒಬ್ಬರು ಮರ ಇರುವ ನೆಲ (ಜಾಗ) ನನಗೆ ಸೇರಿದ್ದು ಎಂದು ವಾದಿಸಿದ. ಆದರೆ, ಮತ್ತೊಬ್ಬ ಮರ ಹಚ್ಚಿ, ನೀರೆರೆದು ಬೆಳೆಸಿದ್ದರಿಂದ ಅದು ನನ್ನದು ಹಾಗೂ ಅಷ್ಟೇ ಅಲ್ಲ ಮರ ಇರುವ ಪ್ರದೇಶ ನನಗೇ ಸೇರಿದ್ದು ಎಂದುಕೊಂಡು ಅದನ್ನು ಬೆಳೆಸಿದೆ. ಬೇರೆಯವರ ಜಾಗದಲ್ಲಿರುವ ಮರವನ್ನ ನಾನೇಕೆ ನೀರು ಹಾಕಿ ಬೆಳೆಸಲಿ? ಎಂಬ ಆಕ್ಷೇಪ ವ್ಯಕ್ತಪಡಿಸಿದ. ’ಶಹಾಪುರ ನ್ಯಾಯ ಮಾಡಿದ ಹಿರಿಯ, ಮರವನ್ನು ಎರಡನೆಯವನಿಗೂ ಜಾಗವನ್ನೂ ಮೊದಲನೆಯವನಿಗೂ ಹಂಚಿ ತೀರ್ಪು ನೀಡಿದ. ಊರವರೆಲ್ಲ ಇಬ್ಬರೂ ಕಳೆದುಕೊಂಡದ್ದಕ್ಕಿಂತ ಪಡೆದದ್ದೇ ಹೆಚ್ಚು ಎಂದು ಭಾವಿಸಿ ಸಂಭ್ರಮಿಸಿದರು.

ಯಾವುದೇ ರೀತಿಯ ತಗಾದೆ, ಜಗಳ, ಭಿನ್ನಾಭಿಪ್ರಾಯ ಉಂಟಾದರೆ ಮಧ್ಯಸ್ಥಿಕೆ ವಹಿಸಿ ಮಾತನಾಡುವವರನ್ನು ‘ನೀ ಇಲ್ಲಿ ಶಾಪುರ ನ್ಯಾಯ ಮಾಡಾಕ ಬರಬ್ಯಾಡ’ ಎಂದು ಪ್ರತಿಕ್ರಿಯಿಸುತ್ತಾರೆ. ‘ನ್ಯಾಯ’ ಪ್ರಕ್ರಿಯೆಯ ಅಣಕದಂತಿರುವ ಈ ನ್ಯಾಯವನ್ನು ಅನ್ಯಾಯ ಎಂದು ತಿರಸ್ಕರಿಸಲಾಗುವುದಿಲ್ಲ. ಹಾಗೆಯೇ ನ್ಯಾಯ ಎಂದು ಒಪ್ಪಿಕೊಳ್ಳುವುದು ಕೂಡ ಕಷ್ಟ.

ಈ ರೀತಿಯ ನ್ಯಾಯ ನೀಡುವ ಪ್ರಕ್ರಿಯೆಯನ್ನು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಮುಂಬೈ ಕರ್ನಾಟಕದಲ್ಲಿ ‘ಹಾವೇರಿ ನ್ಯಾಯ’ ಎಂದು ಗುರುತಿಸಲಾಗುತ್ತದೆ. ಹಾವೇರಿ ನ್ಯಾಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಮನಿಸಬೇಕು. ಕೆಲವು ಕಡೆ ಇದನ್ನು ’ಕಾಜಿ ನ್ಯಾಯ’ ಎಂದೂ ಕರೆಯಲಾಗುತ್ತದೆ. ಪತ್ನಿಯ ತಕರಾರು ಇಲ್ಲದ ಕಾರಣ ನೀಡಿ ಪತಿಗೆ ನಾಲ್ಕಕ್ಕಿಂತ ಹೆಚ್ಚು ಮದುವೆಗೆ ಅವಕಾಶ ನೀಡುವ ಪದ್ಧತಿಯಿದು. ಕೆಲವೆಡೆ ಖಾಪ್ ಪಂಚಾಯ್ತಿ ಎಂದೂ ಕರೆಯಲಾಗುತ್ತದೆ. ’ಜಿಸ್ ಲಾಠಿ ಉಸ್ ಕಾ ಭೈಂಸ್’ ಎಂಬ ಮಾತು ಕೂಡ ಇಂತಹ ನ್ಯಾಯಿಕ ಪ್ರಕ್ರಿಯೆಯ ಕಾರಣದಿಂದಾಗಿ ಹುಟ್ಟಿಕೊಂಡದ್ದು.

ನ್ಯಾಯಾಂಗದ ಬಗ್ಗೆ ಇರುವ ಎರಡು ಪ್ರಮುಖ ಸಂಗತಿಗಳನ್ನು ಇಲ್ಲಿ ಉಲ್ಲೇಖಿಸಬಹುದು. ನ್ಯಾಯ ನೀಡುವುದು ಮಾತ್ರವಲ್ಲ. ನೀಡಿದ್ದು ನ್ಯಾಯ ಎಂದು ಖಚಿತಪಡಿಸುವ ಹಾಗಿರಬೇಕು. ಮತ್ತೊಂದು ನೂರು ಅಪರಾಧಿಗಳು ತಪ್ಪಿಸಿಕೊಂಡರು ಪರವಾಯಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು. ಈ ಎರಡೂ ಮಾತುಗಳು ನ್ಯಾಯಾಂಗದ ಘನತೆ ಮತ್ತು ಅದಕ್ಕಿರುವ ಮಹತ್ವವನ್ನು ವಿವರಿಸುತ್ತವೆ.

ಬಾಬರಿ ಮಸೀದಿಯ ಕಟ್ಟಡ ಧ್ವಂಸ ಹಾಗೂ ರಾಮಲಲ್ಲಾನ ಮೂರ್ತಿ ಇಟ್ಟ ಪ್ರಕರಣಗಳನ್ನು ಕಾನೂನುಬಾಹಿರ ಎಂದು ಕರೆದಿರುವ ತೀರ್ಪು ಅದರ ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ’ಮನಸ್ಸು’ ಮಾಡಬಹುದೇ? ಅಂತಹ ಮನಸ್ಸು ಇದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...