Homeಬಹುಜನ ಭಾರತಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಬಡ್ತಿಯಲ್ಲಿ ಮೀಸಲಾತಿ ಕಡ್ಡಾಯ ಅಲ್ಲ ಎಂದು ಉತ್ತರಾಖಂಡದ ಪ್ರಕರಣವೊಂದರಲ್ಲಿ ಸುಪ್ರೀಮ್ ಕೋರ್ಟ್ ನೀಡಿರುವ ತೀರ್ಪು ಕಳವಳಕಾರಿ. ನೂರಾರು ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವೊಂದಕ್ಕೆ ಆಗಿರುವ ಹಿನ್ನಡೆ. ಸಾಮಾಜಿಕ ನ್ಯಾಯ ನೀಡಿಕೆಯ ಪರಿಕಲ್ಪನೆಯ ಬೇರಿಗೆ ಬೀಸಿದ ಕೊಡಲಿಯೇಟು.

ಒಂದು ಅರ್ಥದಲ್ಲಿ ಮೀಸಲಾತಿ ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದುಬಿಟ್ಟಿದೆ. ಮೀಸಲಾತಿಯನ್ನು ನೀಡಬಯಸುವ ರಾಜ್ಯವು ಮೊದಲು ಆಯಾ ಜಾತಿಗಳು ಪಂಗಡಗಳು ಸರ್ಕಾರಿ ಸೇವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾತಿನಿಧ್ಯ ಪಡೆದಿಲ್ಲ ಎಂಬ ಅಂಕಿಅಂಶಗಳನ್ನು ಕಲೆಹಾಕಬೇಕು ಎಂದು ವಿಧಿಸಿದೆ.

ಮೀಸಲಾತಿ ಮೂಲಭೂತ ಹಕ್ಕು ಅಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಬೇಕೆಂಬುದು ಕಡ್ಡಾಯವೇನೂ ಅಲ್ಲ ಎಂದೂ ನ್ಯಾಯಾಲಯ ಸಾರಿ ಹೇಳಿದೆ. ಆದರೆ ಸಂವಿಧಾನದ 16ನೆಯ ಅನುಚ್ಛೇದವು ಸಮಾನತೆಯ ಹಕ್ಕನ್ನೂ ನೀಡುತ್ತದೆ. ಸರ್ಕಾರಿ ಉದ್ಯೋಗಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ದೊರೆಯದ ಗುಂಪುಗಳ ರಕ್ಷಣೆಗೆ ಧಾವಿಸುವುದು ಸರ್ಕಾರದ ಆದ್ಯ ಕರ್ತವ್ಯ ಎನ್ನುತ್ತಾರೆ ಸಂವಿಧಾನ ತಜ್ಞರು.

ಮೀಸಲಾತಿ ನೀಡಬೇಕಿದ್ದರೆ ಆಯಾ ಜಾತಿ ಪಂಗಡಗಳ ಹಿಂದುಳಿದಿರುವಿಕೆಯನ್ನು ಸಾಬೀತುಪಡಿಸಬೇಕು ಎಂಬುದು ಸುಪ್ರೀಮ್ ಕೋರ್ಟ್ ಈ ಹಿಂದೆ ನಾಗರಾಜ್ ತೀರ್ಪಿನಲ್ಲಿ ವಿಧಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆಯು ಅವುಗಳನ್ನು ಸಂಸತ್ತು ಅಧ್ಯಕ್ಷೀಯ ಪಟ್ಟಿಗೆ ಸೇರಿಸಿದ ಕ್ಷಣವೇ ಸ್ಥಾಪಿತವಾಗಿರುತ್ತದೆ. ಜಾತಿ ಪಂಗಡಗಳು ಹಿಂದುಳಿದಿವೆ ಎಂಬುದನ್ನು ಒಮ್ಮೆ ಸಾರಿದ ನಂತರವೂ ಸರ್ಕಾರಗಳು ಅವುಗಳಿಗೆ ನೆರವು ನೀಡಕೂಡದು ಎಂದು ಹೇಳುವುದು ಅಸಂಬದ್ಧ. ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವುಗಳು ಎಂಬ ವರ್ಗೀಕರಣಕ್ಕೆ ಅರ್ಥವೇ ಇಲ್ಲವಾಗುತ್ತದೆ.

ಮೀಸಲಾತಿಯನ್ನು ನೀಡುವುದಿಲ್ಲವೆಂಬ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿಯುವ ಸುಪ್ರೀಮ್ ಕೋರ್ಟು, ಮೀಸಲಾತಿ ನಿರಾಕರಿಸುವ ರಾಜ್ಯ ಸರ್ಕಾರದ ವಿವೇಚನೆಯನ್ನು ಮಾನ್ಯ ಮಾಡುತ್ತದೆ. ಆದರೆ ಮೀಸಲಾತಿಯನ್ನು ನೀಡಲು ಮುಂದಾಗುವ ರಾಜ್ಯ ಸರ್ಕಾರವನ್ನು ಸಮಾನತೆಯ ಕಾರಣ ಮುಂದೆ ಮಾಡಿ ನಿರ್ಬಂಧಿಸುತ್ತದೆ. ರಾಜ್ಯ ಸರ್ಕಾರಗಳ ವಿವೇಚನಾ ಅಧಿಕಾರವನ್ನು ಮಾನ್ಯ ಮಾಡುವುದಿಲ್ಲ. ಈ ಮಾತಿಗೆ ಹಲವು ನಿದರ್ಶನಗಳಿವೆ.

ಜಾತಿವ್ಯವಸ್ಥೆಯ ಒಳಿತನ್ನು ಎತ್ತಿ ಹೇಳುವ ಮತ್ತು ಮೀಸಲಾತಿಯನ್ನು ಅಂತ್ಯಗೊಳಿಸುವ ಹಾಗೂ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಂದ್ರ ಸರ್ಕಾರದ ಒಳಗಿನಿಂದ ಮತ್ತು ಹೊರಗಿನಿಂದ ಕಾಲಕಾಲಕ್ಕೆ ಕೇಳಿಬರುತ್ತಿವೆ. ಭಯ ಮತ್ತು ಅಪಮಾನದ ಲಜ್ಜೆಯನ್ನು ಬದಿಗೊತ್ತಿರುವ ದಲಿತರು ಪ್ರತಿರೋಧದ ಮತ್ತು ತಿಳಿವಳಿಕೆಯ ಹಾದಿ ಹಿಡಿದಿರುವುದು ಮೇಲ್ಜಾತಿಗಳನ್ನು ಇನ್ನಷ್ಟು ಕೆರಳಿಸಿ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಅಂಶವನ್ನು ಅಧ್ಯಯನಗಳು ಸಾರಿವೆ. ಇಂತಹ ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ.66ರಷ್ಟು ಹೆಚ್ಚಿದೆ. ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಬಲಾತ್ಕಾರ ನಡೆಯುತ್ತಿದೆ. ಈ ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣಗಳು ಇಮ್ಮಡಿಯಾಗಿವೆ. ವಿಚಾರಣೆಗೆ ಕಾದಿರುವ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಾಕಿಯ ಬೆಟ್ಟ ಬೆಳೆಯುತ್ತಿದೆ. ಸಜೆಯಲ್ಲಿ ಕೊನೆಯಾಗುವ ಪ್ರಕರಣಗಳ ಪ್ರಮಾಣ ಶೇ.28ಕ್ಕೆ ಕುಸಿದಿದೆ

2015ರಲ್ಲಿ ಸರಸಂಘ ಚಾಲಕ ಮೋಹನ್ ರಾವ್ ಭಾಗವತ್ ಜಾತಿ ಆಧಾರಿತ ಮೀಸಲಾತಿಯ ಅಗತ್ಯದ ಕುರಿತು ಸಂದೇಹ ಪ್ರಕಟಿಸಿದ್ದರು. ಪ್ರತಿಪಕ್ಷಗಳು ಹುಯಿಲೆಬ್ಬಿಸಿದ್ದವು. ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲು ಉಂಡಿತು. ನಿತೀಶ್ ಅವರ ಸಂಯುಕ್ತ ಜನತಾದಳ ಮತ್ತು ಲಾಲೂಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಒಟ್ಟುಗೂಡಿ ಅಧಿಕಾರ ಸೂತ್ರ ಹಿಡಿದವು. ಜಾತಿ ಆಧಾರಿತ ಮೀಸಲಾತಿ ಕುರಿತು ಸಾಮರಸ್ಯದ ವಾತಾವರಣದಲ್ಲಿ ಚರ್ಚೆ ನಡೆಯಬೇಕೆಂದು ಇತ್ತೀಚೆಗೆ ಮತ್ತೆ ಹೇಳಿದ್ದರು ಸರಸಂಘಚಾಲಕರು.

ಮೀಸಲಾತಿ ಎಂಬುದು ಅಭಿವೃದ್ಧಿಗೆ ಅಡ್ಡಿ ಎಂಬ ನಿರಂತರ ಪ್ರಚಾರವನ್ನು ಜಾರಿಯಲ್ಲಿ ಇಡಲಾಗಿದೆ. ನೂರಕ್ಕೆ ನೂರು ಮೀಸಲಾತಿ ಪಡೆಯುತ್ತ ಬಂದಿರುವ ಒಂದು ಸಂಘಟನೆಯ ಜನ ತಳವರ್ಗಗಳ ಮೀಸಲಾತಿಯನ್ನು ವಿರೋಧಿಸುತ್ತ ಬಂದಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಆಚರಣೆಯಲ್ಲಿ ಕೊಂದಿರುವವರು, ಬಾಯಿಮಾತಿನಲ್ಲಿ ಅವರನ್ನು ಕೊಂಡಾಡತೊಡಗಿದ್ದಾರೆ. ಅವರ ಹೆಸರಿನಲ್ಲಿ ಸ್ಥಾವರಗಳನ್ನು ಎಬ್ಬಿಸಿ ನಿಲ್ಲಿಸತೊಡಗಿದ್ದಾರೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನು ಕೇಂದ್ರ ಮಂತ್ರಿಗಳೇ ಆಡತೊಡಗಿದ್ದಾರೆ. ಮೂಲ ಸಂವಿಧಾನದಲ್ಲಿ ಇರಲಿಲ್ಲವೆಂದು ಹೇಳಿ ಸೆಕ್ಯೂಲರ್ ಪದವನ್ನೇ ಸಂವಿಧಾನದ ಮುನ್ನುಡಿಯಿಂದ ಕೈ ಬಿಡುವ ಹುನ್ನಾರವೂ ಜರುಗಿತು. ಹಿಂದೂ ಬಹುಸಂಖ್ಯಾತ ರಾಷ್ಟ್ರವಾದ ವಿಜೃಂಭಿಸತೊಡಗಿದೆ. ಅಲ್ಪಸಂಖ್ಯಾತರು ದಲಿತರು ಆದಿವಾಸಿಗಳ ಬದುಕುಗಳು ದುರ್ಭರವಾಗಿವೆ. ರಾಜ್ಯಸಭೆಯಲ್ಲಿ ಆಳುವ ಪಕ್ಷಕ್ಕೆ ಬಹುಮತ ಇಲ್ಲದಿದ್ದರೂ ತ್ರಿವಳಿ ತಲಾಖ್ ರದ್ದು ಮಾಡಿದ ಮಸೂದೆಗೆ ಅಂಗೀಕಾರ ದಕ್ಕಿಸಿಕೊಳ್ಳಲಾಯಿತು. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಅಲ್ಲಿನ ಜನಪ್ರತಿಧಿನಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ರದ್ದು ಮಾಡಿ ಜೀರ್ಣಿಸಿಕೊಳ್ಳಲಾಗುತ್ತಿದೆ. ಮೀಸಲಾತಿಯ ಕಡುಬೆಂಬಲಿಗ ಶಕ್ತಿಗಳ ದನಿ ಕ್ಷೀಣವಾಗಿದೆ. ಕಬ್ಬಿಣ ಇಷ್ಟು ಬಿಸಿಯಾಗಿರುವ ಸನ್ನಿವೇಶವಿದು. ಇಂತಹ ಸನ್ನಿವೇಶದಲ್ಲಿ ಮೀಸಲಾತಿ ಕುರಿತು ಚರ್ಚೆ ಮಾಡಬೇಕೆಂದು ಸರಸಂಘಚಾಲಕರು ಕರೆ ನೀಡಿದ್ದು ಆಕಸ್ಮಿಕ ಆಗಿರಲಿಲ್ಲ.

ಮೀಸಲಾತಿಯನ್ನು ನಿಷ್ಪಕ್ಷಪಾತ ಜನರ ಸಮಿತಿಯೊಂದು ಮರುವಿಮರ್ಶೆಗೆ ಒಳಪಡಿಸಬೇಕು ಎಂಬ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾ 1981ರಲ್ಲೇ ಅಂಗೀಕರಿಸಿತ್ತು. 1985ರಲ್ಲಿ ಇದೇ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಅಂಗೀಕರಿಸಲಾಗಿತ್ತು.

ಈ ಸಮಾಜದಲ್ಲಿ ಅಸಮಾನತೆ ಇರುವತನಕ ನಾವು ಮೀಸಲಾತಿಯನ್ನು ಬೆಂಬಲಿಸುತ್ತೇವೆ ಎಂಬ ಮಾತನ್ನು ಆಡುತ್ತಲೇ ಮರುವಿಮರ್ಶೆಯ ಕಿಡಿಯನ್ನೂ ಆರದಂತೆ ಕಾಪಾಡಿಕೊಂಡು ಬಂದಿದ್ದಾರೆ ಮೋಹನ್ ಭಾಗವತ್.

ಮೋದಿ-ಶಾ ಜೋಡಿಗೆ ಮೀಸಲಾತಿ ಕುರಿತು ಯಾವ ಸಹಾನುಭೂತಿಯೂ ಇಲ್ಲ. ಸಹಾನುಭೂತಿಯ ಸೈದ್ಧಾಂತಿಕ ಹಿನ್ನೆಲೆಯಿಂದ ಬಂದವರೂ ಅಲ್ಲ. ಮೀಸಲಾತಿಗೆ ಮಂಗಳ ಹಾಡುವ ಕಾರ್ಯಸೂಚಿಯ ಹಿನ್ನೆಲೆ ಅವರದು. ಆದರೆ ಚುನಾವಣಾ ರಾಜಕಾರಣ ಅವರ ಕೈಗಳನ್ನು ಈಗಲೂ ಕಟ್ಟಿ ಹಾಕಿದೆ. ಹೀಗಾಗಿ ತಳವರ್ಗಗಳ ಮೀಸಲಾತಿಯನ್ನು ತರಾತುರಿಯಲ್ಲಿ ಕಿತ್ತು ಹಾಕಲು ಅವರು ಕೈಹಾಕುತ್ತಿಲ್ಲ. ಅನುಕೂಲಕರ ಸಮಯದ ನಿರೀಕ್ಷೆಯಲ್ಲಿದ್ದಾರೆ ಅವರು.

ಇಂತಹ ಸನ್ನಿವೇಶದಲ್ಲಿ ಹೊರಬಿದ್ದಿರುವ ಸುಪ್ರೀಮ್ ಕೋರ್ಟ್ ತೀರ್ಪಿನ ಬಳಕೆ-ದುರ್ಬಳಕೆ ಹೇಗೆಲ್ಲ ಆಗಲಿದೆ ಎಂಬುದು ಆತಂಕದಿಂದ ಕಾದು ನೋಡಬೇಕಿರುವ ಮತ್ತು ಹೋರಾಟಕ್ಕೆ ಸಜ್ಜಾಗಬೇಕಿರುವ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...