Homeಮುಖಪುಟಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

- Advertisement -
- Advertisement -

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್‌ ನೀಡಿದ್ದು, ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು, ಜೀವನದ ಅವಿಭಾಜ್ಯ ಅಂಗ. ಎಲ್‌ಜಿಬಿಟಿ ಸಮುದಾಯಕ್ಕೆ ಮೂಲಭೂತ ಸೌಲಭ್ಯಗಳು, ಅಗತ್ಯ ಸೇವೆಗಳನ್ನು ನಿರಾಕರಿಸಬಾರದು. ಪರೋಕ್ಷವಾಗಿ ಕೂಡ ಸಮುದಾಯದ ಸ್ವಾತಂತ್ರ್ಯ ಉಲ್ಲಂಘನೆ ಮಾಡಬಾರದು, ಅದನ್ನು ಗೌರವಿಸಬೇಕು ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನದ ಪೀಠವು 10 ದಿನಗಳ ನಿರಂತರ ವಿಚಾರಣೆಯ ನಂತರ ಮೇ 11 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇವತ್ತು ನೀಡಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು ಇದ್ದರು.

ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವುದಾಗಿದೆ. ಕ್ವೀರ್((ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್ ಅವರನ್ನು ಹೆಸರಿಸಲು ಬಳಸುವ ಪದ) ಎಂಬುವುದು ಯುಗಯುಗಾಂತರಗಳಿಂದ ತಿಳಿದಿರುವ ನೈಸರ್ಗಿಕ ವಿದ್ಯಮಾನವಾಗಿದೆ. ಸಲಿಂಗ ಆಸಕ್ತಿ ಎಂಬುವುದು ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗಗಳಿಗೆ ಸೀಮಿತವಾಗಿಲ್ಲ ಎಂದು ಕೋರ್ಟ್‌ ಹೇಳಿದೆ.

ಸಲಿಂಗ ವಿವಾಹದ ಕುರಿತು ನ್ಯಾಯಾಲಯ ಕಾನೂನು ರೂಪಿಸಲು ಸಾಧ್ಯವಿಲ್ಲ. ಆದರೆ ರೂಪಿಸಿದ ಕಾನೂನನ್ನು ವ್ಯಾಖ್ಯಾನಿಸಬಹುದು ಮತ್ತು ಪರಿಣಾಮವನ್ನು ಬೀರಬಹುದು. ವಿಶೇಷ ವಿವಾಹ ಕಾಯಿದೆಯಲ್ಲಿನ ಬದಲಾವಣೆಯನ್ನು ಸಂಸತ್ತು ನಿರ್ಧರಿಸಬೇಕು. ಈ ನ್ಯಾಯಾಲಯವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಪ್ರೀತಿ ಮತ್ತು ಸಂಪರ್ಕವು ನಮ್ಮನ್ನು ಮನುಷ್ಯರನ್ನಾಗಿ ಮಾಡುತ್ತದೆ. ನಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಅಗತ್ಯವು ನಮ್ಮನ್ನು ನಾವಾಗುವಂತೆ ಮಾಡುತ್ತದೆ. ಈ ಸಂಬಂಧಗಳು ಹಲವು ರೂಪಗಳನ್ನು ತೆಗೆದುಕೊಳ್ಳಬಹುದು, ರೊಮ್ಯಾಂಟಿಕ್‌, ರಿಲೇಷನ್‌ಶಿಪ್‌ಗಳು ಕೂಡ ಇರಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಆರ್ಟಿಕಲ್ 21ರ ಅಡಿಯಲ್ಲಿದೆ. ಸಲಿಂಗ ವಿವಾಹ ಕುರಿತು ಕಳವಳ ಪರಿಹರಿಸಲು ಕೇಂದ್ರವು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಸಮಿತಿ ರಚಿಸಬೇಕು. ಪಡಿತರ ಚೀಟಿಗಳು, ಪಿಂಚಣಿ, ಉತ್ತರಾಧಿಕಾರ ಸೇರಿದಂತೆ ಎಲ್ಲದಕ್ಕೂ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಸಮುದಾಯದ ಕುರಿತಂತೆ ತಾರತಮ್ಯ ಮಾಡಬಾರದು. ಲಿಂಗದ ಗುರುತಿನ ಬಗ್ಗೆ ವಿಚಾರಿಸಲೆಂದು ಠಾಣೆಗೆ ಬರಲು ಹೇಳಿ ಎಲ್‌ಜಿಬಿಟಿ ಸಮುದಾಯಕ್ಕೆ ಯಾವುದೇ ಕಿರುಕುಳ ನೀಡಬಾರದು. ತಮ್ಮ ಹೆತ್ತವರ ಕುಟುಂಬಕ್ಕೆ ಮರಳುವಂತೆ ಕ್ವೀರ್ ಸಮುದಾಯದವರಿಗೆ ಪೊಲೀಸರು ಬಲವಂತಪಡಿಸುವಂತಿಲ್ಲ. ಸಾರ್ವಜನಿಕರಿಗೆ ಕ್ವೀರ್ ಸಮುದಾಯದವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸಮುದಾಯಕಕೆ ಸುರಕ್ಷಿತ ತಾಣಗಳನ್ನು ನಿರ್ಮಿಸಬೇಕು. ತೃತೀಯ ಲಿಂಗಿ ಮಕ್ಕಳಿಗೆ ಶಸ್ತ್ರಕ್ರಿಯೆಗೆ ಬಲವಂತಪಡಿಸಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ವಿಶೇಷ ವಿವಾಹ ಕಾಯಿದೆ (SMA) ಅಡಿಯಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ದಂಪತಿ ಅರ್ಜಿಯನ್ನು ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ  ಸರಿಯಾದ ಕ್ರಮವಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಏಕೆಂದರೆ ನ್ಯಾಯಾಲಯವು ಅದರ ಪರಿಣಾಮಗಳನ್ನು ಊಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತ್ತು. ಸಲಿಂಗ ವಿವಾಹದ ವಿಷಯದ ಬಗ್ಗೆ ಏಳು ರಾಜ್ಯಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು. ರಾಜಸ್ಥಾನ, ಆಂಧ್ರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಅಂತಹ ವಿವಾಹಕ್ಕೆ ಕಾನೂನು ಅನುಮೋದನೆ ಕೋರಿದ್ದ ಅರ್ಜಿದಾರರ ವಾದವನ್ನು ವಿರೋಧಿಸಿವೆ.

ಇದನ್ನು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...