Homeಬಹುಜನ ಭಾರತಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಬಡ್ತಿಯಲ್ಲಿ ಮೀಸಲಾತಿ ಕಡ್ಡಾಯ ಅಲ್ಲ ಎಂದು ಉತ್ತರಾಖಂಡದ ಪ್ರಕರಣವೊಂದರಲ್ಲಿ ಸುಪ್ರೀಮ್ ಕೋರ್ಟ್ ನೀಡಿರುವ ತೀರ್ಪು ಕಳವಳಕಾರಿ. ನೂರಾರು ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವೊಂದಕ್ಕೆ ಆಗಿರುವ ಹಿನ್ನಡೆ. ಸಾಮಾಜಿಕ ನ್ಯಾಯ ನೀಡಿಕೆಯ ಪರಿಕಲ್ಪನೆಯ ಬೇರಿಗೆ ಬೀಸಿದ ಕೊಡಲಿಯೇಟು.

ಒಂದು ಅರ್ಥದಲ್ಲಿ ಮೀಸಲಾತಿ ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದುಬಿಟ್ಟಿದೆ. ಮೀಸಲಾತಿಯನ್ನು ನೀಡಬಯಸುವ ರಾಜ್ಯವು ಮೊದಲು ಆಯಾ ಜಾತಿಗಳು ಪಂಗಡಗಳು ಸರ್ಕಾರಿ ಸೇವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾತಿನಿಧ್ಯ ಪಡೆದಿಲ್ಲ ಎಂಬ ಅಂಕಿಅಂಶಗಳನ್ನು ಕಲೆಹಾಕಬೇಕು ಎಂದು ವಿಧಿಸಿದೆ.

ಮೀಸಲಾತಿ ಮೂಲಭೂತ ಹಕ್ಕು ಅಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಬೇಕೆಂಬುದು ಕಡ್ಡಾಯವೇನೂ ಅಲ್ಲ ಎಂದೂ ನ್ಯಾಯಾಲಯ ಸಾರಿ ಹೇಳಿದೆ. ಆದರೆ ಸಂವಿಧಾನದ 16ನೆಯ ಅನುಚ್ಛೇದವು ಸಮಾನತೆಯ ಹಕ್ಕನ್ನೂ ನೀಡುತ್ತದೆ. ಸರ್ಕಾರಿ ಉದ್ಯೋಗಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ದೊರೆಯದ ಗುಂಪುಗಳ ರಕ್ಷಣೆಗೆ ಧಾವಿಸುವುದು ಸರ್ಕಾರದ ಆದ್ಯ ಕರ್ತವ್ಯ ಎನ್ನುತ್ತಾರೆ ಸಂವಿಧಾನ ತಜ್ಞರು.

ಮೀಸಲಾತಿ ನೀಡಬೇಕಿದ್ದರೆ ಆಯಾ ಜಾತಿ ಪಂಗಡಗಳ ಹಿಂದುಳಿದಿರುವಿಕೆಯನ್ನು ಸಾಬೀತುಪಡಿಸಬೇಕು ಎಂಬುದು ಸುಪ್ರೀಮ್ ಕೋರ್ಟ್ ಈ ಹಿಂದೆ ನಾಗರಾಜ್ ತೀರ್ಪಿನಲ್ಲಿ ವಿಧಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆಯು ಅವುಗಳನ್ನು ಸಂಸತ್ತು ಅಧ್ಯಕ್ಷೀಯ ಪಟ್ಟಿಗೆ ಸೇರಿಸಿದ ಕ್ಷಣವೇ ಸ್ಥಾಪಿತವಾಗಿರುತ್ತದೆ. ಜಾತಿ ಪಂಗಡಗಳು ಹಿಂದುಳಿದಿವೆ ಎಂಬುದನ್ನು ಒಮ್ಮೆ ಸಾರಿದ ನಂತರವೂ ಸರ್ಕಾರಗಳು ಅವುಗಳಿಗೆ ನೆರವು ನೀಡಕೂಡದು ಎಂದು ಹೇಳುವುದು ಅಸಂಬದ್ಧ. ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವುಗಳು ಎಂಬ ವರ್ಗೀಕರಣಕ್ಕೆ ಅರ್ಥವೇ ಇಲ್ಲವಾಗುತ್ತದೆ.

ಮೀಸಲಾತಿಯನ್ನು ನೀಡುವುದಿಲ್ಲವೆಂಬ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿಯುವ ಸುಪ್ರೀಮ್ ಕೋರ್ಟು, ಮೀಸಲಾತಿ ನಿರಾಕರಿಸುವ ರಾಜ್ಯ ಸರ್ಕಾರದ ವಿವೇಚನೆಯನ್ನು ಮಾನ್ಯ ಮಾಡುತ್ತದೆ. ಆದರೆ ಮೀಸಲಾತಿಯನ್ನು ನೀಡಲು ಮುಂದಾಗುವ ರಾಜ್ಯ ಸರ್ಕಾರವನ್ನು ಸಮಾನತೆಯ ಕಾರಣ ಮುಂದೆ ಮಾಡಿ ನಿರ್ಬಂಧಿಸುತ್ತದೆ. ರಾಜ್ಯ ಸರ್ಕಾರಗಳ ವಿವೇಚನಾ ಅಧಿಕಾರವನ್ನು ಮಾನ್ಯ ಮಾಡುವುದಿಲ್ಲ. ಈ ಮಾತಿಗೆ ಹಲವು ನಿದರ್ಶನಗಳಿವೆ.

ಜಾತಿವ್ಯವಸ್ಥೆಯ ಒಳಿತನ್ನು ಎತ್ತಿ ಹೇಳುವ ಮತ್ತು ಮೀಸಲಾತಿಯನ್ನು ಅಂತ್ಯಗೊಳಿಸುವ ಹಾಗೂ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಂದ್ರ ಸರ್ಕಾರದ ಒಳಗಿನಿಂದ ಮತ್ತು ಹೊರಗಿನಿಂದ ಕಾಲಕಾಲಕ್ಕೆ ಕೇಳಿಬರುತ್ತಿವೆ. ಭಯ ಮತ್ತು ಅಪಮಾನದ ಲಜ್ಜೆಯನ್ನು ಬದಿಗೊತ್ತಿರುವ ದಲಿತರು ಪ್ರತಿರೋಧದ ಮತ್ತು ತಿಳಿವಳಿಕೆಯ ಹಾದಿ ಹಿಡಿದಿರುವುದು ಮೇಲ್ಜಾತಿಗಳನ್ನು ಇನ್ನಷ್ಟು ಕೆರಳಿಸಿ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಅಂಶವನ್ನು ಅಧ್ಯಯನಗಳು ಸಾರಿವೆ. ಇಂತಹ ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ.66ರಷ್ಟು ಹೆಚ್ಚಿದೆ. ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಬಲಾತ್ಕಾರ ನಡೆಯುತ್ತಿದೆ. ಈ ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣಗಳು ಇಮ್ಮಡಿಯಾಗಿವೆ. ವಿಚಾರಣೆಗೆ ಕಾದಿರುವ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಾಕಿಯ ಬೆಟ್ಟ ಬೆಳೆಯುತ್ತಿದೆ. ಸಜೆಯಲ್ಲಿ ಕೊನೆಯಾಗುವ ಪ್ರಕರಣಗಳ ಪ್ರಮಾಣ ಶೇ.28ಕ್ಕೆ ಕುಸಿದಿದೆ

2015ರಲ್ಲಿ ಸರಸಂಘ ಚಾಲಕ ಮೋಹನ್ ರಾವ್ ಭಾಗವತ್ ಜಾತಿ ಆಧಾರಿತ ಮೀಸಲಾತಿಯ ಅಗತ್ಯದ ಕುರಿತು ಸಂದೇಹ ಪ್ರಕಟಿಸಿದ್ದರು. ಪ್ರತಿಪಕ್ಷಗಳು ಹುಯಿಲೆಬ್ಬಿಸಿದ್ದವು. ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲು ಉಂಡಿತು. ನಿತೀಶ್ ಅವರ ಸಂಯುಕ್ತ ಜನತಾದಳ ಮತ್ತು ಲಾಲೂಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಒಟ್ಟುಗೂಡಿ ಅಧಿಕಾರ ಸೂತ್ರ ಹಿಡಿದವು. ಜಾತಿ ಆಧಾರಿತ ಮೀಸಲಾತಿ ಕುರಿತು ಸಾಮರಸ್ಯದ ವಾತಾವರಣದಲ್ಲಿ ಚರ್ಚೆ ನಡೆಯಬೇಕೆಂದು ಇತ್ತೀಚೆಗೆ ಮತ್ತೆ ಹೇಳಿದ್ದರು ಸರಸಂಘಚಾಲಕರು.

ಮೀಸಲಾತಿ ಎಂಬುದು ಅಭಿವೃದ್ಧಿಗೆ ಅಡ್ಡಿ ಎಂಬ ನಿರಂತರ ಪ್ರಚಾರವನ್ನು ಜಾರಿಯಲ್ಲಿ ಇಡಲಾಗಿದೆ. ನೂರಕ್ಕೆ ನೂರು ಮೀಸಲಾತಿ ಪಡೆಯುತ್ತ ಬಂದಿರುವ ಒಂದು ಸಂಘಟನೆಯ ಜನ ತಳವರ್ಗಗಳ ಮೀಸಲಾತಿಯನ್ನು ವಿರೋಧಿಸುತ್ತ ಬಂದಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಆಚರಣೆಯಲ್ಲಿ ಕೊಂದಿರುವವರು, ಬಾಯಿಮಾತಿನಲ್ಲಿ ಅವರನ್ನು ಕೊಂಡಾಡತೊಡಗಿದ್ದಾರೆ. ಅವರ ಹೆಸರಿನಲ್ಲಿ ಸ್ಥಾವರಗಳನ್ನು ಎಬ್ಬಿಸಿ ನಿಲ್ಲಿಸತೊಡಗಿದ್ದಾರೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನು ಕೇಂದ್ರ ಮಂತ್ರಿಗಳೇ ಆಡತೊಡಗಿದ್ದಾರೆ. ಮೂಲ ಸಂವಿಧಾನದಲ್ಲಿ ಇರಲಿಲ್ಲವೆಂದು ಹೇಳಿ ಸೆಕ್ಯೂಲರ್ ಪದವನ್ನೇ ಸಂವಿಧಾನದ ಮುನ್ನುಡಿಯಿಂದ ಕೈ ಬಿಡುವ ಹುನ್ನಾರವೂ ಜರುಗಿತು. ಹಿಂದೂ ಬಹುಸಂಖ್ಯಾತ ರಾಷ್ಟ್ರವಾದ ವಿಜೃಂಭಿಸತೊಡಗಿದೆ. ಅಲ್ಪಸಂಖ್ಯಾತರು ದಲಿತರು ಆದಿವಾಸಿಗಳ ಬದುಕುಗಳು ದುರ್ಭರವಾಗಿವೆ. ರಾಜ್ಯಸಭೆಯಲ್ಲಿ ಆಳುವ ಪಕ್ಷಕ್ಕೆ ಬಹುಮತ ಇಲ್ಲದಿದ್ದರೂ ತ್ರಿವಳಿ ತಲಾಖ್ ರದ್ದು ಮಾಡಿದ ಮಸೂದೆಗೆ ಅಂಗೀಕಾರ ದಕ್ಕಿಸಿಕೊಳ್ಳಲಾಯಿತು. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಅಲ್ಲಿನ ಜನಪ್ರತಿಧಿನಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ರದ್ದು ಮಾಡಿ ಜೀರ್ಣಿಸಿಕೊಳ್ಳಲಾಗುತ್ತಿದೆ. ಮೀಸಲಾತಿಯ ಕಡುಬೆಂಬಲಿಗ ಶಕ್ತಿಗಳ ದನಿ ಕ್ಷೀಣವಾಗಿದೆ. ಕಬ್ಬಿಣ ಇಷ್ಟು ಬಿಸಿಯಾಗಿರುವ ಸನ್ನಿವೇಶವಿದು. ಇಂತಹ ಸನ್ನಿವೇಶದಲ್ಲಿ ಮೀಸಲಾತಿ ಕುರಿತು ಚರ್ಚೆ ಮಾಡಬೇಕೆಂದು ಸರಸಂಘಚಾಲಕರು ಕರೆ ನೀಡಿದ್ದು ಆಕಸ್ಮಿಕ ಆಗಿರಲಿಲ್ಲ.

ಮೀಸಲಾತಿಯನ್ನು ನಿಷ್ಪಕ್ಷಪಾತ ಜನರ ಸಮಿತಿಯೊಂದು ಮರುವಿಮರ್ಶೆಗೆ ಒಳಪಡಿಸಬೇಕು ಎಂಬ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾ 1981ರಲ್ಲೇ ಅಂಗೀಕರಿಸಿತ್ತು. 1985ರಲ್ಲಿ ಇದೇ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಅಂಗೀಕರಿಸಲಾಗಿತ್ತು.

ಈ ಸಮಾಜದಲ್ಲಿ ಅಸಮಾನತೆ ಇರುವತನಕ ನಾವು ಮೀಸಲಾತಿಯನ್ನು ಬೆಂಬಲಿಸುತ್ತೇವೆ ಎಂಬ ಮಾತನ್ನು ಆಡುತ್ತಲೇ ಮರುವಿಮರ್ಶೆಯ ಕಿಡಿಯನ್ನೂ ಆರದಂತೆ ಕಾಪಾಡಿಕೊಂಡು ಬಂದಿದ್ದಾರೆ ಮೋಹನ್ ಭಾಗವತ್.

ಮೋದಿ-ಶಾ ಜೋಡಿಗೆ ಮೀಸಲಾತಿ ಕುರಿತು ಯಾವ ಸಹಾನುಭೂತಿಯೂ ಇಲ್ಲ. ಸಹಾನುಭೂತಿಯ ಸೈದ್ಧಾಂತಿಕ ಹಿನ್ನೆಲೆಯಿಂದ ಬಂದವರೂ ಅಲ್ಲ. ಮೀಸಲಾತಿಗೆ ಮಂಗಳ ಹಾಡುವ ಕಾರ್ಯಸೂಚಿಯ ಹಿನ್ನೆಲೆ ಅವರದು. ಆದರೆ ಚುನಾವಣಾ ರಾಜಕಾರಣ ಅವರ ಕೈಗಳನ್ನು ಈಗಲೂ ಕಟ್ಟಿ ಹಾಕಿದೆ. ಹೀಗಾಗಿ ತಳವರ್ಗಗಳ ಮೀಸಲಾತಿಯನ್ನು ತರಾತುರಿಯಲ್ಲಿ ಕಿತ್ತು ಹಾಕಲು ಅವರು ಕೈಹಾಕುತ್ತಿಲ್ಲ. ಅನುಕೂಲಕರ ಸಮಯದ ನಿರೀಕ್ಷೆಯಲ್ಲಿದ್ದಾರೆ ಅವರು.

ಇಂತಹ ಸನ್ನಿವೇಶದಲ್ಲಿ ಹೊರಬಿದ್ದಿರುವ ಸುಪ್ರೀಮ್ ಕೋರ್ಟ್ ತೀರ್ಪಿನ ಬಳಕೆ-ದುರ್ಬಳಕೆ ಹೇಗೆಲ್ಲ ಆಗಲಿದೆ ಎಂಬುದು ಆತಂಕದಿಂದ ಕಾದು ನೋಡಬೇಕಿರುವ ಮತ್ತು ಹೋರಾಟಕ್ಕೆ ಸಜ್ಜಾಗಬೇಕಿರುವ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...