Homeಕರ್ನಾಟಕಮಾರ್ಕಂಡೇಯ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಗ್ರೀನ್‌ ಸಿಗ್ನಲ್‌ : ತಮಿಳುನಾಡು ವಾದ ತಳ್ಳಿಹಾಕಿದ ಸುಪ್ರೀಂ

ಮಾರ್ಕಂಡೇಯ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ಗ್ರೀನ್‌ ಸಿಗ್ನಲ್‌ : ತಮಿಳುನಾಡು ವಾದ ತಳ್ಳಿಹಾಕಿದ ಸುಪ್ರೀಂ

- Advertisement -
- Advertisement -

ಥೆನ್ಪೆನ್ನೈ ನದಿಯ ಮಾರ್ಕಂಡೇಯ ಉಪನದಿಗೆ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನಗಳನ್ನು ತಡೆಹಿಡಿಯಬೇಕೆಂದು ಕೋರಿದ್ದ ತಮಿಳುನಾಡು ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ..

ಥೆನ್ಪೆನ್ನೈ ನದಿ ಅಥವಾ ದಕ್ಷಿಣ ಪೆನ್ನಾರ್ ನದಿ ಕರ್ನಾಟಕದಲ್ಲಿ ಹುಟ್ಟಿ ಕೃಷ್ಣಗಿರಿ, ತಿರುವಣ್ಣಾಮಲೈ, ವಿಲ್ಲುಪುರಂ ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳ ಮೂಲಕ ಹರಿದು ಬಂಗಾಳಕೊಲ್ಲಿ ಸೇರುತ್ತದೆ.

ಮಾರ್ಕಂಡೇಯ ನದಿಯು ಥೆನ್ಪೆನ್ನೈ ನದಿಯ ಉಪನದಿಯಾಗಿದ್ದು, ಇದು ತಮಿಳುನಾಡಿನೊಳಗೆ ಸುಮಾರು 30 ಕಿಲೋಮೀಟರ್ ಪ್ರಯಾಣಿಸಿದ ನಂತರ ಕೃಷ್ಣಗಿರಿ ಜಲಾಶಯದ ಬಳಿ ಮುಖ್ಯ ನದಿಯನ್ನು ಸೇರುತ್ತದೆ.

ಥೆನ್ಪೆನ್ನೈ ನೀರನ್ನು ಬಳಸುವಲ್ಲಿ ರಾಜ್ಯಗಳ ಹಕ್ಕುಗಳನ್ನು ತಮಿಳುನಾಡು ಮತ್ತು ಕರ್ನಾಟಕದ ಹಿಂದಿನ ರಾಜ್ಯಗಳಾದ ಮದ್ರಾಸ್ ರಾಜ್ಯ ಮತ್ತು ಮೈಸೂರು ನಡುವೆ 1892 ರಲ್ಲಿ ಮಾಡಿಕೊಂಡ ಒಪ್ಪಂದದಲ್ಲಿ ನೋಡಬಹುದಾಗಿದೆ. ಈ ಒಪ್ಪಂದವನ್ನು 1933 ರಲ್ಲಿ ಮಾರ್ಪಡಿಸಲಾಗಿದೆ.

ಮಾಲೂರು, ಕೋಲಾರ ಮತ್ತು ಬಂಗಾರಪೇಟೆ ಪಟ್ಟಣಗಳು ​​ಮತ್ತು ನದಿಯ ಹಾದಿಯಲ್ಲಿರುವ 45 ಹಳ್ಳಿಗಳ ಕುಡಿಯುವ ನೀರಿನ ಅವಶ್ಯಕತೆಗಳನ್ನು ಪೂರೈಸುವ ಸಲುವಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮಾರ್ಕಂಡೇಯ ನದಿಗೆ ಅಡ್ಡಲಾಗಿ 500 Mcft ಶೇಖರಣಾ ಸಾಮರ್ಥ್ಯದ ಅಣೆಕಟ್ಟು ನಿರ್ಮಿಸುತ್ತಿದೆ.

ಬಂಗಾರಪೇಟೆ ತಾಲ್ಲೂಕಿನ ಯಾರ್ಗೋಲ್ ಗ್ರಾಮದ ಸಮೀಪವಿರುವ ಮಾರ್ಕಂಡೇಯ ಅಣೆಕಟ್ಟು ಯೋಜನೆಗೆ 2007 ರಲ್ಲಿ 240 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಮೋದನೆ ನೀಡಲಾಯಿತು. 240 ಕೋಟಿ ರೂ.ಗಳಲ್ಲಿ 160 ಕೋಟಿ ರೂ.ಗಳನ್ನು ಕರ್ನಾಟಕ ಸರ್ಕಾರದಿಂದ ಮತ್ತು 79.92 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಬೇಕಿದೆ.

ಕರ್ನಾಟಕ ಸರ್ಕಾರವು 2013ರಲ್ಲಿ ಅಣೆಕಟ್ಟಿನ ನಿರ್ಮಾಣವನ್ನು ಪ್ರಾರಂಭಿಸಿದ್ದು 75-80% ಪೂರ್ಣಗೊಂಡಿದೆ ಎಂದು ಕರ್ನಾಟಕ ಸರ್ಕಾರದ ವಕೀಲರು ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ತಮಿಳುನಾಡು ಮತ್ತು ಕರ್ನಾಟಕದ ನಡುವಿನ ವಿವಾದ

ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣವು ತಮಿಳುನಾಡಿಗೆ ನೀರಿನ ಹರಿವನ್ನು ನಿಲ್ಲಿಸುತ್ತದೆ, ಇದರಿಂದಾಗಿ ಕೃಷ್ಣಗಿರಿ, ಧರ್ಮಪುರಿ, ತಿರುವಣ್ಣಾಮಲೈ, ವಿಲ್ಲುಪುರಂ ಮತ್ತು ಕಡಲೂರಿನಲ್ಲಿ ವಾಸಿಸುವ ರೈತರ ಜೀವನೋಪಾಯಕ್ಕೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ತಮಿಳುನಾಡು ಸರ್ಕಾರ ಆರೋಪಿಸಿದೆ.

1892 ರ ಒಪ್ಪಂದದ ಷರತ್ತುಗಳ ಪ್ರಕಾರ ಕರ್ನಾಟಕವು ತಮಿಳುನಾಡಿನ ಒಪ್ಪಿಗೆಯಿಲ್ಲದೆ ಯಾವುದೇ ಹೊಸ ನೀರಾವರಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗಿಲ್ಲ ಎಂದು ತಮಿಳುನಾಡಿನ ವಕೀಲರು ಹೇಳಿದ್ದಾರೆ.

ಏತನ್ಮಧ್ಯೆ, ಕರ್ನಾಟಕ ಸರ್ಕಾರವು 1892 ಮತ್ತು 1933 ರ ಎರಡೂ ಒಪ್ಪಂದಗಳ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ವಾದಿಸಿತು. ಯಾವುದೇ ನೀರಾವರಿ ಅಥವಾ ಇನ್ನಿತರ ವಾಣಿಜ್ಯ ಉದ್ದೇಶಗಳಿಗಾಗಿ ಅಣೆಕಟ್ಟು ನಿರ್ಮಾಣಕ್ಕೆ ಮಾತ್ರ ಮದ್ರಾಸ್ ಸರ್ಕಾರದ ಒಪ್ಪಿಗೆ ಪಡೆಯಬೇಕಾಗಿದೆ. ಒಪ್ಪಂದದ ಪ್ರಕಾರ, ನಾವು ಕುಡಿಯುವ ನೀರು ಸರಬರಾಜುಗಾಗಿ ಅಣೆಕಟ್ಟು ನಿರ್ಮಿಸುತ್ತಿರುವುದರಿಂದ ತಮಿಳುನಾಡಿನಿಂದ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ವಾದಿಸಿದರು.

ಈ ನದಿಯ 75% ನಷ್ಟು ನದಿ ಜಲಾನಯನ ಪ್ರದೇಶ ತಮಿಳುನಾಡಿನಲ್ಲಿದೆ ಆದ್ದರಿಂದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟುವುದರಿಂದ ತಮಿಳುನಾಡಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕರ್ನಾಟಕದ ವಕೀಲರು ವಾದಿ ಮಂಡಿಸಿದರು.

ಈ ಮಧ್ಯೆ, ಎರಡೂ ರಾಜ್ಯ ಸರ್ಕಾರಗಳು ಈ ಸಮಸ್ಯೆಯನ್ನು ಬಗೆಹರಿಸಲು ಅಂತರಾಜ್ಯ ಜಲ ವಿವಾದ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರ ಬಳಿ ಕೋರಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸುಪ್ರೀಂ ಕೋರ್ಟ್‌ ಆದೇಶ

ಕೆಲವು ವರ್ಷಗಳಿಂದ ನಿರ್ಮಾಣ ಕಾರ್ಯಗಳು ನಡೆಯುತ್ತಿರುವುದರಿಂದ ಮತ್ತು ಯೋಜನೆಯು ಸುಮಾರು 75% ಪೂರ್ಣಗೊಂಡಿರುವುದರಿಂದ ಜೊತೆಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳ ಅನುಮತಿ ಪಡೆದಿರುವುದರಿಂದ ನ್ಯಾಯಾಲಯವು ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಯೋಜನೆಯ 2007ರ ಅನುಮೋದನೆ ಹಂತದಿಂದಲೂ ಮತ್ತು 2013 ರಲ್ಲಿ ನಿರ್ಮಾಣವನ್ನು ಪ್ರಾರಂಭಿಸಿದಾಗಿನಿಂದಲೂ ನಡೆಯುತ್ತಿದೆ. ಅಲ್ಲದೇ ಈ ವಿಚಾರದಲ್ಲಿ ಅಂತರಾಜ್ಯ ಜಲ ವಿವಾದ ನ್ಯಾಯಮಂಡಳಿ ಸ್ಥಾಪಿಸಲು ಕೇಂದ್ರ ಬಳಿ ಎರಡೂ ರಾಜ್ಯಗಳು ಕೋರಿಲ್ಲವಾದ್ದರಿಂದ ನ್ಯಾಯಾಲಯವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವುದನ್ನು ಬಿಟ್ಟು ಬೇರೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದಿದೆ. ಆದರೆ, ಆದೇಶ ನೀಡಿದ ನಾಲ್ಕು ವಾರಗಳಲ್ಲಿ ಮಧ್ಯಪ್ರವೇಶಿಸಿ ಅಂತರರಾಜ್ಯ ನದಿ ನೀರಿನ ವಿವಾದ ನ್ಯಾಯಮಂಡಳಿ ಸ್ಥಾಪಿಸುವಂತೆ ತಮಿಳುನಾಡು ಕೇಂದ್ರ ಸರ್ಕಾರವನ್ನು ಕೋರಬಹುದು ಎಂದಿದೆ.

ಆಧಾರ: ದಿ ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...