Homeಅಂಕಣಗಳುಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಹಿಂದುಳಿದ ವರ್ಗಗಳವರು ಸಹ “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ!

- Advertisement -
- Advertisement -

| ರಘೋತ್ತಮ ಹೊ.ಬ |

“ಬಿ.ಕೆ.ಪವಿತ್ರ ಮತ್ತು ಇತರರು v/s ಭಾರತ ಸರ್ಕಾರ” ಪ್ರಕರಣಕ್ಕೆ ಸಂಬಂಧಿಸಿದಂತೆ 9-2-17ರಂದು ಸುಪ್ರೀಂ ಕೋರ್ಟ್‍ನ ಪೀಠವೊಂದು ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿಗಳ ನೌಕರಿ ಬಡ್ತಿ ಮೀಸಲಾತಿ ಕಾಯಿದೆ-2002’ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದು ಎಲ್ಲರಿಗೂ ತಿಳಿದಿದೆ. ಈ ತೀರ್ಪಿನ ಸಂದರ್ಭದಲ್ಲಿ ಇದನ್ನು ರದ್ದುಗೊಳಿಸಲಿಕ್ಕೆ ನ್ಯಾಯಾಲಯ ನೀಡಿದ್ದ ಕಾರಣ ”ಸದರಿ ವರ್ಗಗಳ(ಎಸ್ಸಿ/ಎಸ್ಟಿ) ಹಿಂದುಳಿದಿರುವಿಕೆ, ಸೇವಾದಕ್ಷತೆ ಮತ್ತು ಸಮರ್ಪಕ ಪ್ರಾತಿನಿಧ್ಯದ ಕೊರತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿಲ್ಲ” ಎಂಬುದಾಗಿತ್ತು. ಈ ನಿಟ್ಟಿನಲ್ಲಿ ಈ ಸಂಬಂಧ ಸಾಕಷ್ಟು ಹೋರಾಟಗಳು ದಲಿತ ನೌಕರರು ಮತ್ತು ಇತರ ಸಂಘಗಳಿಂದ ನಡೆದು ಸರ್ಕಾರ ಕಡೆಗೆ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಮಸೂದೆಯೊಂದನ್ನು ಸಿದ್ಧಪಡಿಸಿ, ರಾಜ್ಯಪಾಲರಿಂದ ಅದು ತಿರಸ್ಕರಿಸಲ್ಪಟ್ಟು, ರಾಷ್ಟ್ರಪತಿಗಳ ಅಂಗಳಕ್ಕೆ ಅದು ತಲುಪಿ, ಅಲ್ಲಿಂದ ಅದು ಅಂಗೀಕಾರಗೊಂಡು ಕಾನೂನಾಗಿ ಜಾರಿಯಾಯಿತು.

ದುರಂತವೆಂದರೆ ಈ ನೂತನ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲಾತಿ ವಿರೋಧಿಸುವ ‘ಅಹಿಂಸಾ’ ಸಂಘಟನೆ ಮತ್ತೆ ಸುಪ್ರೀಂ ಕೋರ್ಟಿನ ಮೊರೆ ಹೋಗಿ, ಈ ಸಂಬಂಧ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು.ಲಲಿತ್‍ರವರ ನೇತೃತ್ವದ ಪೀಠದಲ್ಲಿ ವಿಚಾರಣೆಗೊಂಡು ಈಗ ತೀರ್ಪನ್ನು ಕಂಡಿದೆ. ಸಂತಸದ ವಿಚಾರವೆಂದರೆ ನ್ಯಾಯಪೀಠ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಗೆ ಒಪ್ಪಿಗೆಯ ಮುದ್ರೆಯೊತ್ತಿದೆ, ಅದಕ್ಕೊಂದು ನೈತಿಕ ಅರ್ಥವನ್ನು ನೀಡಿದೆ. ಈ ನಿಟ್ಟಿನಲ್ಲಿ ಹೇಳುವುದಾದರೆ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ಈ ತೀರ್ಪು ಅಕ್ಷರಶಃ ಸ್ವಾಗತಾರ್ಹ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ಈ ತೀರ್ಪು ಮತ್ತೊಮ್ಮೆ ಎತ್ತಿಹಿಡಿದಿದೆ. ಅಲ್ಲದೆ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಭಾರತದ ಸಂವಿಧಾನವನ್ನು, ಅದರ ಮೂಲ ಅಂಶಗಳನ್ನು ನ್ಯಾಯಾಂಗ ರಕ್ಷಿಸುತ್ತದೆ ಎಂಬುದಕ್ಕೆ ಈ ತೀರ್ಪು ಮತ್ತೊಂದು ದಾಖಲೆಯಾಗಿ ಹೊರಬಂದಿದೆ.

ಯಾಕೆಂದರೆ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲೂ ಮೀಸಲಾತಿ, ಅದನ್ನು ಭಾರತದ ಸಂವಿಧಾನ ಅನುಚ್ಛೇಧ 16(4)(ಎ) ಬಹಳ ಸ್ಪಷ್ಟವಾಗಿ ದಾಖಲಿಸುತ್ತದೆ. ಆ ಭಾಗವನ್ನು ಇಲ್ಲಿ ಯಥಾವತ್ ಉಲ್ಲೇಖಿಸುವುದಾದರೆ “ಅನುಚ್ಛೇಧ 16(4)(ಎ): ಈ ಅನುಚ್ಛೇಧದಲ್ಲಿರುವುದು ಯಾವುದೂ ರಾಜ್ಯದ ಅಧೀನದಲ್ಲಿರುವ ಸೇವೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳವರು ಸಾಕಷ್ಟು ಪ್ರಾತಿನಿಧ್ಯವನ್ನು ಹೊಂದಿಲ್ಲವೆಂದು ರಾಜ್ಯವು ಅಭಿಪ್ರಾಯಪಟ್ಟಲ್ಲಿ, ರಾಜ್ಯದ ಅಧೀನದ ಸೇವೆಗಳಲ್ಲಿನ (ಯಾವುದೇ ವರ್ಗದ ಅಥವಾ ವರ್ಗಗಳ ಹುದ್ದೆಗಳಿಗೆ, ತತ್ಪರಿಣಾಮದ ಜ್ಯೇಷ್ಠತೆಯೊಂದಿಗೆ ಬಡ್ತಿ ವಿಷಯದಲ್ಲಿ) ಅಂಥವರಿಗಾಗಿ ಮೀಸಲಾತಿಯ ಯಾವುದೇ ಉಪಬಂಧವನ್ನು ಮಾಡಲು ರಾಜ್ಯಕ್ಕಿರುವ ಅಧಿಕಾರವನ್ನು ಪ್ರತಿಬಂಧಿಸತಕ್ಕದಲ್ಲ”. ಇದರ ಪ್ರಕಾರ ರಾಜ್ಯ ಸರ್ಕಾರ ರೂಪಿಸಿ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸದ್ಯ ಸುಪ್ರೀಂ ಅಸ್ತು ಎಂದಿರುವ ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕಾಯಿದೆ-2018’ ಅನ್ನು ಯಾರೂ ಕೂಡ ಪ್ರತಿಬಂಧಿಸಲು ಸಾಧ್ಯವಿಲ್ಲ.
ಹಾಗೆಯೇ ಅನುಚ್ಛೇಧ 16ಕ್ಕೆ 2002ರಲ್ಲಿ ಮಾಡಲಾದ 85ನೇ ತಿದ್ದುಪಡಿ ಕೂಡ “ಸದರಿ ನೌಕರ(ಎಸ್ಸಿ/ಎಸ್ಟಿ) ಬಡ್ತಿಗೊಂಡ ನಂತರವೂ ಬಡ್ತಿಗೊಂಡ ತನ್ನ ಸ್ಥಾನದಲ್ಲಿ ತತ್ಪರಿಣಾಮ ಉಂಟಾಗಬಹುದಾದ ಜ್ಯೇಷ್ಠತೆಗೆ ಅರ್ಹನಾಗುತ್ತಾನೆ” ಎಂದು ಸ್ಪಷ್ಟವಾಗಿ ಹೇಳುತ್ತದೆ. ಒಟ್ಟಾರೆ ಸಂವಿಧಾನದ ನಿಲುವುಗಳು ಇಷ್ಟೊಂದು ಸ್ಪಷ್ಟವಾಗಿರುವಾಗ ಮತ್ತು ಸಂಸತ್ತಿನ ತದನಂತರದ ಯಾವುದೇ ತಿದ್ದುಪಡಿಗಳ ಮೂಲಕವೂ ಅದು ರದ್ದುಗೊಂಡಿಲ್ಲದಿರುವಾಗ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವುದು ಯಾರಿಗಾದರೂ ಹೇಗೆ ತಾನೆ ಸಾಧ್ಯ?

ಈ ಸಂದರ್ಭದಲ್ಲಿ ತನ್ನ ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು ಲಲಿತ್‍ರವರುಗಳ ನೇತೃತ್ವದ ಪೀಠ ಮೀಸಲಾತಿಗೊಂದು ಅಪರೂಪದ ವ್ಯಾಖ್ಯಾನ ನೀಡುತ್ತಾ “ಜನತೆಯು ಯಾವ(ಸಾಮಾಜಿಕ) ಮಟ್ಟದಲ್ಲಿ ಜನಿಸಿದ್ದಾರೆ ಎಂಬುದನ್ನು ಲೆಕ್ಕಕ್ಕೆ ತೆಗೆದುಕೊಂಡು ಪರಿಣಾಮಕಾರಿ ಮತ್ತು ನೈಜಸಮಾನತೆಯ ಆಶಯವನ್ನು ಪ್ರಾಮಾಣಿಕವಾಗಿ ಈಡೇರಿಸುವುದೇ ಎಸ್ಸಿ/ಎಸ್ಟಿಗಳ ಮೀಸಲಾತಿ” ಎಂದಿದೆ. ಹಾಗೆಯೇ ಅರ್ಜಿದಾರರು ಪ್ರಸ್ತಾಪಿಸಿದ್ದ ನೌಕರರ ದಕ್ಷತೆಗೆ ಸಂಬಂಧಿಸಿದಂತೆ ಹೇಳಿರುವ ನ್ಯಾಯಪೀಠ ಈ ಸಂಬಂಧದ ಸಂವಿಧಾನ ಅನುಚ್ಛೇಧ 335ನ್ನು ಪ್ರಸ್ತಾಪಿಸುತ್ತಾ ದಕ್ಷತೆ ಅಳೆಯುವ ಒಂದೇ ಮಾನದಂಡ ಇತರರಂತೆ ಎಸ್ಸಿ/ಎಸ್ಟಿಗಳು ಕೂಡ ಆ ಹುದ್ದೆಯ ಸಂಬಂಧಿತ ಪದವಿ ಮತ್ತು ಪರೀಕ್ಷೆಗಳನ್ನು ಪಾಸುಮಾಡಿರುವುದಾಗಿರುತ್ತದೆ. ಆದ್ದರಿಂದ ಅದನ್ನು(ದಕ್ಷತೆ) ಎಲ್ಲರಿಗೂ ಅನ್ವಯಿಸುವಂತಹ ಒಂದು ತಟಸ್ಥ ಮಾನದಂಡ ಎಂದು ತೆಗೆದುಕೊಳ್ಳಬೇಕೆ ಹೊರತು ಎಸ್ಸಿ/ಎಸ್ಟಿಗಳಿಗೆ ವಿಶೇಷವಾಗಿ ಅಲ್ಲ ಎಂದಿದೆ. ಹಾಗೆಯೇ ಆಡಳಿತದಲ್ಲಿ ‘ದಕ್ಷತೆ’ ಎಂಬ ಪದವನ್ನು ಪ್ರಸ್ತಾಪಿಸುವ ಸಂವಿಧಾನದ ಅದೇ ಅನುಚ್ಛೇಧ 335ರ ಮುಂದಿನ ಭಾಗಗಳನ್ನು ಪ್ರಸ್ತಾಪಿಸಿ ನ್ಯಾಯಪೀಠ, ಆ ಮುಂದಿನ ಅಂಶಗಳಾದ “1. ಎಸ್ಸಿ/ಎಸ್ಟಿಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಅಂಕದಲ್ಲಿ ರಿಯಾಯಿತಿ ನೀಡಬೇಕು. 2. ಮೌಲ್ಯಮಾಪನ ಮಟ್ಟದಲ್ಲೂ ರಿಯಾಯಿತಿ ನೀಡಬೇಕು 3. ಬಡ್ತಿಯಲ್ಲೂ ಮೀಸಲಾತಿ ನೀಡಬೇಕು” ಎಂದಿರುವುದನ್ನು ಒತ್ತಿ ಹೇಳುತ್ತಾ, ಜೊತೆಗೆ ಯಾವುದೇ ಕಾರಣಕ್ಕೂ ಅನುಚ್ಛೇಧ 335ರಲ್ಲಿ ಪ್ರಸ್ತಾಪಿಸಿರುವ ‘ದಕ್ಷತೆ’ಯ ಆ ಅಂಶ ಎಸ್ಸಿ/ಎಸ್ಟಿಗಳ ಸದರಿ ರಿಯಾಯಿತಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತೊಂದರೆ ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ತನ್ನ ಅಭಿಪ್ರಾಯ ದಾಖಲಿಸಿದೆ. ಆ ಮೂಲಕ ಬಡ್ತಿ ಮೀಸಲಿಗೆ ಸಹಜವಾಗಿ ಅಸ್ತು ಎಂದಿದೆ.

ಈ ಸಂದರ್ಭದಲ್ಲಿ ಸಂವಿಧಾನ ರಚನೆಯ ಸಮಯದಲ್ಲಿ ಅಂದರೆ 1948 ನವೆಂಬರ್ 30ರಂದು ಸಂವಿಧಾನ ಸಭೆಯೊಳಗೆ ಚರ್ಚೆಯಲ್ಲಿ ಪಾಲ್ಗೊಂಡು ಬಾಬಾಸಾಹೇಬ್ ಅಂಬೇಡ್ಕರರು ಹೇಳುವ ಮಾತೊಂದನ್ನು ಇಲ್ಲಿ ಉಲ್ಲೇಖಿಸಬೇಕಾಗುತ್ತದೆ. ಅದೆಂದರೆ “ಆಡಳಿತದಲ್ಲಿ ಸಮಾನತೆ ಇರಬೇಕು. ಅದೇ ಸಮಯದಲ್ಲಿ ಆಡಳಿತದಲ್ಲಿ ಇದುವರೆವಿಗೂ ಸೂಕ್ತ ಅವಕಾಶವನ್ನು ಪಡೆಯದ ಕೆಲವು ವರ್ಗಗಳಿಗೆ ಮೀಸಲಾತಿಯೂ ಇರಬೇಕು”(ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.13, ಪು.392). ಅಂದಹಾಗೆ ಅಂಬೇಡ್ಕರ್‍ರವರು ಇಲ್ಲಿ ಹೇಳಿರುವಂತೆ ಉದಾಹರಣೆಗೆ ಎಸ್ಸಿ/ಎಸ್ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯೇ ಇದ್ದಿರಲಿಲ್ಲ ಎಂದುಕೊಳ್ಳುವುದಾದರೆ ಅಂತಹ ಸಮಯದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ನೌಕರಿಗಳೊಳಗೆ ಎಸ್ಸಿ/ಎಸ್ಟಿಗಳು ಬರುವುದು ಸಾಧ್ಯವಿತ್ತೇ? ಎಂದು ಕೇಳಬೇಕಾಗುತ್ತದೆ. ಯಾಕೆಂದರೆ ಸರ್ಕಾರಿ ನೌಕರಿ ಹೊರತುಪಡಿಸಿ ಮೀಸಲಾತಿ ಇಲ್ಲದ ಇತರೆ ಕ್ಷೇತ್ರಗಳಲ್ಲಿ ಅಂದರೆ ವ್ಯಾಪಾರ- ವ್ಯವಹಾರ, ಕೈಗಾರಿಕೆ, ಕೃಷಿ… ಇಲ್ಲೆಲ್ಲ ಎಸ್ಸಿ/ಎಸ್ಟಿಗಳ ಪಾಲು ಎಷ್ಟಿದೆ ಎಂದು ಯಾರಾದರೂ ಗಮನಿಸಿದರೆ ಖಂಡಿತ ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿಯ ಪ್ರಾಮುಖ್ಯತೆ ಏನು ಎಂದು ಅಂತಹವರಿಗೆ ಅರ್ಥ ಆಗಿಯೇ ಆಗುತ್ತದೆ.

ಹ್ಞಾಂ, ಈ ಸಂದರ್ಭದಲ್ಲಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲು ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿರುವವರೂ ಗಮನಿಸಬೇಕಾದ ಒಂದು ವಿಷಯವೆಂದರೆ ಅಂಥವರು ‘ಇನ್ನೊಬ್ಬರಿಗೇಕೆ ಕೊಟ್ಟಿದ್ದೀರಿ ಎನ್ನುವ ಬದಲು ನಮಗೆ ಏಕೆ ಕೊಟ್ಟಿಲ್ಲ ಎಂದು ಕೇಳುವುದು ಸೂಕ್ತವಾಗುತ್ತದೆ” ಎಂಬುದು. ಏಕೆಂದರೆ ಎಸ್ಸಿ/ಎಸ್ಟಿಗಳಂತೆ ಹಿಂದುಳಿದ ವರ್ಗಗಳಿಗೂ(ಓಬಿಸಿಗಳು) ಮಂಡಲ್ ವರದಿ ಶೇ.27ರಷ್ಟು ಉದ್ಯೋಗ ನೇಮಕಾತಿಯಲ್ಲಿ ಮೀಸಲು ನೀಡುತ್ತದೆ. ಅಂದಹಾಗೆ ಸದರಿ ವರ್ಗಗಳವರು “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ! ಆದ್ದರಿಂದ ರಾಜ್ಯ ಸರ್ಕಾರದ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಯ ನೂತನ ಕಾಯಿದೆಯ ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಅಕ್ಷರಶಃ ಮಾದರಿಯಾದುದು. ಇಡೀ ದೇಶವೇ ಇದನ್ನು ಅನುಕರಿಸು ವಂತಹದ್ದು ಎಂದು ನಿಸ್ಸಂಶಯವಾಗಿ ಹೇಳಬಹುದು.

ಇದನ್ನೂ ಓದಿ: ಬಡ್ತಿ ಮೀಸಲಾತಿಗೆ ವಿರೋಧವಿಲ್ಲ Consequential Seniority ಯ ತಾರತಮ್ಯಕ್ಕೆ ನಮ್ಮ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...