Homeಅಂಕಣಗಳುಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಹಿಂದುಳಿದ ವರ್ಗಗಳವರು ಸಹ “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ!

- Advertisement -
- Advertisement -

| ರಘೋತ್ತಮ ಹೊ.ಬ |

“ಬಿ.ಕೆ.ಪವಿತ್ರ ಮತ್ತು ಇತರರು v/s ಭಾರತ ಸರ್ಕಾರ” ಪ್ರಕರಣಕ್ಕೆ ಸಂಬಂಧಿಸಿದಂತೆ 9-2-17ರಂದು ಸುಪ್ರೀಂ ಕೋರ್ಟ್‍ನ ಪೀಠವೊಂದು ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿಗಳ ನೌಕರಿ ಬಡ್ತಿ ಮೀಸಲಾತಿ ಕಾಯಿದೆ-2002’ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದು ಎಲ್ಲರಿಗೂ ತಿಳಿದಿದೆ. ಈ ತೀರ್ಪಿನ ಸಂದರ್ಭದಲ್ಲಿ ಇದನ್ನು ರದ್ದುಗೊಳಿಸಲಿಕ್ಕೆ ನ್ಯಾಯಾಲಯ ನೀಡಿದ್ದ ಕಾರಣ ”ಸದರಿ ವರ್ಗಗಳ(ಎಸ್ಸಿ/ಎಸ್ಟಿ) ಹಿಂದುಳಿದಿರುವಿಕೆ, ಸೇವಾದಕ್ಷತೆ ಮತ್ತು ಸಮರ್ಪಕ ಪ್ರಾತಿನಿಧ್ಯದ ಕೊರತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿಲ್ಲ” ಎಂಬುದಾಗಿತ್ತು. ಈ ನಿಟ್ಟಿನಲ್ಲಿ ಈ ಸಂಬಂಧ ಸಾಕಷ್ಟು ಹೋರಾಟಗಳು ದಲಿತ ನೌಕರರು ಮತ್ತು ಇತರ ಸಂಘಗಳಿಂದ ನಡೆದು ಸರ್ಕಾರ ಕಡೆಗೆ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಮಸೂದೆಯೊಂದನ್ನು ಸಿದ್ಧಪಡಿಸಿ, ರಾಜ್ಯಪಾಲರಿಂದ ಅದು ತಿರಸ್ಕರಿಸಲ್ಪಟ್ಟು, ರಾಷ್ಟ್ರಪತಿಗಳ ಅಂಗಳಕ್ಕೆ ಅದು ತಲುಪಿ, ಅಲ್ಲಿಂದ ಅದು ಅಂಗೀಕಾರಗೊಂಡು ಕಾನೂನಾಗಿ ಜಾರಿಯಾಯಿತು.

ದುರಂತವೆಂದರೆ ಈ ನೂತನ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲಾತಿ ವಿರೋಧಿಸುವ ‘ಅಹಿಂಸಾ’ ಸಂಘಟನೆ ಮತ್ತೆ ಸುಪ್ರೀಂ ಕೋರ್ಟಿನ ಮೊರೆ ಹೋಗಿ, ಈ ಸಂಬಂಧ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು.ಲಲಿತ್‍ರವರ ನೇತೃತ್ವದ ಪೀಠದಲ್ಲಿ ವಿಚಾರಣೆಗೊಂಡು ಈಗ ತೀರ್ಪನ್ನು ಕಂಡಿದೆ. ಸಂತಸದ ವಿಚಾರವೆಂದರೆ ನ್ಯಾಯಪೀಠ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಗೆ ಒಪ್ಪಿಗೆಯ ಮುದ್ರೆಯೊತ್ತಿದೆ, ಅದಕ್ಕೊಂದು ನೈತಿಕ ಅರ್ಥವನ್ನು ನೀಡಿದೆ. ಈ ನಿಟ್ಟಿನಲ್ಲಿ ಹೇಳುವುದಾದರೆ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ಈ ತೀರ್ಪು ಅಕ್ಷರಶಃ ಸ್ವಾಗತಾರ್ಹ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ಈ ತೀರ್ಪು ಮತ್ತೊಮ್ಮೆ ಎತ್ತಿಹಿಡಿದಿದೆ. ಅಲ್ಲದೆ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಭಾರತದ ಸಂವಿಧಾನವನ್ನು, ಅದರ ಮೂಲ ಅಂಶಗಳನ್ನು ನ್ಯಾಯಾಂಗ ರಕ್ಷಿಸುತ್ತದೆ ಎಂಬುದಕ್ಕೆ ಈ ತೀರ್ಪು ಮತ್ತೊಂದು ದಾಖಲೆಯಾಗಿ ಹೊರಬಂದಿದೆ.

ಯಾಕೆಂದರೆ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲೂ ಮೀಸಲಾತಿ, ಅದನ್ನು ಭಾರತದ ಸಂವಿಧಾನ ಅನುಚ್ಛೇಧ 16(4)(ಎ) ಬಹಳ ಸ್ಪಷ್ಟವಾಗಿ ದಾಖಲಿಸುತ್ತದೆ. ಆ ಭಾಗವನ್ನು ಇಲ್ಲಿ ಯಥಾವತ್ ಉಲ್ಲೇಖಿಸುವುದಾದರೆ “ಅನುಚ್ಛೇಧ 16(4)(ಎ): ಈ ಅನುಚ್ಛೇಧದಲ್ಲಿರುವುದು ಯಾವುದೂ ರಾಜ್ಯದ ಅಧೀನದಲ್ಲಿರುವ ಸೇವೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳವರು ಸಾಕಷ್ಟು ಪ್ರಾತಿನಿಧ್ಯವನ್ನು ಹೊಂದಿಲ್ಲವೆಂದು ರಾಜ್ಯವು ಅಭಿಪ್ರಾಯಪಟ್ಟಲ್ಲಿ, ರಾಜ್ಯದ ಅಧೀನದ ಸೇವೆಗಳಲ್ಲಿನ (ಯಾವುದೇ ವರ್ಗದ ಅಥವಾ ವರ್ಗಗಳ ಹುದ್ದೆಗಳಿಗೆ, ತತ್ಪರಿಣಾಮದ ಜ್ಯೇಷ್ಠತೆಯೊಂದಿಗೆ ಬಡ್ತಿ ವಿಷಯದಲ್ಲಿ) ಅಂಥವರಿಗಾಗಿ ಮೀಸಲಾತಿಯ ಯಾವುದೇ ಉಪಬಂಧವನ್ನು ಮಾಡಲು ರಾಜ್ಯಕ್ಕಿರುವ ಅಧಿಕಾರವನ್ನು ಪ್ರತಿಬಂಧಿಸತಕ್ಕದಲ್ಲ”. ಇದರ ಪ್ರಕಾರ ರಾಜ್ಯ ಸರ್ಕಾರ ರೂಪಿಸಿ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸದ್ಯ ಸುಪ್ರೀಂ ಅಸ್ತು ಎಂದಿರುವ ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕಾಯಿದೆ-2018’ ಅನ್ನು ಯಾರೂ ಕೂಡ ಪ್ರತಿಬಂಧಿಸಲು ಸಾಧ್ಯವಿಲ್ಲ.
ಹಾಗೆಯೇ ಅನುಚ್ಛೇಧ 16ಕ್ಕೆ 2002ರಲ್ಲಿ ಮಾಡಲಾದ 85ನೇ ತಿದ್ದುಪಡಿ ಕೂಡ “ಸದರಿ ನೌಕರ(ಎಸ್ಸಿ/ಎಸ್ಟಿ) ಬಡ್ತಿಗೊಂಡ ನಂತರವೂ ಬಡ್ತಿಗೊಂಡ ತನ್ನ ಸ್ಥಾನದಲ್ಲಿ ತತ್ಪರಿಣಾಮ ಉಂಟಾಗಬಹುದಾದ ಜ್ಯೇಷ್ಠತೆಗೆ ಅರ್ಹನಾಗುತ್ತಾನೆ” ಎಂದು ಸ್ಪಷ್ಟವಾಗಿ ಹೇಳುತ್ತದೆ. ಒಟ್ಟಾರೆ ಸಂವಿಧಾನದ ನಿಲುವುಗಳು ಇಷ್ಟೊಂದು ಸ್ಪಷ್ಟವಾಗಿರುವಾಗ ಮತ್ತು ಸಂಸತ್ತಿನ ತದನಂತರದ ಯಾವುದೇ ತಿದ್ದುಪಡಿಗಳ ಮೂಲಕವೂ ಅದು ರದ್ದುಗೊಂಡಿಲ್ಲದಿರುವಾಗ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವುದು ಯಾರಿಗಾದರೂ ಹೇಗೆ ತಾನೆ ಸಾಧ್ಯ?

ಈ ಸಂದರ್ಭದಲ್ಲಿ ತನ್ನ ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು ಲಲಿತ್‍ರವರುಗಳ ನೇತೃತ್ವದ ಪೀಠ ಮೀಸಲಾತಿಗೊಂದು ಅಪರೂಪದ ವ್ಯಾಖ್ಯಾನ ನೀಡುತ್ತಾ “ಜನತೆಯು ಯಾವ(ಸಾಮಾಜಿಕ) ಮಟ್ಟದಲ್ಲಿ ಜನಿಸಿದ್ದಾರೆ ಎಂಬುದನ್ನು ಲೆಕ್ಕಕ್ಕೆ ತೆಗೆದುಕೊಂಡು ಪರಿಣಾಮಕಾರಿ ಮತ್ತು ನೈಜಸಮಾನತೆಯ ಆಶಯವನ್ನು ಪ್ರಾಮಾಣಿಕವಾಗಿ ಈಡೇರಿಸುವುದೇ ಎಸ್ಸಿ/ಎಸ್ಟಿಗಳ ಮೀಸಲಾತಿ” ಎಂದಿದೆ. ಹಾಗೆಯೇ ಅರ್ಜಿದಾರರು ಪ್ರಸ್ತಾಪಿಸಿದ್ದ ನೌಕರರ ದಕ್ಷತೆಗೆ ಸಂಬಂಧಿಸಿದಂತೆ ಹೇಳಿರುವ ನ್ಯಾಯಪೀಠ ಈ ಸಂಬಂಧದ ಸಂವಿಧಾನ ಅನುಚ್ಛೇಧ 335ನ್ನು ಪ್ರಸ್ತಾಪಿಸುತ್ತಾ ದಕ್ಷತೆ ಅಳೆಯುವ ಒಂದೇ ಮಾನದಂಡ ಇತರರಂತೆ ಎಸ್ಸಿ/ಎಸ್ಟಿಗಳು ಕೂಡ ಆ ಹುದ್ದೆಯ ಸಂಬಂಧಿತ ಪದವಿ ಮತ್ತು ಪರೀಕ್ಷೆಗಳನ್ನು ಪಾಸುಮಾಡಿರುವುದಾಗಿರುತ್ತದೆ. ಆದ್ದರಿಂದ ಅದನ್ನು(ದಕ್ಷತೆ) ಎಲ್ಲರಿಗೂ ಅನ್ವಯಿಸುವಂತಹ ಒಂದು ತಟಸ್ಥ ಮಾನದಂಡ ಎಂದು ತೆಗೆದುಕೊಳ್ಳಬೇಕೆ ಹೊರತು ಎಸ್ಸಿ/ಎಸ್ಟಿಗಳಿಗೆ ವಿಶೇಷವಾಗಿ ಅಲ್ಲ ಎಂದಿದೆ. ಹಾಗೆಯೇ ಆಡಳಿತದಲ್ಲಿ ‘ದಕ್ಷತೆ’ ಎಂಬ ಪದವನ್ನು ಪ್ರಸ್ತಾಪಿಸುವ ಸಂವಿಧಾನದ ಅದೇ ಅನುಚ್ಛೇಧ 335ರ ಮುಂದಿನ ಭಾಗಗಳನ್ನು ಪ್ರಸ್ತಾಪಿಸಿ ನ್ಯಾಯಪೀಠ, ಆ ಮುಂದಿನ ಅಂಶಗಳಾದ “1. ಎಸ್ಸಿ/ಎಸ್ಟಿಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಅಂಕದಲ್ಲಿ ರಿಯಾಯಿತಿ ನೀಡಬೇಕು. 2. ಮೌಲ್ಯಮಾಪನ ಮಟ್ಟದಲ್ಲೂ ರಿಯಾಯಿತಿ ನೀಡಬೇಕು 3. ಬಡ್ತಿಯಲ್ಲೂ ಮೀಸಲಾತಿ ನೀಡಬೇಕು” ಎಂದಿರುವುದನ್ನು ಒತ್ತಿ ಹೇಳುತ್ತಾ, ಜೊತೆಗೆ ಯಾವುದೇ ಕಾರಣಕ್ಕೂ ಅನುಚ್ಛೇಧ 335ರಲ್ಲಿ ಪ್ರಸ್ತಾಪಿಸಿರುವ ‘ದಕ್ಷತೆ’ಯ ಆ ಅಂಶ ಎಸ್ಸಿ/ಎಸ್ಟಿಗಳ ಸದರಿ ರಿಯಾಯಿತಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತೊಂದರೆ ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ತನ್ನ ಅಭಿಪ್ರಾಯ ದಾಖಲಿಸಿದೆ. ಆ ಮೂಲಕ ಬಡ್ತಿ ಮೀಸಲಿಗೆ ಸಹಜವಾಗಿ ಅಸ್ತು ಎಂದಿದೆ.

ಈ ಸಂದರ್ಭದಲ್ಲಿ ಸಂವಿಧಾನ ರಚನೆಯ ಸಮಯದಲ್ಲಿ ಅಂದರೆ 1948 ನವೆಂಬರ್ 30ರಂದು ಸಂವಿಧಾನ ಸಭೆಯೊಳಗೆ ಚರ್ಚೆಯಲ್ಲಿ ಪಾಲ್ಗೊಂಡು ಬಾಬಾಸಾಹೇಬ್ ಅಂಬೇಡ್ಕರರು ಹೇಳುವ ಮಾತೊಂದನ್ನು ಇಲ್ಲಿ ಉಲ್ಲೇಖಿಸಬೇಕಾಗುತ್ತದೆ. ಅದೆಂದರೆ “ಆಡಳಿತದಲ್ಲಿ ಸಮಾನತೆ ಇರಬೇಕು. ಅದೇ ಸಮಯದಲ್ಲಿ ಆಡಳಿತದಲ್ಲಿ ಇದುವರೆವಿಗೂ ಸೂಕ್ತ ಅವಕಾಶವನ್ನು ಪಡೆಯದ ಕೆಲವು ವರ್ಗಗಳಿಗೆ ಮೀಸಲಾತಿಯೂ ಇರಬೇಕು”(ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.13, ಪು.392). ಅಂದಹಾಗೆ ಅಂಬೇಡ್ಕರ್‍ರವರು ಇಲ್ಲಿ ಹೇಳಿರುವಂತೆ ಉದಾಹರಣೆಗೆ ಎಸ್ಸಿ/ಎಸ್ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯೇ ಇದ್ದಿರಲಿಲ್ಲ ಎಂದುಕೊಳ್ಳುವುದಾದರೆ ಅಂತಹ ಸಮಯದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ನೌಕರಿಗಳೊಳಗೆ ಎಸ್ಸಿ/ಎಸ್ಟಿಗಳು ಬರುವುದು ಸಾಧ್ಯವಿತ್ತೇ? ಎಂದು ಕೇಳಬೇಕಾಗುತ್ತದೆ. ಯಾಕೆಂದರೆ ಸರ್ಕಾರಿ ನೌಕರಿ ಹೊರತುಪಡಿಸಿ ಮೀಸಲಾತಿ ಇಲ್ಲದ ಇತರೆ ಕ್ಷೇತ್ರಗಳಲ್ಲಿ ಅಂದರೆ ವ್ಯಾಪಾರ- ವ್ಯವಹಾರ, ಕೈಗಾರಿಕೆ, ಕೃಷಿ… ಇಲ್ಲೆಲ್ಲ ಎಸ್ಸಿ/ಎಸ್ಟಿಗಳ ಪಾಲು ಎಷ್ಟಿದೆ ಎಂದು ಯಾರಾದರೂ ಗಮನಿಸಿದರೆ ಖಂಡಿತ ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿಯ ಪ್ರಾಮುಖ್ಯತೆ ಏನು ಎಂದು ಅಂತಹವರಿಗೆ ಅರ್ಥ ಆಗಿಯೇ ಆಗುತ್ತದೆ.

ಹ್ಞಾಂ, ಈ ಸಂದರ್ಭದಲ್ಲಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲು ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿರುವವರೂ ಗಮನಿಸಬೇಕಾದ ಒಂದು ವಿಷಯವೆಂದರೆ ಅಂಥವರು ‘ಇನ್ನೊಬ್ಬರಿಗೇಕೆ ಕೊಟ್ಟಿದ್ದೀರಿ ಎನ್ನುವ ಬದಲು ನಮಗೆ ಏಕೆ ಕೊಟ್ಟಿಲ್ಲ ಎಂದು ಕೇಳುವುದು ಸೂಕ್ತವಾಗುತ್ತದೆ” ಎಂಬುದು. ಏಕೆಂದರೆ ಎಸ್ಸಿ/ಎಸ್ಟಿಗಳಂತೆ ಹಿಂದುಳಿದ ವರ್ಗಗಳಿಗೂ(ಓಬಿಸಿಗಳು) ಮಂಡಲ್ ವರದಿ ಶೇ.27ರಷ್ಟು ಉದ್ಯೋಗ ನೇಮಕಾತಿಯಲ್ಲಿ ಮೀಸಲು ನೀಡುತ್ತದೆ. ಅಂದಹಾಗೆ ಸದರಿ ವರ್ಗಗಳವರು “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ! ಆದ್ದರಿಂದ ರಾಜ್ಯ ಸರ್ಕಾರದ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಯ ನೂತನ ಕಾಯಿದೆಯ ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಅಕ್ಷರಶಃ ಮಾದರಿಯಾದುದು. ಇಡೀ ದೇಶವೇ ಇದನ್ನು ಅನುಕರಿಸು ವಂತಹದ್ದು ಎಂದು ನಿಸ್ಸಂಶಯವಾಗಿ ಹೇಳಬಹುದು.

ಇದನ್ನೂ ಓದಿ: ಬಡ್ತಿ ಮೀಸಲಾತಿಗೆ ವಿರೋಧವಿಲ್ಲ Consequential Seniority ಯ ತಾರತಮ್ಯಕ್ಕೆ ನಮ್ಮ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...