Homeಬಹುಜನ ಭಾರತಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಬಡ್ತಿಯಲ್ಲಿ ಮೀಸಲಾತಿ ಕಡ್ಡಾಯ ಅಲ್ಲ ಎಂದು ಉತ್ತರಾಖಂಡದ ಪ್ರಕರಣವೊಂದರಲ್ಲಿ ಸುಪ್ರೀಮ್ ಕೋರ್ಟ್ ನೀಡಿರುವ ತೀರ್ಪು ಕಳವಳಕಾರಿ. ನೂರಾರು ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವೊಂದಕ್ಕೆ ಆಗಿರುವ ಹಿನ್ನಡೆ. ಸಾಮಾಜಿಕ ನ್ಯಾಯ ನೀಡಿಕೆಯ ಪರಿಕಲ್ಪನೆಯ ಬೇರಿಗೆ ಬೀಸಿದ ಕೊಡಲಿಯೇಟು.

ಒಂದು ಅರ್ಥದಲ್ಲಿ ಮೀಸಲಾತಿ ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದುಬಿಟ್ಟಿದೆ. ಮೀಸಲಾತಿಯನ್ನು ನೀಡಬಯಸುವ ರಾಜ್ಯವು ಮೊದಲು ಆಯಾ ಜಾತಿಗಳು ಪಂಗಡಗಳು ಸರ್ಕಾರಿ ಸೇವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾತಿನಿಧ್ಯ ಪಡೆದಿಲ್ಲ ಎಂಬ ಅಂಕಿಅಂಶಗಳನ್ನು ಕಲೆಹಾಕಬೇಕು ಎಂದು ವಿಧಿಸಿದೆ.

ಮೀಸಲಾತಿ ಮೂಲಭೂತ ಹಕ್ಕು ಅಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಬೇಕೆಂಬುದು ಕಡ್ಡಾಯವೇನೂ ಅಲ್ಲ ಎಂದೂ ನ್ಯಾಯಾಲಯ ಸಾರಿ ಹೇಳಿದೆ. ಆದರೆ ಸಂವಿಧಾನದ 16ನೆಯ ಅನುಚ್ಛೇದವು ಸಮಾನತೆಯ ಹಕ್ಕನ್ನೂ ನೀಡುತ್ತದೆ. ಸರ್ಕಾರಿ ಉದ್ಯೋಗಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ದೊರೆಯದ ಗುಂಪುಗಳ ರಕ್ಷಣೆಗೆ ಧಾವಿಸುವುದು ಸರ್ಕಾರದ ಆದ್ಯ ಕರ್ತವ್ಯ ಎನ್ನುತ್ತಾರೆ ಸಂವಿಧಾನ ತಜ್ಞರು.

ಮೀಸಲಾತಿ ನೀಡಬೇಕಿದ್ದರೆ ಆಯಾ ಜಾತಿ ಪಂಗಡಗಳ ಹಿಂದುಳಿದಿರುವಿಕೆಯನ್ನು ಸಾಬೀತುಪಡಿಸಬೇಕು ಎಂಬುದು ಸುಪ್ರೀಮ್ ಕೋರ್ಟ್ ಈ ಹಿಂದೆ ನಾಗರಾಜ್ ತೀರ್ಪಿನಲ್ಲಿ ವಿಧಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆಯು ಅವುಗಳನ್ನು ಸಂಸತ್ತು ಅಧ್ಯಕ್ಷೀಯ ಪಟ್ಟಿಗೆ ಸೇರಿಸಿದ ಕ್ಷಣವೇ ಸ್ಥಾಪಿತವಾಗಿರುತ್ತದೆ. ಜಾತಿ ಪಂಗಡಗಳು ಹಿಂದುಳಿದಿವೆ ಎಂಬುದನ್ನು ಒಮ್ಮೆ ಸಾರಿದ ನಂತರವೂ ಸರ್ಕಾರಗಳು ಅವುಗಳಿಗೆ ನೆರವು ನೀಡಕೂಡದು ಎಂದು ಹೇಳುವುದು ಅಸಂಬದ್ಧ. ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವುಗಳು ಎಂಬ ವರ್ಗೀಕರಣಕ್ಕೆ ಅರ್ಥವೇ ಇಲ್ಲವಾಗುತ್ತದೆ.

ಮೀಸಲಾತಿಯನ್ನು ನೀಡುವುದಿಲ್ಲವೆಂಬ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿಯುವ ಸುಪ್ರೀಮ್ ಕೋರ್ಟು, ಮೀಸಲಾತಿ ನಿರಾಕರಿಸುವ ರಾಜ್ಯ ಸರ್ಕಾರದ ವಿವೇಚನೆಯನ್ನು ಮಾನ್ಯ ಮಾಡುತ್ತದೆ. ಆದರೆ ಮೀಸಲಾತಿಯನ್ನು ನೀಡಲು ಮುಂದಾಗುವ ರಾಜ್ಯ ಸರ್ಕಾರವನ್ನು ಸಮಾನತೆಯ ಕಾರಣ ಮುಂದೆ ಮಾಡಿ ನಿರ್ಬಂಧಿಸುತ್ತದೆ. ರಾಜ್ಯ ಸರ್ಕಾರಗಳ ವಿವೇಚನಾ ಅಧಿಕಾರವನ್ನು ಮಾನ್ಯ ಮಾಡುವುದಿಲ್ಲ. ಈ ಮಾತಿಗೆ ಹಲವು ನಿದರ್ಶನಗಳಿವೆ.

ಜಾತಿವ್ಯವಸ್ಥೆಯ ಒಳಿತನ್ನು ಎತ್ತಿ ಹೇಳುವ ಮತ್ತು ಮೀಸಲಾತಿಯನ್ನು ಅಂತ್ಯಗೊಳಿಸುವ ಹಾಗೂ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಂದ್ರ ಸರ್ಕಾರದ ಒಳಗಿನಿಂದ ಮತ್ತು ಹೊರಗಿನಿಂದ ಕಾಲಕಾಲಕ್ಕೆ ಕೇಳಿಬರುತ್ತಿವೆ. ಭಯ ಮತ್ತು ಅಪಮಾನದ ಲಜ್ಜೆಯನ್ನು ಬದಿಗೊತ್ತಿರುವ ದಲಿತರು ಪ್ರತಿರೋಧದ ಮತ್ತು ತಿಳಿವಳಿಕೆಯ ಹಾದಿ ಹಿಡಿದಿರುವುದು ಮೇಲ್ಜಾತಿಗಳನ್ನು ಇನ್ನಷ್ಟು ಕೆರಳಿಸಿ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಅಂಶವನ್ನು ಅಧ್ಯಯನಗಳು ಸಾರಿವೆ. ಇಂತಹ ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ.66ರಷ್ಟು ಹೆಚ್ಚಿದೆ. ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಬಲಾತ್ಕಾರ ನಡೆಯುತ್ತಿದೆ. ಈ ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣಗಳು ಇಮ್ಮಡಿಯಾಗಿವೆ. ವಿಚಾರಣೆಗೆ ಕಾದಿರುವ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಾಕಿಯ ಬೆಟ್ಟ ಬೆಳೆಯುತ್ತಿದೆ. ಸಜೆಯಲ್ಲಿ ಕೊನೆಯಾಗುವ ಪ್ರಕರಣಗಳ ಪ್ರಮಾಣ ಶೇ.28ಕ್ಕೆ ಕುಸಿದಿದೆ

2015ರಲ್ಲಿ ಸರಸಂಘ ಚಾಲಕ ಮೋಹನ್ ರಾವ್ ಭಾಗವತ್ ಜಾತಿ ಆಧಾರಿತ ಮೀಸಲಾತಿಯ ಅಗತ್ಯದ ಕುರಿತು ಸಂದೇಹ ಪ್ರಕಟಿಸಿದ್ದರು. ಪ್ರತಿಪಕ್ಷಗಳು ಹುಯಿಲೆಬ್ಬಿಸಿದ್ದವು. ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲು ಉಂಡಿತು. ನಿತೀಶ್ ಅವರ ಸಂಯುಕ್ತ ಜನತಾದಳ ಮತ್ತು ಲಾಲೂಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಒಟ್ಟುಗೂಡಿ ಅಧಿಕಾರ ಸೂತ್ರ ಹಿಡಿದವು. ಜಾತಿ ಆಧಾರಿತ ಮೀಸಲಾತಿ ಕುರಿತು ಸಾಮರಸ್ಯದ ವಾತಾವರಣದಲ್ಲಿ ಚರ್ಚೆ ನಡೆಯಬೇಕೆಂದು ಇತ್ತೀಚೆಗೆ ಮತ್ತೆ ಹೇಳಿದ್ದರು ಸರಸಂಘಚಾಲಕರು.

ಮೀಸಲಾತಿ ಎಂಬುದು ಅಭಿವೃದ್ಧಿಗೆ ಅಡ್ಡಿ ಎಂಬ ನಿರಂತರ ಪ್ರಚಾರವನ್ನು ಜಾರಿಯಲ್ಲಿ ಇಡಲಾಗಿದೆ. ನೂರಕ್ಕೆ ನೂರು ಮೀಸಲಾತಿ ಪಡೆಯುತ್ತ ಬಂದಿರುವ ಒಂದು ಸಂಘಟನೆಯ ಜನ ತಳವರ್ಗಗಳ ಮೀಸಲಾತಿಯನ್ನು ವಿರೋಧಿಸುತ್ತ ಬಂದಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಆಚರಣೆಯಲ್ಲಿ ಕೊಂದಿರುವವರು, ಬಾಯಿಮಾತಿನಲ್ಲಿ ಅವರನ್ನು ಕೊಂಡಾಡತೊಡಗಿದ್ದಾರೆ. ಅವರ ಹೆಸರಿನಲ್ಲಿ ಸ್ಥಾವರಗಳನ್ನು ಎಬ್ಬಿಸಿ ನಿಲ್ಲಿಸತೊಡಗಿದ್ದಾರೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನು ಕೇಂದ್ರ ಮಂತ್ರಿಗಳೇ ಆಡತೊಡಗಿದ್ದಾರೆ. ಮೂಲ ಸಂವಿಧಾನದಲ್ಲಿ ಇರಲಿಲ್ಲವೆಂದು ಹೇಳಿ ಸೆಕ್ಯೂಲರ್ ಪದವನ್ನೇ ಸಂವಿಧಾನದ ಮುನ್ನುಡಿಯಿಂದ ಕೈ ಬಿಡುವ ಹುನ್ನಾರವೂ ಜರುಗಿತು. ಹಿಂದೂ ಬಹುಸಂಖ್ಯಾತ ರಾಷ್ಟ್ರವಾದ ವಿಜೃಂಭಿಸತೊಡಗಿದೆ. ಅಲ್ಪಸಂಖ್ಯಾತರು ದಲಿತರು ಆದಿವಾಸಿಗಳ ಬದುಕುಗಳು ದುರ್ಭರವಾಗಿವೆ. ರಾಜ್ಯಸಭೆಯಲ್ಲಿ ಆಳುವ ಪಕ್ಷಕ್ಕೆ ಬಹುಮತ ಇಲ್ಲದಿದ್ದರೂ ತ್ರಿವಳಿ ತಲಾಖ್ ರದ್ದು ಮಾಡಿದ ಮಸೂದೆಗೆ ಅಂಗೀಕಾರ ದಕ್ಕಿಸಿಕೊಳ್ಳಲಾಯಿತು. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಅಲ್ಲಿನ ಜನಪ್ರತಿಧಿನಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ರದ್ದು ಮಾಡಿ ಜೀರ್ಣಿಸಿಕೊಳ್ಳಲಾಗುತ್ತಿದೆ. ಮೀಸಲಾತಿಯ ಕಡುಬೆಂಬಲಿಗ ಶಕ್ತಿಗಳ ದನಿ ಕ್ಷೀಣವಾಗಿದೆ. ಕಬ್ಬಿಣ ಇಷ್ಟು ಬಿಸಿಯಾಗಿರುವ ಸನ್ನಿವೇಶವಿದು. ಇಂತಹ ಸನ್ನಿವೇಶದಲ್ಲಿ ಮೀಸಲಾತಿ ಕುರಿತು ಚರ್ಚೆ ಮಾಡಬೇಕೆಂದು ಸರಸಂಘಚಾಲಕರು ಕರೆ ನೀಡಿದ್ದು ಆಕಸ್ಮಿಕ ಆಗಿರಲಿಲ್ಲ.

ಮೀಸಲಾತಿಯನ್ನು ನಿಷ್ಪಕ್ಷಪಾತ ಜನರ ಸಮಿತಿಯೊಂದು ಮರುವಿಮರ್ಶೆಗೆ ಒಳಪಡಿಸಬೇಕು ಎಂಬ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾ 1981ರಲ್ಲೇ ಅಂಗೀಕರಿಸಿತ್ತು. 1985ರಲ್ಲಿ ಇದೇ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಅಂಗೀಕರಿಸಲಾಗಿತ್ತು.

ಈ ಸಮಾಜದಲ್ಲಿ ಅಸಮಾನತೆ ಇರುವತನಕ ನಾವು ಮೀಸಲಾತಿಯನ್ನು ಬೆಂಬಲಿಸುತ್ತೇವೆ ಎಂಬ ಮಾತನ್ನು ಆಡುತ್ತಲೇ ಮರುವಿಮರ್ಶೆಯ ಕಿಡಿಯನ್ನೂ ಆರದಂತೆ ಕಾಪಾಡಿಕೊಂಡು ಬಂದಿದ್ದಾರೆ ಮೋಹನ್ ಭಾಗವತ್.

ಮೋದಿ-ಶಾ ಜೋಡಿಗೆ ಮೀಸಲಾತಿ ಕುರಿತು ಯಾವ ಸಹಾನುಭೂತಿಯೂ ಇಲ್ಲ. ಸಹಾನುಭೂತಿಯ ಸೈದ್ಧಾಂತಿಕ ಹಿನ್ನೆಲೆಯಿಂದ ಬಂದವರೂ ಅಲ್ಲ. ಮೀಸಲಾತಿಗೆ ಮಂಗಳ ಹಾಡುವ ಕಾರ್ಯಸೂಚಿಯ ಹಿನ್ನೆಲೆ ಅವರದು. ಆದರೆ ಚುನಾವಣಾ ರಾಜಕಾರಣ ಅವರ ಕೈಗಳನ್ನು ಈಗಲೂ ಕಟ್ಟಿ ಹಾಕಿದೆ. ಹೀಗಾಗಿ ತಳವರ್ಗಗಳ ಮೀಸಲಾತಿಯನ್ನು ತರಾತುರಿಯಲ್ಲಿ ಕಿತ್ತು ಹಾಕಲು ಅವರು ಕೈಹಾಕುತ್ತಿಲ್ಲ. ಅನುಕೂಲಕರ ಸಮಯದ ನಿರೀಕ್ಷೆಯಲ್ಲಿದ್ದಾರೆ ಅವರು.

ಇಂತಹ ಸನ್ನಿವೇಶದಲ್ಲಿ ಹೊರಬಿದ್ದಿರುವ ಸುಪ್ರೀಮ್ ಕೋರ್ಟ್ ತೀರ್ಪಿನ ಬಳಕೆ-ದುರ್ಬಳಕೆ ಹೇಗೆಲ್ಲ ಆಗಲಿದೆ ಎಂಬುದು ಆತಂಕದಿಂದ ಕಾದು ನೋಡಬೇಕಿರುವ ಮತ್ತು ಹೋರಾಟಕ್ಕೆ ಸಜ್ಜಾಗಬೇಕಿರುವ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...