Homeಮುಖಪುಟಜಾತಿ ಗಣತಿ ಪ್ರಕಟಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ತಡೆಯುವುದಿಲ್ಲ: ಸುಪ್ರೀಂ

ಜಾತಿ ಗಣತಿ ಪ್ರಕಟಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ತಡೆಯುವುದಿಲ್ಲ: ಸುಪ್ರೀಂ

- Advertisement -
- Advertisement -

ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ವಿಚಾರದಲ್ಲಿ ಬಿಹಾರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಮುನ್ನಡೆ ಸಾಧಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಅ.6) ಹೇಳಿದೆ.

ಜಾತಿ ಸಮೀಕ್ಷೆಯ ಹೆಚ್ಚಿನ ಡೇಟಾವನ್ನು ಪ್ರಕಟಿಸದಂತೆ ಬಿಹಾರ ಸರ್ಕಾರವನ್ನು ನಿರ್ಬಂಧಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಒಂದು ರಾಜ್ಯವು ನೀತಿ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯುವುದು ತಪ್ಪು ಎಂದು ಹೇಳಿದೆ.

ಕೆಲವು ಅಂಕಿಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಿರಸ್ಕರಿಸಿತು ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂದು ಒತ್ತಾಯಿಸಿತು.

ಜಾತಿ ವರದಿ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರವು ಜಾತಿ ಗಣತಿಯ ಮಾಹಿತಿಯನ್ನು ಪ್ರಕಟಿಸುವುದನ್ನು ತಡೆಯವುದಿಲ್ಲ. ರಾಜ್ಯ ಸರ್ಕಾರ ಅಥವಾ ಯಾವುದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅದು ತಪ್ಪಾಗುತ್ತದೆ. ಆದರೆ, ಜಾತಿ ಆಧಾರಿತ ಸಮೀಕ್ಷೆಯ ದತ್ತಾಂಶಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ತಿಳಿಸಿದೆ.

ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಸಂಬಂಧಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಜನವರಿ 2024ಕ್ಕೆ ಮುಂದಿನ ವಿಚಾರಣೆಯನ್ನು ಪಟ್ಟಿ ಮಾಡಿದೆ ಮತ್ತು ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅಂಕಿ-ಅಂಶಗಳ ಪ್ರಕಟಣೆಯಿಂದಾಗಿ ಉದ್ಭವಿಸಿರುವ ಸಮಸ್ಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕೆಲವು ಅಂಕಿ-ಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಳ್ಳಿಹಾಕಿದೆ.

ಬಹುನಿರೀಕ್ಷಿತ ಬಿಹಾರದ ಜಾತಿ ಆಧಾರಿತ ಜನಗಣತಿಯ ಫಲಿತಾಂಶವನ್ನು ಸರ್ಕಾರ ಕಳೆದ ಸೋಮವಾರ ಪ್ರಕಟಿಸಿತ್ತು. ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಗಣತಿ ವರದಿಯಲ್ಲಿ ರಾಜ್ಯದ 13.1 ಕೋಟಿ ಜನಸಂಖ್ಯೆಯಲ್ಲಿ 36% ಅತ್ಯಂತ ಹಿಂದುಳಿದ ವರ್ಗಗಳಿಗೆ, 27.1% ಹಿಂದುಳಿದ ವರ್ಗಗಳಿಗೆ, 19.7% ಪರಿಶಿಷ್ಟ ಜಾತಿಗಳಿಗೆ ಮತ್ತು 1.7% ಪರಿಶಿಷ್ಟ ಪಂಗಡಗಳಿಗೆ ಸೇರಿದೆ ಎಂದು ಬಿಹಾರ ಸರ್ಕಾರ ಹೇಳಿದೆ. ಅಲ್ಲದೆ, ಸಾಮಾನ್ಯ ಜನಸಂಖ್ಯೆಯು 15.5% ರಷ್ಟಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...