Homeಮುಖಪುಟಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗ ವಿವಾಹ: ಜೀವನ ಸಂಗಾತಿ ಆಯ್ಕೆ ಜೀವನದ ಅವಿಭಾಜ್ಯ ಅಂಗ; ಸುಪ್ರೀಂಕೋರ್ಟ್‌ ತೀರ್ಪು

- Advertisement -
- Advertisement -

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್‌ ನೀಡಿದ್ದು, ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು, ಜೀವನದ ಅವಿಭಾಜ್ಯ ಅಂಗ. ಎಲ್‌ಜಿಬಿಟಿ ಸಮುದಾಯಕ್ಕೆ ಮೂಲಭೂತ ಸೌಲಭ್ಯಗಳು, ಅಗತ್ಯ ಸೇವೆಗಳನ್ನು ನಿರಾಕರಿಸಬಾರದು. ಪರೋಕ್ಷವಾಗಿ ಕೂಡ ಸಮುದಾಯದ ಸ್ವಾತಂತ್ರ್ಯ ಉಲ್ಲಂಘನೆ ಮಾಡಬಾರದು, ಅದನ್ನು ಗೌರವಿಸಬೇಕು ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನದ ಪೀಠವು 10 ದಿನಗಳ ನಿರಂತರ ವಿಚಾರಣೆಯ ನಂತರ ಮೇ 11 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇವತ್ತು ನೀಡಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು ಇದ್ದರು.

ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವುದಾಗಿದೆ. ಕ್ವೀರ್((ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್ ಅವರನ್ನು ಹೆಸರಿಸಲು ಬಳಸುವ ಪದ) ಎಂಬುವುದು ಯುಗಯುಗಾಂತರಗಳಿಂದ ತಿಳಿದಿರುವ ನೈಸರ್ಗಿಕ ವಿದ್ಯಮಾನವಾಗಿದೆ. ಸಲಿಂಗ ಆಸಕ್ತಿ ಎಂಬುವುದು ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗಗಳಿಗೆ ಸೀಮಿತವಾಗಿಲ್ಲ ಎಂದು ಕೋರ್ಟ್‌ ಹೇಳಿದೆ.

ಸಲಿಂಗ ವಿವಾಹದ ಕುರಿತು ನ್ಯಾಯಾಲಯ ಕಾನೂನು ರೂಪಿಸಲು ಸಾಧ್ಯವಿಲ್ಲ. ಆದರೆ ರೂಪಿಸಿದ ಕಾನೂನನ್ನು ವ್ಯಾಖ್ಯಾನಿಸಬಹುದು ಮತ್ತು ಪರಿಣಾಮವನ್ನು ಬೀರಬಹುದು. ವಿಶೇಷ ವಿವಾಹ ಕಾಯಿದೆಯಲ್ಲಿನ ಬದಲಾವಣೆಯನ್ನು ಸಂಸತ್ತು ನಿರ್ಧರಿಸಬೇಕು. ಈ ನ್ಯಾಯಾಲಯವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಪ್ರೀತಿ ಮತ್ತು ಸಂಪರ್ಕವು ನಮ್ಮನ್ನು ಮನುಷ್ಯರನ್ನಾಗಿ ಮಾಡುತ್ತದೆ. ನಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಅಗತ್ಯವು ನಮ್ಮನ್ನು ನಾವಾಗುವಂತೆ ಮಾಡುತ್ತದೆ. ಈ ಸಂಬಂಧಗಳು ಹಲವು ರೂಪಗಳನ್ನು ತೆಗೆದುಕೊಳ್ಳಬಹುದು, ರೊಮ್ಯಾಂಟಿಕ್‌, ರಿಲೇಷನ್‌ಶಿಪ್‌ಗಳು ಕೂಡ ಇರಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಆರ್ಟಿಕಲ್ 21ರ ಅಡಿಯಲ್ಲಿದೆ. ಸಲಿಂಗ ವಿವಾಹ ಕುರಿತು ಕಳವಳ ಪರಿಹರಿಸಲು ಕೇಂದ್ರವು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಸಮಿತಿ ರಚಿಸಬೇಕು. ಪಡಿತರ ಚೀಟಿಗಳು, ಪಿಂಚಣಿ, ಉತ್ತರಾಧಿಕಾರ ಸೇರಿದಂತೆ ಎಲ್ಲದಕ್ಕೂ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಸಮುದಾಯದ ಕುರಿತಂತೆ ತಾರತಮ್ಯ ಮಾಡಬಾರದು. ಲಿಂಗದ ಗುರುತಿನ ಬಗ್ಗೆ ವಿಚಾರಿಸಲೆಂದು ಠಾಣೆಗೆ ಬರಲು ಹೇಳಿ ಎಲ್‌ಜಿಬಿಟಿ ಸಮುದಾಯಕ್ಕೆ ಯಾವುದೇ ಕಿರುಕುಳ ನೀಡಬಾರದು. ತಮ್ಮ ಹೆತ್ತವರ ಕುಟುಂಬಕ್ಕೆ ಮರಳುವಂತೆ ಕ್ವೀರ್ ಸಮುದಾಯದವರಿಗೆ ಪೊಲೀಸರು ಬಲವಂತಪಡಿಸುವಂತಿಲ್ಲ. ಸಾರ್ವಜನಿಕರಿಗೆ ಕ್ವೀರ್ ಸಮುದಾಯದವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸಮುದಾಯಕಕೆ ಸುರಕ್ಷಿತ ತಾಣಗಳನ್ನು ನಿರ್ಮಿಸಬೇಕು. ತೃತೀಯ ಲಿಂಗಿ ಮಕ್ಕಳಿಗೆ ಶಸ್ತ್ರಕ್ರಿಯೆಗೆ ಬಲವಂತಪಡಿಸಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ವಿಶೇಷ ವಿವಾಹ ಕಾಯಿದೆ (SMA) ಅಡಿಯಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ದಂಪತಿ ಅರ್ಜಿಯನ್ನು ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ  ಸರಿಯಾದ ಕ್ರಮವಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಏಕೆಂದರೆ ನ್ಯಾಯಾಲಯವು ಅದರ ಪರಿಣಾಮಗಳನ್ನು ಊಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತ್ತು. ಸಲಿಂಗ ವಿವಾಹದ ವಿಷಯದ ಬಗ್ಗೆ ಏಳು ರಾಜ್ಯಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು. ರಾಜಸ್ಥಾನ, ಆಂಧ್ರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಅಂತಹ ವಿವಾಹಕ್ಕೆ ಕಾನೂನು ಅನುಮೋದನೆ ಕೋರಿದ್ದ ಅರ್ಜಿದಾರರ ವಾದವನ್ನು ವಿರೋಧಿಸಿವೆ.

ಇದನ್ನು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...