Homeಬಹುಜನ ಭಾರತಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಬಡ್ತಿಯಲ್ಲಿ ಮೀಸಲಾತಿ ಕಡ್ಡಾಯ ಅಲ್ಲ ಎಂದು ಉತ್ತರಾಖಂಡದ ಪ್ರಕರಣವೊಂದರಲ್ಲಿ ಸುಪ್ರೀಮ್ ಕೋರ್ಟ್ ನೀಡಿರುವ ತೀರ್ಪು ಕಳವಳಕಾರಿ. ನೂರಾರು ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವೊಂದಕ್ಕೆ ಆಗಿರುವ ಹಿನ್ನಡೆ. ಸಾಮಾಜಿಕ ನ್ಯಾಯ ನೀಡಿಕೆಯ ಪರಿಕಲ್ಪನೆಯ ಬೇರಿಗೆ ಬೀಸಿದ ಕೊಡಲಿಯೇಟು.

ಒಂದು ಅರ್ಥದಲ್ಲಿ ಮೀಸಲಾತಿ ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದುಬಿಟ್ಟಿದೆ. ಮೀಸಲಾತಿಯನ್ನು ನೀಡಬಯಸುವ ರಾಜ್ಯವು ಮೊದಲು ಆಯಾ ಜಾತಿಗಳು ಪಂಗಡಗಳು ಸರ್ಕಾರಿ ಸೇವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾತಿನಿಧ್ಯ ಪಡೆದಿಲ್ಲ ಎಂಬ ಅಂಕಿಅಂಶಗಳನ್ನು ಕಲೆಹಾಕಬೇಕು ಎಂದು ವಿಧಿಸಿದೆ.

ಮೀಸಲಾತಿ ಮೂಲಭೂತ ಹಕ್ಕು ಅಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಬೇಕೆಂಬುದು ಕಡ್ಡಾಯವೇನೂ ಅಲ್ಲ ಎಂದೂ ನ್ಯಾಯಾಲಯ ಸಾರಿ ಹೇಳಿದೆ. ಆದರೆ ಸಂವಿಧಾನದ 16ನೆಯ ಅನುಚ್ಛೇದವು ಸಮಾನತೆಯ ಹಕ್ಕನ್ನೂ ನೀಡುತ್ತದೆ. ಸರ್ಕಾರಿ ಉದ್ಯೋಗಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ದೊರೆಯದ ಗುಂಪುಗಳ ರಕ್ಷಣೆಗೆ ಧಾವಿಸುವುದು ಸರ್ಕಾರದ ಆದ್ಯ ಕರ್ತವ್ಯ ಎನ್ನುತ್ತಾರೆ ಸಂವಿಧಾನ ತಜ್ಞರು.

ಮೀಸಲಾತಿ ನೀಡಬೇಕಿದ್ದರೆ ಆಯಾ ಜಾತಿ ಪಂಗಡಗಳ ಹಿಂದುಳಿದಿರುವಿಕೆಯನ್ನು ಸಾಬೀತುಪಡಿಸಬೇಕು ಎಂಬುದು ಸುಪ್ರೀಮ್ ಕೋರ್ಟ್ ಈ ಹಿಂದೆ ನಾಗರಾಜ್ ತೀರ್ಪಿನಲ್ಲಿ ವಿಧಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆಯು ಅವುಗಳನ್ನು ಸಂಸತ್ತು ಅಧ್ಯಕ್ಷೀಯ ಪಟ್ಟಿಗೆ ಸೇರಿಸಿದ ಕ್ಷಣವೇ ಸ್ಥಾಪಿತವಾಗಿರುತ್ತದೆ. ಜಾತಿ ಪಂಗಡಗಳು ಹಿಂದುಳಿದಿವೆ ಎಂಬುದನ್ನು ಒಮ್ಮೆ ಸಾರಿದ ನಂತರವೂ ಸರ್ಕಾರಗಳು ಅವುಗಳಿಗೆ ನೆರವು ನೀಡಕೂಡದು ಎಂದು ಹೇಳುವುದು ಅಸಂಬದ್ಧ. ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವುಗಳು ಎಂಬ ವರ್ಗೀಕರಣಕ್ಕೆ ಅರ್ಥವೇ ಇಲ್ಲವಾಗುತ್ತದೆ.

ಮೀಸಲಾತಿಯನ್ನು ನೀಡುವುದಿಲ್ಲವೆಂಬ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿಯುವ ಸುಪ್ರೀಮ್ ಕೋರ್ಟು, ಮೀಸಲಾತಿ ನಿರಾಕರಿಸುವ ರಾಜ್ಯ ಸರ್ಕಾರದ ವಿವೇಚನೆಯನ್ನು ಮಾನ್ಯ ಮಾಡುತ್ತದೆ. ಆದರೆ ಮೀಸಲಾತಿಯನ್ನು ನೀಡಲು ಮುಂದಾಗುವ ರಾಜ್ಯ ಸರ್ಕಾರವನ್ನು ಸಮಾನತೆಯ ಕಾರಣ ಮುಂದೆ ಮಾಡಿ ನಿರ್ಬಂಧಿಸುತ್ತದೆ. ರಾಜ್ಯ ಸರ್ಕಾರಗಳ ವಿವೇಚನಾ ಅಧಿಕಾರವನ್ನು ಮಾನ್ಯ ಮಾಡುವುದಿಲ್ಲ. ಈ ಮಾತಿಗೆ ಹಲವು ನಿದರ್ಶನಗಳಿವೆ.

ಜಾತಿವ್ಯವಸ್ಥೆಯ ಒಳಿತನ್ನು ಎತ್ತಿ ಹೇಳುವ ಮತ್ತು ಮೀಸಲಾತಿಯನ್ನು ಅಂತ್ಯಗೊಳಿಸುವ ಹಾಗೂ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಂದ್ರ ಸರ್ಕಾರದ ಒಳಗಿನಿಂದ ಮತ್ತು ಹೊರಗಿನಿಂದ ಕಾಲಕಾಲಕ್ಕೆ ಕೇಳಿಬರುತ್ತಿವೆ. ಭಯ ಮತ್ತು ಅಪಮಾನದ ಲಜ್ಜೆಯನ್ನು ಬದಿಗೊತ್ತಿರುವ ದಲಿತರು ಪ್ರತಿರೋಧದ ಮತ್ತು ತಿಳಿವಳಿಕೆಯ ಹಾದಿ ಹಿಡಿದಿರುವುದು ಮೇಲ್ಜಾತಿಗಳನ್ನು ಇನ್ನಷ್ಟು ಕೆರಳಿಸಿ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಅಂಶವನ್ನು ಅಧ್ಯಯನಗಳು ಸಾರಿವೆ. ಇಂತಹ ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ.66ರಷ್ಟು ಹೆಚ್ಚಿದೆ. ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಬಲಾತ್ಕಾರ ನಡೆಯುತ್ತಿದೆ. ಈ ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣಗಳು ಇಮ್ಮಡಿಯಾಗಿವೆ. ವಿಚಾರಣೆಗೆ ಕಾದಿರುವ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಾಕಿಯ ಬೆಟ್ಟ ಬೆಳೆಯುತ್ತಿದೆ. ಸಜೆಯಲ್ಲಿ ಕೊನೆಯಾಗುವ ಪ್ರಕರಣಗಳ ಪ್ರಮಾಣ ಶೇ.28ಕ್ಕೆ ಕುಸಿದಿದೆ

2015ರಲ್ಲಿ ಸರಸಂಘ ಚಾಲಕ ಮೋಹನ್ ರಾವ್ ಭಾಗವತ್ ಜಾತಿ ಆಧಾರಿತ ಮೀಸಲಾತಿಯ ಅಗತ್ಯದ ಕುರಿತು ಸಂದೇಹ ಪ್ರಕಟಿಸಿದ್ದರು. ಪ್ರತಿಪಕ್ಷಗಳು ಹುಯಿಲೆಬ್ಬಿಸಿದ್ದವು. ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲು ಉಂಡಿತು. ನಿತೀಶ್ ಅವರ ಸಂಯುಕ್ತ ಜನತಾದಳ ಮತ್ತು ಲಾಲೂಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಒಟ್ಟುಗೂಡಿ ಅಧಿಕಾರ ಸೂತ್ರ ಹಿಡಿದವು. ಜಾತಿ ಆಧಾರಿತ ಮೀಸಲಾತಿ ಕುರಿತು ಸಾಮರಸ್ಯದ ವಾತಾವರಣದಲ್ಲಿ ಚರ್ಚೆ ನಡೆಯಬೇಕೆಂದು ಇತ್ತೀಚೆಗೆ ಮತ್ತೆ ಹೇಳಿದ್ದರು ಸರಸಂಘಚಾಲಕರು.

ಮೀಸಲಾತಿ ಎಂಬುದು ಅಭಿವೃದ್ಧಿಗೆ ಅಡ್ಡಿ ಎಂಬ ನಿರಂತರ ಪ್ರಚಾರವನ್ನು ಜಾರಿಯಲ್ಲಿ ಇಡಲಾಗಿದೆ. ನೂರಕ್ಕೆ ನೂರು ಮೀಸಲಾತಿ ಪಡೆಯುತ್ತ ಬಂದಿರುವ ಒಂದು ಸಂಘಟನೆಯ ಜನ ತಳವರ್ಗಗಳ ಮೀಸಲಾತಿಯನ್ನು ವಿರೋಧಿಸುತ್ತ ಬಂದಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಆಚರಣೆಯಲ್ಲಿ ಕೊಂದಿರುವವರು, ಬಾಯಿಮಾತಿನಲ್ಲಿ ಅವರನ್ನು ಕೊಂಡಾಡತೊಡಗಿದ್ದಾರೆ. ಅವರ ಹೆಸರಿನಲ್ಲಿ ಸ್ಥಾವರಗಳನ್ನು ಎಬ್ಬಿಸಿ ನಿಲ್ಲಿಸತೊಡಗಿದ್ದಾರೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನು ಕೇಂದ್ರ ಮಂತ್ರಿಗಳೇ ಆಡತೊಡಗಿದ್ದಾರೆ. ಮೂಲ ಸಂವಿಧಾನದಲ್ಲಿ ಇರಲಿಲ್ಲವೆಂದು ಹೇಳಿ ಸೆಕ್ಯೂಲರ್ ಪದವನ್ನೇ ಸಂವಿಧಾನದ ಮುನ್ನುಡಿಯಿಂದ ಕೈ ಬಿಡುವ ಹುನ್ನಾರವೂ ಜರುಗಿತು. ಹಿಂದೂ ಬಹುಸಂಖ್ಯಾತ ರಾಷ್ಟ್ರವಾದ ವಿಜೃಂಭಿಸತೊಡಗಿದೆ. ಅಲ್ಪಸಂಖ್ಯಾತರು ದಲಿತರು ಆದಿವಾಸಿಗಳ ಬದುಕುಗಳು ದುರ್ಭರವಾಗಿವೆ. ರಾಜ್ಯಸಭೆಯಲ್ಲಿ ಆಳುವ ಪಕ್ಷಕ್ಕೆ ಬಹುಮತ ಇಲ್ಲದಿದ್ದರೂ ತ್ರಿವಳಿ ತಲಾಖ್ ರದ್ದು ಮಾಡಿದ ಮಸೂದೆಗೆ ಅಂಗೀಕಾರ ದಕ್ಕಿಸಿಕೊಳ್ಳಲಾಯಿತು. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಅಲ್ಲಿನ ಜನಪ್ರತಿಧಿನಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ರದ್ದು ಮಾಡಿ ಜೀರ್ಣಿಸಿಕೊಳ್ಳಲಾಗುತ್ತಿದೆ. ಮೀಸಲಾತಿಯ ಕಡುಬೆಂಬಲಿಗ ಶಕ್ತಿಗಳ ದನಿ ಕ್ಷೀಣವಾಗಿದೆ. ಕಬ್ಬಿಣ ಇಷ್ಟು ಬಿಸಿಯಾಗಿರುವ ಸನ್ನಿವೇಶವಿದು. ಇಂತಹ ಸನ್ನಿವೇಶದಲ್ಲಿ ಮೀಸಲಾತಿ ಕುರಿತು ಚರ್ಚೆ ಮಾಡಬೇಕೆಂದು ಸರಸಂಘಚಾಲಕರು ಕರೆ ನೀಡಿದ್ದು ಆಕಸ್ಮಿಕ ಆಗಿರಲಿಲ್ಲ.

ಮೀಸಲಾತಿಯನ್ನು ನಿಷ್ಪಕ್ಷಪಾತ ಜನರ ಸಮಿತಿಯೊಂದು ಮರುವಿಮರ್ಶೆಗೆ ಒಳಪಡಿಸಬೇಕು ಎಂಬ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾ 1981ರಲ್ಲೇ ಅಂಗೀಕರಿಸಿತ್ತು. 1985ರಲ್ಲಿ ಇದೇ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಅಂಗೀಕರಿಸಲಾಗಿತ್ತು.

ಈ ಸಮಾಜದಲ್ಲಿ ಅಸಮಾನತೆ ಇರುವತನಕ ನಾವು ಮೀಸಲಾತಿಯನ್ನು ಬೆಂಬಲಿಸುತ್ತೇವೆ ಎಂಬ ಮಾತನ್ನು ಆಡುತ್ತಲೇ ಮರುವಿಮರ್ಶೆಯ ಕಿಡಿಯನ್ನೂ ಆರದಂತೆ ಕಾಪಾಡಿಕೊಂಡು ಬಂದಿದ್ದಾರೆ ಮೋಹನ್ ಭಾಗವತ್.

ಮೋದಿ-ಶಾ ಜೋಡಿಗೆ ಮೀಸಲಾತಿ ಕುರಿತು ಯಾವ ಸಹಾನುಭೂತಿಯೂ ಇಲ್ಲ. ಸಹಾನುಭೂತಿಯ ಸೈದ್ಧಾಂತಿಕ ಹಿನ್ನೆಲೆಯಿಂದ ಬಂದವರೂ ಅಲ್ಲ. ಮೀಸಲಾತಿಗೆ ಮಂಗಳ ಹಾಡುವ ಕಾರ್ಯಸೂಚಿಯ ಹಿನ್ನೆಲೆ ಅವರದು. ಆದರೆ ಚುನಾವಣಾ ರಾಜಕಾರಣ ಅವರ ಕೈಗಳನ್ನು ಈಗಲೂ ಕಟ್ಟಿ ಹಾಕಿದೆ. ಹೀಗಾಗಿ ತಳವರ್ಗಗಳ ಮೀಸಲಾತಿಯನ್ನು ತರಾತುರಿಯಲ್ಲಿ ಕಿತ್ತು ಹಾಕಲು ಅವರು ಕೈಹಾಕುತ್ತಿಲ್ಲ. ಅನುಕೂಲಕರ ಸಮಯದ ನಿರೀಕ್ಷೆಯಲ್ಲಿದ್ದಾರೆ ಅವರು.

ಇಂತಹ ಸನ್ನಿವೇಶದಲ್ಲಿ ಹೊರಬಿದ್ದಿರುವ ಸುಪ್ರೀಮ್ ಕೋರ್ಟ್ ತೀರ್ಪಿನ ಬಳಕೆ-ದುರ್ಬಳಕೆ ಹೇಗೆಲ್ಲ ಆಗಲಿದೆ ಎಂಬುದು ಆತಂಕದಿಂದ ಕಾದು ನೋಡಬೇಕಿರುವ ಮತ್ತು ಹೋರಾಟಕ್ಕೆ ಸಜ್ಜಾಗಬೇಕಿರುವ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...