Homeಮುಖಪುಟಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

- Advertisement -
- Advertisement -

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್‌ ನೀಡಿದ್ದು, ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು, ಜೀವನದ ಅವಿಭಾಜ್ಯ ಅಂಗ. ಎಲ್‌ಜಿಬಿಟಿ ಸಮುದಾಯಕ್ಕೆ ಮೂಲಭೂತ ಸೌಲಭ್ಯಗಳು, ಅಗತ್ಯ ಸೇವೆಗಳನ್ನು ನಿರಾಕರಿಸಬಾರದು. ಪರೋಕ್ಷವಾಗಿ ಕೂಡ ಸಮುದಾಯದ ಸ್ವಾತಂತ್ರ್ಯ ಉಲ್ಲಂಘನೆ ಮಾಡಬಾರದು, ಅದನ್ನು ಗೌರವಿಸಬೇಕು ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನದ ಪೀಠವು 10 ದಿನಗಳ ನಿರಂತರ ವಿಚಾರಣೆಯ ನಂತರ ಮೇ 11 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇವತ್ತು ನೀಡಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು ಇದ್ದರು.

ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವುದಾಗಿದೆ. ಕ್ವೀರ್((ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್ ಅವರನ್ನು ಹೆಸರಿಸಲು ಬಳಸುವ ಪದ) ಎಂಬುವುದು ಯುಗಯುಗಾಂತರಗಳಿಂದ ತಿಳಿದಿರುವ ನೈಸರ್ಗಿಕ ವಿದ್ಯಮಾನವಾಗಿದೆ. ಸಲಿಂಗ ಆಸಕ್ತಿ ಎಂಬುವುದು ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗಗಳಿಗೆ ಸೀಮಿತವಾಗಿಲ್ಲ ಎಂದು ಕೋರ್ಟ್‌ ಹೇಳಿದೆ.

ಸಲಿಂಗ ವಿವಾಹದ ಕುರಿತು ನ್ಯಾಯಾಲಯ ಕಾನೂನು ರೂಪಿಸಲು ಸಾಧ್ಯವಿಲ್ಲ. ಆದರೆ ರೂಪಿಸಿದ ಕಾನೂನನ್ನು ವ್ಯಾಖ್ಯಾನಿಸಬಹುದು ಮತ್ತು ಪರಿಣಾಮವನ್ನು ಬೀರಬಹುದು. ವಿಶೇಷ ವಿವಾಹ ಕಾಯಿದೆಯಲ್ಲಿನ ಬದಲಾವಣೆಯನ್ನು ಸಂಸತ್ತು ನಿರ್ಧರಿಸಬೇಕು. ಈ ನ್ಯಾಯಾಲಯವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಪ್ರೀತಿ ಮತ್ತು ಸಂಪರ್ಕವು ನಮ್ಮನ್ನು ಮನುಷ್ಯರನ್ನಾಗಿ ಮಾಡುತ್ತದೆ. ನಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಅಗತ್ಯವು ನಮ್ಮನ್ನು ನಾವಾಗುವಂತೆ ಮಾಡುತ್ತದೆ. ಈ ಸಂಬಂಧಗಳು ಹಲವು ರೂಪಗಳನ್ನು ತೆಗೆದುಕೊಳ್ಳಬಹುದು, ರೊಮ್ಯಾಂಟಿಕ್‌, ರಿಲೇಷನ್‌ಶಿಪ್‌ಗಳು ಕೂಡ ಇರಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಆರ್ಟಿಕಲ್ 21ರ ಅಡಿಯಲ್ಲಿದೆ. ಸಲಿಂಗ ವಿವಾಹ ಕುರಿತು ಕಳವಳ ಪರಿಹರಿಸಲು ಕೇಂದ್ರವು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಸಮಿತಿ ರಚಿಸಬೇಕು. ಪಡಿತರ ಚೀಟಿಗಳು, ಪಿಂಚಣಿ, ಉತ್ತರಾಧಿಕಾರ ಸೇರಿದಂತೆ ಎಲ್ಲದಕ್ಕೂ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಸಮುದಾಯದ ಕುರಿತಂತೆ ತಾರತಮ್ಯ ಮಾಡಬಾರದು. ಲಿಂಗದ ಗುರುತಿನ ಬಗ್ಗೆ ವಿಚಾರಿಸಲೆಂದು ಠಾಣೆಗೆ ಬರಲು ಹೇಳಿ ಎಲ್‌ಜಿಬಿಟಿ ಸಮುದಾಯಕ್ಕೆ ಯಾವುದೇ ಕಿರುಕುಳ ನೀಡಬಾರದು. ತಮ್ಮ ಹೆತ್ತವರ ಕುಟುಂಬಕ್ಕೆ ಮರಳುವಂತೆ ಕ್ವೀರ್ ಸಮುದಾಯದವರಿಗೆ ಪೊಲೀಸರು ಬಲವಂತಪಡಿಸುವಂತಿಲ್ಲ. ಸಾರ್ವಜನಿಕರಿಗೆ ಕ್ವೀರ್ ಸಮುದಾಯದವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸಮುದಾಯಕಕೆ ಸುರಕ್ಷಿತ ತಾಣಗಳನ್ನು ನಿರ್ಮಿಸಬೇಕು. ತೃತೀಯ ಲಿಂಗಿ ಮಕ್ಕಳಿಗೆ ಶಸ್ತ್ರಕ್ರಿಯೆಗೆ ಬಲವಂತಪಡಿಸಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ವಿಶೇಷ ವಿವಾಹ ಕಾಯಿದೆ (SMA) ಅಡಿಯಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ದಂಪತಿ ಅರ್ಜಿಯನ್ನು ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ  ಸರಿಯಾದ ಕ್ರಮವಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಏಕೆಂದರೆ ನ್ಯಾಯಾಲಯವು ಅದರ ಪರಿಣಾಮಗಳನ್ನು ಊಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತ್ತು. ಸಲಿಂಗ ವಿವಾಹದ ವಿಷಯದ ಬಗ್ಗೆ ಏಳು ರಾಜ್ಯಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು. ರಾಜಸ್ಥಾನ, ಆಂಧ್ರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಅಂತಹ ವಿವಾಹಕ್ಕೆ ಕಾನೂನು ಅನುಮೋದನೆ ಕೋರಿದ್ದ ಅರ್ಜಿದಾರರ ವಾದವನ್ನು ವಿರೋಧಿಸಿವೆ.

ಇದನ್ನು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...