Homeಕರ್ನಾಟಕಮಾರ್ಕಂಡೇಯ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಗ್ರೀನ್‌ ಸಿಗ್ನಲ್‌ : ತಮಿಳುನಾಡು ವಾದ ತಳ್ಳಿಹಾಕಿದ ಸುಪ್ರೀಂ

ಮಾರ್ಕಂಡೇಯ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಗ್ರೀನ್‌ ಸಿಗ್ನಲ್‌ : ತಮಿಳುನಾಡು ವಾದ ತಳ್ಳಿಹಾಕಿದ ಸುಪ್ರೀಂ

- Advertisement -
- Advertisement -

ಥೆನ್ಪೆನ್ನೈ ನದಿಯ ಮಾರ್ಕಂಡೇಯ ಉಪನದಿಗೆ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನಗಳನ್ನು ತಡೆಹಿಡಿಯಬೇಕೆಂದು ಕೋರಿದ್ದ ತಮಿಳುನಾಡು ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ..

ಥೆನ್ಪೆನ್ನೈ ನದಿ ಅಥವಾ ದಕ್ಷಿಣ ಪೆನ್ನಾರ್ ನದಿ ಕರ್ನಾಟಕದಲ್ಲಿ ಹುಟ್ಟಿ ಕೃಷ್ಣಗಿರಿ, ತಿರುವಣ್ಣಾಮಲೈ, ವಿಲ್ಲುಪುರಂ ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳ ಮೂಲಕ ಹರಿದು ಬಂಗಾಳಕೊಲ್ಲಿ ಸೇರುತ್ತದೆ.

ಮಾರ್ಕಂಡೇಯ ನದಿಯು ಥೆನ್ಪೆನ್ನೈ ನದಿಯ ಉಪನದಿಯಾಗಿದ್ದು, ಇದು ತಮಿಳುನಾಡಿನೊಳಗೆ ಸುಮಾರು 30 ಕಿಲೋಮೀಟರ್ ಪ್ರಯಾಣಿಸಿದ ನಂತರ ಕೃಷ್ಣಗಿರಿ ಜಲಾಶಯದ ಬಳಿ ಮುಖ್ಯ ನದಿಯನ್ನು ಸೇರುತ್ತದೆ.

ಥೆನ್ಪೆನ್ನೈ ನೀರನ್ನು ಬಳಸುವಲ್ಲಿ ರಾಜ್ಯಗಳ ಹಕ್ಕುಗಳನ್ನು ತಮಿಳುನಾಡು ಮತ್ತು ಕರ್ನಾಟಕದ ಹಿಂದಿನ ರಾಜ್ಯಗಳಾದ ಮದ್ರಾಸ್ ರಾಜ್ಯ ಮತ್ತು ಮೈಸೂರು ನಡುವೆ 1892 ರಲ್ಲಿ ಮಾಡಿಕೊಂಡ ಒಪ್ಪಂದದಲ್ಲಿ ನೋಡಬಹುದಾಗಿದೆ. ಈ ಒಪ್ಪಂದವನ್ನು 1933 ರಲ್ಲಿ ಮಾರ್ಪಡಿಸಲಾಗಿದೆ.

ಮಾಲೂರು, ಕೋಲಾರ ಮತ್ತು ಬಂಗಾರಪೇಟೆ ಪಟ್ಟಣಗಳು ​​ಮತ್ತು ನದಿಯ ಹಾದಿಯಲ್ಲಿರುವ 45 ಹಳ್ಳಿಗಳ ಕುಡಿಯುವ ನೀರಿನ ಅವಶ್ಯಕತೆಗಳನ್ನು ಪೂರೈಸುವ ಸಲುವಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮಾರ್ಕಂಡೇಯ ನದಿಗೆ ಅಡ್ಡಲಾಗಿ 500 Mcft ಶೇಖರಣಾ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸುತ್ತಿದೆ.

ಬಂಗಾರಪೇಟೆ ತಾಲ್ಲೂಕಿನ ಯಾರ್ಗೋಲ್ ಗ್ರಾಮದ ಸಮೀಪವಿರುವ ಮಾರ್ಕಂಡೇಯ ಅಣೆಕಟ್ಟು ಯೋಜನೆಗೆ 2007 ರಲ್ಲಿ 240 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಮೋದನೆ ನೀಡಲಾಯಿತು. 240 ಕೋಟಿ ರೂ.ಗಳಲ್ಲಿ 160 ಕೋಟಿ ರೂ.ಗಳನ್ನು ಕರ್ನಾಟಕ ಸರ್ಕಾರದಿಂದ ಮತ್ತು 79.92 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಬೇಕಿದೆ.

ಕರ್ನಾಟಕ ಸರ್ಕಾರವು 2013ರಲ್ಲಿ ಅಣೆಕಟ್ಟಿನ ನಿರ್ಮಾಣವನ್ನು ಪ್ರಾರಂಭಿಸಿದ್ದು 75-80% ಪೂರ್ಣಗೊಂಡಿದೆ ಎಂದು ಕರ್ನಾಟಕ ಸರ್ಕಾರದ ವಕೀಲರು ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ತಮಿಳುನಾಡು ಮತ್ತು ಕರ್ನಾಟಕದ ನಡುವಿನ ವಿವಾದ

ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣವು ತಮಿಳುನಾಡಿಗೆ ನೀರಿನ ಹರಿವನ್ನು ನಿಲ್ಲಿಸುತ್ತದೆ, ಇದರಿಂದಾಗಿ ಕೃಷ್ಣಗಿರಿ, ಧರ್ಮಪುರಿ, ತಿರುವಣ್ಣಾಮಲೈ, ವಿಲ್ಲುಪುರಂ ಮತ್ತು ಕಡಲೂರಿನಲ್ಲಿ ವಾಸಿಸುವ ರೈತರ ಜೀವನೋಪಾಯಕ್ಕೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ತಮಿಳುನಾಡು ಸರ್ಕಾರ ಆರೋಪಿಸಿದೆ.

1892 ರ ಒಪ್ಪಂದದ ಷರತ್ತುಗಳ ಪ್ರಕಾರ ಕರ್ನಾಟಕವು ತಮಿಳುನಾಡಿನ ಒಪ್ಪಿಗೆಯಿಲ್ಲದೆ ಯಾವುದೇ ಹೊಸ ನೀರಾವರಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗಿಲ್ಲ ಎಂದು ತಮಿಳುನಾಡಿನ ವಕೀಲರು ಹೇಳಿದ್ದಾರೆ.

ಏತನ್ಮಧ್ಯೆ, ಕರ್ನಾಟಕ ಸರ್ಕಾರವು 1892 ಮತ್ತು 1933 ರ ಎರಡೂ ಒಪ್ಪಂದಗಳ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ವಾದಿಸಿತು. ಯಾವುದೇ ನೀರಾವರಿ ಅಥವಾ ಇನ್ನಿತರ ವಾಣಿಜ್ಯ ಉದ್ದೇಶಗಳಿಗಾಗಿ ಅಣೆಕಟ್ಟು ನಿರ್ಮಾಣಕ್ಕೆ ಮಾತ್ರ ಮದ್ರಾಸ್ ಸರ್ಕಾರದ ಒಪ್ಪಿಗೆ ಪಡೆಯಬೇಕಾಗಿದೆ. ಒಪ್ಪಂದದ ಪ್ರಕಾರ, ನಾವು ಕುಡಿಯುವ ನೀರು ಸರಬರಾಜುಗಾಗಿ ಅಣೆಕಟ್ಟು ನಿರ್ಮಿಸುತ್ತಿರುವುದರಿಂದ ತಮಿಳುನಾಡಿನಿಂದ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ವಾದಿಸಿದರು.

ಈ ನದಿಯ 75% ನಷ್ಟು ನದಿ ಜಲಾನಯನ ಪ್ರದೇಶ ತಮಿಳುನಾಡಿನಲ್ಲಿದೆ ಆದ್ದರಿಂದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟುವುದರಿಂದ ತಮಿಳುನಾಡಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕರ್ನಾಟಕದ ವಕೀಲರು ವಾದಿ ಮಂಡಿಸಿದರು.

ಈ ಮಧ್ಯೆ, ಎರಡೂ ರಾಜ್ಯ ಸರ್ಕಾರಗಳು ಈ ಸಮಸ್ಯೆಯನ್ನು ಬಗೆಹರಿಸಲು ಅಂತರಾಜ್ಯ ಜಲ ವಿವಾದ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರ ಬಳಿ ಕೋರಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂ ಕೋರ್ಟ್‌ ಆದೇಶ

ಕೆಲವು ವರ್ಷಗಳಿಂದ ನಿರ್ಮಾಣ ಕಾರ್ಯಗಳು ನಡೆಯುತ್ತಿರುವುದರಿಂದ ಮತ್ತು ಯೋಜನೆಯು ಸುಮಾರು 75% ಪೂರ್ಣಗೊಂಡಿರುವುದರಿಂದ ಜೊತೆಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳ ಅನುಮತಿ ಪಡೆದಿರುವುದರಿಂದ ನ್ಯಾಯಾಲಯವು ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಯೋಜನೆಯ 2007ರ ಅನುಮೋದನೆ ಹಂತದಿಂದಲೂ ಮತ್ತು 2013 ರಲ್ಲಿ ನಿರ್ಮಾಣವನ್ನು ಪ್ರಾರಂಭಿಸಿದಾಗಿನಿಂದಲೂ ನಡೆಯುತ್ತಿದೆ. ಅಲ್ಲದೇ ಈ ವಿಚಾರದಲ್ಲಿ ಅಂತರಾಜ್ಯ ಜಲ ವಿವಾದ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರ ಬಳಿ ಎರಡೂ ರಾಜ್ಯಗಳು ಕೋರಿಲ್ಲವಾದ್ದರಿಂದ ನ್ಯಾಯಾಲಯವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವುದನ್ನು ಬಿಟ್ಟು ಬೇರೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದಿದೆ. ಆದರೆ, ಆದೇಶ ನೀಡಿದ ನಾಲ್ಕು ವಾರಗಳಲ್ಲಿ ಮಧ್ಯಪ್ರವೇಶಿಸಿ ಅಂತರರಾಜ್ಯ ನದಿ ನೀರಿನ ವಿವಾದ ನ್ಯಾಯಮಂಡಳಿ ಸ್ಥಾಪಿಸುವಂತೆ ತಮಿಳುನಾಡು ಕೇಂದ್ರ ಸರ್ಕಾರವನ್ನು ಕೋರಬಹುದು ಎಂದಿದೆ.

ಆಧಾರ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...