Homeಅಂಕಣಗಳುಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಹಿಂದುಳಿದ ವರ್ಗಗಳವರು ಸಹ “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ!

- Advertisement -
- Advertisement -

| ರಘೋತ್ತಮ ಹೊ.ಬ |

“ಬಿ.ಕೆ.ಪವಿತ್ರ ಮತ್ತು ಇತರರು v/s ಭಾರತ ಸರ್ಕಾರ” ಪ್ರಕರಣಕ್ಕೆ ಸಂಬಂಧಿಸಿದಂತೆ 9-2-17ರಂದು ಸುಪ್ರೀಂ ಕೋರ್ಟ್‍ನ ಪೀಠವೊಂದು ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿಗಳ ನೌಕರಿ ಬಡ್ತಿ ಮೀಸಲಾತಿ ಕಾಯಿದೆ-2002’ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದು ಎಲ್ಲರಿಗೂ ತಿಳಿದಿದೆ. ಈ ತೀರ್ಪಿನ ಸಂದರ್ಭದಲ್ಲಿ ಇದನ್ನು ರದ್ದುಗೊಳಿಸಲಿಕ್ಕೆ ನ್ಯಾಯಾಲಯ ನೀಡಿದ್ದ ಕಾರಣ ”ಸದರಿ ವರ್ಗಗಳ(ಎಸ್ಸಿ/ಎಸ್ಟಿ) ಹಿಂದುಳಿದಿರುವಿಕೆ, ಸೇವಾದಕ್ಷತೆ ಮತ್ತು ಸಮರ್ಪಕ ಪ್ರಾತಿನಿಧ್ಯದ ಕೊರತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿಲ್ಲ” ಎಂಬುದಾಗಿತ್ತು. ಈ ನಿಟ್ಟಿನಲ್ಲಿ ಈ ಸಂಬಂಧ ಸಾಕಷ್ಟು ಹೋರಾಟಗಳು ದಲಿತ ನೌಕರರು ಮತ್ತು ಇತರ ಸಂಘಗಳಿಂದ ನಡೆದು ಸರ್ಕಾರ ಕಡೆಗೆ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಮಸೂದೆಯೊಂದನ್ನು ಸಿದ್ಧಪಡಿಸಿ, ರಾಜ್ಯಪಾಲರಿಂದ ಅದು ತಿರಸ್ಕರಿಸಲ್ಪಟ್ಟು, ರಾಷ್ಟ್ರಪತಿಗಳ ಅಂಗಳಕ್ಕೆ ಅದು ತಲುಪಿ, ಅಲ್ಲಿಂದ ಅದು ಅಂಗೀಕಾರಗೊಂಡು ಕಾನೂನಾಗಿ ಜಾರಿಯಾಯಿತು.

ದುರಂತವೆಂದರೆ ಈ ನೂತನ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲಾತಿ ವಿರೋಧಿಸುವ ‘ಅಹಿಂಸಾ’ ಸಂಘಟನೆ ಮತ್ತೆ ಸುಪ್ರೀಂ ಕೋರ್ಟಿನ ಮೊರೆ ಹೋಗಿ, ಈ ಸಂಬಂಧ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು.ಲಲಿತ್‍ರವರ ನೇತೃತ್ವದ ಪೀಠದಲ್ಲಿ ವಿಚಾರಣೆಗೊಂಡು ಈಗ ತೀರ್ಪನ್ನು ಕಂಡಿದೆ. ಸಂತಸದ ವಿಚಾರವೆಂದರೆ ನ್ಯಾಯಪೀಠ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಗೆ ಒಪ್ಪಿಗೆಯ ಮುದ್ರೆಯೊತ್ತಿದೆ, ಅದಕ್ಕೊಂದು ನೈತಿಕ ಅರ್ಥವನ್ನು ನೀಡಿದೆ. ಈ ನಿಟ್ಟಿನಲ್ಲಿ ಹೇಳುವುದಾದರೆ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ಈ ತೀರ್ಪು ಅಕ್ಷರಶಃ ಸ್ವಾಗತಾರ್ಹ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ಈ ತೀರ್ಪು ಮತ್ತೊಮ್ಮೆ ಎತ್ತಿಹಿಡಿದಿದೆ. ಅಲ್ಲದೆ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಭಾರತದ ಸಂವಿಧಾನವನ್ನು, ಅದರ ಮೂಲ ಅಂಶಗಳನ್ನು ನ್ಯಾಯಾಂಗ ರಕ್ಷಿಸುತ್ತದೆ ಎಂಬುದಕ್ಕೆ ಈ ತೀರ್ಪು ಮತ್ತೊಂದು ದಾಖಲೆಯಾಗಿ ಹೊರಬಂದಿದೆ.

ಯಾಕೆಂದರೆ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲೂ ಮೀಸಲಾತಿ, ಅದನ್ನು ಭಾರತದ ಸಂವಿಧಾನ ಅನುಚ್ಛೇಧ 16(4)(ಎ) ಬಹಳ ಸ್ಪಷ್ಟವಾಗಿ ದಾಖಲಿಸುತ್ತದೆ. ಆ ಭಾಗವನ್ನು ಇಲ್ಲಿ ಯಥಾವತ್ ಉಲ್ಲೇಖಿಸುವುದಾದರೆ “ಅನುಚ್ಛೇಧ 16(4)(ಎ): ಈ ಅನುಚ್ಛೇಧದಲ್ಲಿರುವುದು ಯಾವುದೂ ರಾಜ್ಯದ ಅಧೀನದಲ್ಲಿರುವ ಸೇವೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳವರು ಸಾಕಷ್ಟು ಪ್ರಾತಿನಿಧ್ಯವನ್ನು ಹೊಂದಿಲ್ಲವೆಂದು ರಾಜ್ಯವು ಅಭಿಪ್ರಾಯಪಟ್ಟಲ್ಲಿ, ರಾಜ್ಯದ ಅಧೀನದ ಸೇವೆಗಳಲ್ಲಿನ (ಯಾವುದೇ ವರ್ಗದ ಅಥವಾ ವರ್ಗಗಳ ಹುದ್ದೆಗಳಿಗೆ, ತತ್ಪರಿಣಾಮದ ಜ್ಯೇಷ್ಠತೆಯೊಂದಿಗೆ ಬಡ್ತಿ ವಿಷಯದಲ್ಲಿ) ಅಂಥವರಿಗಾಗಿ ಮೀಸಲಾತಿಯ ಯಾವುದೇ ಉಪಬಂಧವನ್ನು ಮಾಡಲು ರಾಜ್ಯಕ್ಕಿರುವ ಅಧಿಕಾರವನ್ನು ಪ್ರತಿಬಂಧಿಸತಕ್ಕದಲ್ಲ”. ಇದರ ಪ್ರಕಾರ ರಾಜ್ಯ ಸರ್ಕಾರ ರೂಪಿಸಿ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸದ್ಯ ಸುಪ್ರೀಂ ಅಸ್ತು ಎಂದಿರುವ ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕಾಯಿದೆ-2018’ ಅನ್ನು ಯಾರೂ ಕೂಡ ಪ್ರತಿಬಂಧಿಸಲು ಸಾಧ್ಯವಿಲ್ಲ.
ಹಾಗೆಯೇ ಅನುಚ್ಛೇಧ 16ಕ್ಕೆ 2002ರಲ್ಲಿ ಮಾಡಲಾದ 85ನೇ ತಿದ್ದುಪಡಿ ಕೂಡ “ಸದರಿ ನೌಕರ(ಎಸ್ಸಿ/ಎಸ್ಟಿ) ಬಡ್ತಿಗೊಂಡ ನಂತರವೂ ಬಡ್ತಿಗೊಂಡ ತನ್ನ ಸ್ಥಾನದಲ್ಲಿ ತತ್ಪರಿಣಾಮ ಉಂಟಾಗಬಹುದಾದ ಜ್ಯೇಷ್ಠತೆಗೆ ಅರ್ಹನಾಗುತ್ತಾನೆ” ಎಂದು ಸ್ಪಷ್ಟವಾಗಿ ಹೇಳುತ್ತದೆ. ಒಟ್ಟಾರೆ ಸಂವಿಧಾನದ ನಿಲುವುಗಳು ಇಷ್ಟೊಂದು ಸ್ಪಷ್ಟವಾಗಿರುವಾಗ ಮತ್ತು ಸಂಸತ್ತಿನ ತದನಂತರದ ಯಾವುದೇ ತಿದ್ದುಪಡಿಗಳ ಮೂಲಕವೂ ಅದು ರದ್ದುಗೊಂಡಿಲ್ಲದಿರುವಾಗ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವುದು ಯಾರಿಗಾದರೂ ಹೇಗೆ ತಾನೆ ಸಾಧ್ಯ?

ಈ ಸಂದರ್ಭದಲ್ಲಿ ತನ್ನ ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು ಲಲಿತ್‍ರವರುಗಳ ನೇತೃತ್ವದ ಪೀಠ ಮೀಸಲಾತಿಗೊಂದು ಅಪರೂಪದ ವ್ಯಾಖ್ಯಾನ ನೀಡುತ್ತಾ “ಜನತೆಯು ಯಾವ(ಸಾಮಾಜಿಕ) ಮಟ್ಟದಲ್ಲಿ ಜನಿಸಿದ್ದಾರೆ ಎಂಬುದನ್ನು ಲೆಕ್ಕಕ್ಕೆ ತೆಗೆದುಕೊಂಡು ಪರಿಣಾಮಕಾರಿ ಮತ್ತು ನೈಜಸಮಾನತೆಯ ಆಶಯವನ್ನು ಪ್ರಾಮಾಣಿಕವಾಗಿ ಈಡೇರಿಸುವುದೇ ಎಸ್ಸಿ/ಎಸ್ಟಿಗಳ ಮೀಸಲಾತಿ” ಎಂದಿದೆ. ಹಾಗೆಯೇ ಅರ್ಜಿದಾರರು ಪ್ರಸ್ತಾಪಿಸಿದ್ದ ನೌಕರರ ದಕ್ಷತೆಗೆ ಸಂಬಂಧಿಸಿದಂತೆ ಹೇಳಿರುವ ನ್ಯಾಯಪೀಠ ಈ ಸಂಬಂಧದ ಸಂವಿಧಾನ ಅನುಚ್ಛೇಧ 335ನ್ನು ಪ್ರಸ್ತಾಪಿಸುತ್ತಾ ದಕ್ಷತೆ ಅಳೆಯುವ ಒಂದೇ ಮಾನದಂಡ ಇತರರಂತೆ ಎಸ್ಸಿ/ಎಸ್ಟಿಗಳು ಕೂಡ ಆ ಹುದ್ದೆಯ ಸಂಬಂಧಿತ ಪದವಿ ಮತ್ತು ಪರೀಕ್ಷೆಗಳನ್ನು ಪಾಸುಮಾಡಿರುವುದಾಗಿರುತ್ತದೆ. ಆದ್ದರಿಂದ ಅದನ್ನು(ದಕ್ಷತೆ) ಎಲ್ಲರಿಗೂ ಅನ್ವಯಿಸುವಂತಹ ಒಂದು ತಟಸ್ಥ ಮಾನದಂಡ ಎಂದು ತೆಗೆದುಕೊಳ್ಳಬೇಕೆ ಹೊರತು ಎಸ್ಸಿ/ಎಸ್ಟಿಗಳಿಗೆ ವಿಶೇಷವಾಗಿ ಅಲ್ಲ ಎಂದಿದೆ. ಹಾಗೆಯೇ ಆಡಳಿತದಲ್ಲಿ ‘ದಕ್ಷತೆ’ ಎಂಬ ಪದವನ್ನು ಪ್ರಸ್ತಾಪಿಸುವ ಸಂವಿಧಾನದ ಅದೇ ಅನುಚ್ಛೇಧ 335ರ ಮುಂದಿನ ಭಾಗಗಳನ್ನು ಪ್ರಸ್ತಾಪಿಸಿ ನ್ಯಾಯಪೀಠ, ಆ ಮುಂದಿನ ಅಂಶಗಳಾದ “1. ಎಸ್ಸಿ/ಎಸ್ಟಿಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಅಂಕದಲ್ಲಿ ರಿಯಾಯಿತಿ ನೀಡಬೇಕು. 2. ಮೌಲ್ಯಮಾಪನ ಮಟ್ಟದಲ್ಲೂ ರಿಯಾಯಿತಿ ನೀಡಬೇಕು 3. ಬಡ್ತಿಯಲ್ಲೂ ಮೀಸಲಾತಿ ನೀಡಬೇಕು” ಎಂದಿರುವುದನ್ನು ಒತ್ತಿ ಹೇಳುತ್ತಾ, ಜೊತೆಗೆ ಯಾವುದೇ ಕಾರಣಕ್ಕೂ ಅನುಚ್ಛೇಧ 335ರಲ್ಲಿ ಪ್ರಸ್ತಾಪಿಸಿರುವ ‘ದಕ್ಷತೆ’ಯ ಆ ಅಂಶ ಎಸ್ಸಿ/ಎಸ್ಟಿಗಳ ಸದರಿ ರಿಯಾಯಿತಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತೊಂದರೆ ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ತನ್ನ ಅಭಿಪ್ರಾಯ ದಾಖಲಿಸಿದೆ. ಆ ಮೂಲಕ ಬಡ್ತಿ ಮೀಸಲಿಗೆ ಸಹಜವಾಗಿ ಅಸ್ತು ಎಂದಿದೆ.

ಈ ಸಂದರ್ಭದಲ್ಲಿ ಸಂವಿಧಾನ ರಚನೆಯ ಸಮಯದಲ್ಲಿ ಅಂದರೆ 1948 ನವೆಂಬರ್ 30ರಂದು ಸಂವಿಧಾನ ಸಭೆಯೊಳಗೆ ಚರ್ಚೆಯಲ್ಲಿ ಪಾಲ್ಗೊಂಡು ಬಾಬಾಸಾಹೇಬ್ ಅಂಬೇಡ್ಕರರು ಹೇಳುವ ಮಾತೊಂದನ್ನು ಇಲ್ಲಿ ಉಲ್ಲೇಖಿಸಬೇಕಾಗುತ್ತದೆ. ಅದೆಂದರೆ “ಆಡಳಿತದಲ್ಲಿ ಸಮಾನತೆ ಇರಬೇಕು. ಅದೇ ಸಮಯದಲ್ಲಿ ಆಡಳಿತದಲ್ಲಿ ಇದುವರೆವಿಗೂ ಸೂಕ್ತ ಅವಕಾಶವನ್ನು ಪಡೆಯದ ಕೆಲವು ವರ್ಗಗಳಿಗೆ ಮೀಸಲಾತಿಯೂ ಇರಬೇಕು”(ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.13, ಪು.392). ಅಂದಹಾಗೆ ಅಂಬೇಡ್ಕರ್‍ರವರು ಇಲ್ಲಿ ಹೇಳಿರುವಂತೆ ಉದಾಹರಣೆಗೆ ಎಸ್ಸಿ/ಎಸ್ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯೇ ಇದ್ದಿರಲಿಲ್ಲ ಎಂದುಕೊಳ್ಳುವುದಾದರೆ ಅಂತಹ ಸಮಯದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ನೌಕರಿಗಳೊಳಗೆ ಎಸ್ಸಿ/ಎಸ್ಟಿಗಳು ಬರುವುದು ಸಾಧ್ಯವಿತ್ತೇ? ಎಂದು ಕೇಳಬೇಕಾಗುತ್ತದೆ. ಯಾಕೆಂದರೆ ಸರ್ಕಾರಿ ನೌಕರಿ ಹೊರತುಪಡಿಸಿ ಮೀಸಲಾತಿ ಇಲ್ಲದ ಇತರೆ ಕ್ಷೇತ್ರಗಳಲ್ಲಿ ಅಂದರೆ ವ್ಯಾಪಾರ- ವ್ಯವಹಾರ, ಕೈಗಾರಿಕೆ, ಕೃಷಿ… ಇಲ್ಲೆಲ್ಲ ಎಸ್ಸಿ/ಎಸ್ಟಿಗಳ ಪಾಲು ಎಷ್ಟಿದೆ ಎಂದು ಯಾರಾದರೂ ಗಮನಿಸಿದರೆ ಖಂಡಿತ ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿಯ ಪ್ರಾಮುಖ್ಯತೆ ಏನು ಎಂದು ಅಂತಹವರಿಗೆ ಅರ್ಥ ಆಗಿಯೇ ಆಗುತ್ತದೆ.

ಹ್ಞಾಂ, ಈ ಸಂದರ್ಭದಲ್ಲಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲು ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿರುವವರೂ ಗಮನಿಸಬೇಕಾದ ಒಂದು ವಿಷಯವೆಂದರೆ ಅಂಥವರು ‘ಇನ್ನೊಬ್ಬರಿಗೇಕೆ ಕೊಟ್ಟಿದ್ದೀರಿ ಎನ್ನುವ ಬದಲು ನಮಗೆ ಏಕೆ ಕೊಟ್ಟಿಲ್ಲ ಎಂದು ಕೇಳುವುದು ಸೂಕ್ತವಾಗುತ್ತದೆ” ಎಂಬುದು. ಏಕೆಂದರೆ ಎಸ್ಸಿ/ಎಸ್ಟಿಗಳಂತೆ ಹಿಂದುಳಿದ ವರ್ಗಗಳಿಗೂ(ಓಬಿಸಿಗಳು) ಮಂಡಲ್ ವರದಿ ಶೇ.27ರಷ್ಟು ಉದ್ಯೋಗ ನೇಮಕಾತಿಯಲ್ಲಿ ಮೀಸಲು ನೀಡುತ್ತದೆ. ಅಂದಹಾಗೆ ಸದರಿ ವರ್ಗಗಳವರು “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ! ಆದ್ದರಿಂದ ರಾಜ್ಯ ಸರ್ಕಾರದ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಯ ನೂತನ ಕಾಯಿದೆಯ ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಅಕ್ಷರಶಃ ಮಾದರಿಯಾದುದು. ಇಡೀ ದೇಶವೇ ಇದನ್ನು ಅನುಕರಿಸು ವಂತಹದ್ದು ಎಂದು ನಿಸ್ಸಂಶಯವಾಗಿ ಹೇಳಬಹುದು.

ಇದನ್ನೂ ಓದಿ: ಬಡ್ತಿ ಮೀಸಲಾತಿಗೆ ವಿರೋಧವಿಲ್ಲ Consequential Seniority ಯ ತಾರತಮ್ಯಕ್ಕೆ ನಮ್ಮ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....