Homeಮುಖಪುಟಜಾತಿ ಗಣತಿ ಪ್ರಕಟಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ತಡೆಯುವುದಿಲ್ಲ: ಸುಪ್ರೀಂ

ಜಾತಿ ಗಣತಿ ಪ್ರಕಟಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ತಡೆಯುವುದಿಲ್ಲ: ಸುಪ್ರೀಂ

- Advertisement -
- Advertisement -

ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ವಿಚಾರದಲ್ಲಿ ಬಿಹಾರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಮುನ್ನಡೆ ಸಾಧಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಅ.6) ಹೇಳಿದೆ.

ಜಾತಿ ಸಮೀಕ್ಷೆಯ ಹೆಚ್ಚಿನ ಡೇಟಾವನ್ನು ಪ್ರಕಟಿಸದಂತೆ ಬಿಹಾರ ಸರ್ಕಾರವನ್ನು ನಿರ್ಬಂಧಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಒಂದು ರಾಜ್ಯವು ನೀತಿ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯುವುದು ತಪ್ಪು ಎಂದು ಹೇಳಿದೆ.

ಕೆಲವು ಅಂಕಿಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಿರಸ್ಕರಿಸಿತು ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂದು ಒತ್ತಾಯಿಸಿತು.

ಜಾತಿ ವರದಿ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರವು ಜಾತಿ ಗಣತಿಯ ಮಾಹಿತಿಯನ್ನು ಪ್ರಕಟಿಸುವುದನ್ನು ತಡೆಯವುದಿಲ್ಲ. ರಾಜ್ಯ ಸರ್ಕಾರ ಅಥವಾ ಯಾವುದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅದು ತಪ್ಪಾಗುತ್ತದೆ. ಆದರೆ, ಜಾತಿ ಆಧಾರಿತ ಸಮೀಕ್ಷೆಯ ದತ್ತಾಂಶಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ತಿಳಿಸಿದೆ.

ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಸಂಬಂಧಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಜನವರಿ 2024ಕ್ಕೆ ಮುಂದಿನ ವಿಚಾರಣೆಯನ್ನು ಪಟ್ಟಿ ಮಾಡಿದೆ ಮತ್ತು ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅಂಕಿ-ಅಂಶಗಳ ಪ್ರಕಟಣೆಯಿಂದಾಗಿ ಉದ್ಭವಿಸಿರುವ ಸಮಸ್ಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕೆಲವು ಅಂಕಿ-ಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಳ್ಳಿಹಾಕಿದೆ.

ಬಹುನಿರೀಕ್ಷಿತ ಬಿಹಾರದ ಜಾತಿ ಆಧಾರಿತ ಜನಗಣತಿಯ ಫಲಿತಾಂಶವನ್ನು ಸರ್ಕಾರ ಕಳೆದ ಸೋಮವಾರ ಪ್ರಕಟಿಸಿತ್ತು. ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಗಣತಿ ವರದಿಯಲ್ಲಿ ರಾಜ್ಯದ 13.1 ಕೋಟಿ ಜನಸಂಖ್ಯೆಯಲ್ಲಿ 36% ಅತ್ಯಂತ ಹಿಂದುಳಿದ ವರ್ಗಗಳಿಗೆ, 27.1% ಹಿಂದುಳಿದ ವರ್ಗಗಳಿಗೆ, 19.7% ಪರಿಶಿಷ್ಟ ಜಾತಿಗಳಿಗೆ ಮತ್ತು 1.7% ಪರಿಶಿಷ್ಟ ಪಂಗಡಗಳಿಗೆ ಸೇರಿದೆ ಎಂದು ಬಿಹಾರ ಸರ್ಕಾರ ಹೇಳಿದೆ. ಅಲ್ಲದೆ, ಸಾಮಾನ್ಯ ಜನಸಂಖ್ಯೆಯು 15.5% ರಷ್ಟಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...