Homeಬಹುಜನ ಭಾರತಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಬಡ್ತಿಯಲ್ಲಿ ಮೀಸಲಾತಿ ಕಡ್ಡಾಯ ಅಲ್ಲ ಎಂದು ಉತ್ತರಾಖಂಡದ ಪ್ರಕರಣವೊಂದರಲ್ಲಿ ಸುಪ್ರೀಮ್ ಕೋರ್ಟ್ ನೀಡಿರುವ ತೀರ್ಪು ಕಳವಳಕಾರಿ. ನೂರಾರು ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವೊಂದಕ್ಕೆ ಆಗಿರುವ ಹಿನ್ನಡೆ. ಸಾಮಾಜಿಕ ನ್ಯಾಯ ನೀಡಿಕೆಯ ಪರಿಕಲ್ಪನೆಯ ಬೇರಿಗೆ ಬೀಸಿದ ಕೊಡಲಿಯೇಟು.

ಒಂದು ಅರ್ಥದಲ್ಲಿ ಮೀಸಲಾತಿ ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದುಬಿಟ್ಟಿದೆ. ಮೀಸಲಾತಿಯನ್ನು ನೀಡಬಯಸುವ ರಾಜ್ಯವು ಮೊದಲು ಆಯಾ ಜಾತಿಗಳು ಪಂಗಡಗಳು ಸರ್ಕಾರಿ ಸೇವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾತಿನಿಧ್ಯ ಪಡೆದಿಲ್ಲ ಎಂಬ ಅಂಕಿಅಂಶಗಳನ್ನು ಕಲೆಹಾಕಬೇಕು ಎಂದು ವಿಧಿಸಿದೆ.

ಮೀಸಲಾತಿ ಮೂಲಭೂತ ಹಕ್ಕು ಅಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಬೇಕೆಂಬುದು ಕಡ್ಡಾಯವೇನೂ ಅಲ್ಲ ಎಂದೂ ನ್ಯಾಯಾಲಯ ಸಾರಿ ಹೇಳಿದೆ. ಆದರೆ ಸಂವಿಧಾನದ 16ನೆಯ ಅನುಚ್ಛೇದವು ಸಮಾನತೆಯ ಹಕ್ಕನ್ನೂ ನೀಡುತ್ತದೆ. ಸರ್ಕಾರಿ ಉದ್ಯೋಗಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ದೊರೆಯದ ಗುಂಪುಗಳ ರಕ್ಷಣೆಗೆ ಧಾವಿಸುವುದು ಸರ್ಕಾರದ ಆದ್ಯ ಕರ್ತವ್ಯ ಎನ್ನುತ್ತಾರೆ ಸಂವಿಧಾನ ತಜ್ಞರು.

ಮೀಸಲಾತಿ ನೀಡಬೇಕಿದ್ದರೆ ಆಯಾ ಜಾತಿ ಪಂಗಡಗಳ ಹಿಂದುಳಿದಿರುವಿಕೆಯನ್ನು ಸಾಬೀತುಪಡಿಸಬೇಕು ಎಂಬುದು ಸುಪ್ರೀಮ್ ಕೋರ್ಟ್ ಈ ಹಿಂದೆ ನಾಗರಾಜ್ ತೀರ್ಪಿನಲ್ಲಿ ವಿಧಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆಯು ಅವುಗಳನ್ನು ಸಂಸತ್ತು ಅಧ್ಯಕ್ಷೀಯ ಪಟ್ಟಿಗೆ ಸೇರಿಸಿದ ಕ್ಷಣವೇ ಸ್ಥಾಪಿತವಾಗಿರುತ್ತದೆ. ಜಾತಿ ಪಂಗಡಗಳು ಹಿಂದುಳಿದಿವೆ ಎಂಬುದನ್ನು ಒಮ್ಮೆ ಸಾರಿದ ನಂತರವೂ ಸರ್ಕಾರಗಳು ಅವುಗಳಿಗೆ ನೆರವು ನೀಡಕೂಡದು ಎಂದು ಹೇಳುವುದು ಅಸಂಬದ್ಧ. ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವುಗಳು ಎಂಬ ವರ್ಗೀಕರಣಕ್ಕೆ ಅರ್ಥವೇ ಇಲ್ಲವಾಗುತ್ತದೆ.

ಮೀಸಲಾತಿಯನ್ನು ನೀಡುವುದಿಲ್ಲವೆಂಬ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿಯುವ ಸುಪ್ರೀಮ್ ಕೋರ್ಟು, ಮೀಸಲಾತಿ ನಿರಾಕರಿಸುವ ರಾಜ್ಯ ಸರ್ಕಾರದ ವಿವೇಚನೆಯನ್ನು ಮಾನ್ಯ ಮಾಡುತ್ತದೆ. ಆದರೆ ಮೀಸಲಾತಿಯನ್ನು ನೀಡಲು ಮುಂದಾಗುವ ರಾಜ್ಯ ಸರ್ಕಾರವನ್ನು ಸಮಾನತೆಯ ಕಾರಣ ಮುಂದೆ ಮಾಡಿ ನಿರ್ಬಂಧಿಸುತ್ತದೆ. ರಾಜ್ಯ ಸರ್ಕಾರಗಳ ವಿವೇಚನಾ ಅಧಿಕಾರವನ್ನು ಮಾನ್ಯ ಮಾಡುವುದಿಲ್ಲ. ಈ ಮಾತಿಗೆ ಹಲವು ನಿದರ್ಶನಗಳಿವೆ.

ಜಾತಿವ್ಯವಸ್ಥೆಯ ಒಳಿತನ್ನು ಎತ್ತಿ ಹೇಳುವ ಮತ್ತು ಮೀಸಲಾತಿಯನ್ನು ಅಂತ್ಯಗೊಳಿಸುವ ಹಾಗೂ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಂದ್ರ ಸರ್ಕಾರದ ಒಳಗಿನಿಂದ ಮತ್ತು ಹೊರಗಿನಿಂದ ಕಾಲಕಾಲಕ್ಕೆ ಕೇಳಿಬರುತ್ತಿವೆ. ಭಯ ಮತ್ತು ಅಪಮಾನದ ಲಜ್ಜೆಯನ್ನು ಬದಿಗೊತ್ತಿರುವ ದಲಿತರು ಪ್ರತಿರೋಧದ ಮತ್ತು ತಿಳಿವಳಿಕೆಯ ಹಾದಿ ಹಿಡಿದಿರುವುದು ಮೇಲ್ಜಾತಿಗಳನ್ನು ಇನ್ನಷ್ಟು ಕೆರಳಿಸಿ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಅಂಶವನ್ನು ಅಧ್ಯಯನಗಳು ಸಾರಿವೆ. ಇಂತಹ ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ.66ರಷ್ಟು ಹೆಚ್ಚಿದೆ. ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಬಲಾತ್ಕಾರ ನಡೆಯುತ್ತಿದೆ. ಈ ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣಗಳು ಇಮ್ಮಡಿಯಾಗಿವೆ. ವಿಚಾರಣೆಗೆ ಕಾದಿರುವ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಾಕಿಯ ಬೆಟ್ಟ ಬೆಳೆಯುತ್ತಿದೆ. ಸಜೆಯಲ್ಲಿ ಕೊನೆಯಾಗುವ ಪ್ರಕರಣಗಳ ಪ್ರಮಾಣ ಶೇ.28ಕ್ಕೆ ಕುಸಿದಿದೆ

2015ರಲ್ಲಿ ಸರಸಂಘ ಚಾಲಕ ಮೋಹನ್ ರಾವ್ ಭಾಗವತ್ ಜಾತಿ ಆಧಾರಿತ ಮೀಸಲಾತಿಯ ಅಗತ್ಯದ ಕುರಿತು ಸಂದೇಹ ಪ್ರಕಟಿಸಿದ್ದರು. ಪ್ರತಿಪಕ್ಷಗಳು ಹುಯಿಲೆಬ್ಬಿಸಿದ್ದವು. ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲು ಉಂಡಿತು. ನಿತೀಶ್ ಅವರ ಸಂಯುಕ್ತ ಜನತಾದಳ ಮತ್ತು ಲಾಲೂಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಒಟ್ಟುಗೂಡಿ ಅಧಿಕಾರ ಸೂತ್ರ ಹಿಡಿದವು. ಜಾತಿ ಆಧಾರಿತ ಮೀಸಲಾತಿ ಕುರಿತು ಸಾಮರಸ್ಯದ ವಾತಾವರಣದಲ್ಲಿ ಚರ್ಚೆ ನಡೆಯಬೇಕೆಂದು ಇತ್ತೀಚೆಗೆ ಮತ್ತೆ ಹೇಳಿದ್ದರು ಸರಸಂಘಚಾಲಕರು.

ಮೀಸಲಾತಿ ಎಂಬುದು ಅಭಿವೃದ್ಧಿಗೆ ಅಡ್ಡಿ ಎಂಬ ನಿರಂತರ ಪ್ರಚಾರವನ್ನು ಜಾರಿಯಲ್ಲಿ ಇಡಲಾಗಿದೆ. ನೂರಕ್ಕೆ ನೂರು ಮೀಸಲಾತಿ ಪಡೆಯುತ್ತ ಬಂದಿರುವ ಒಂದು ಸಂಘಟನೆಯ ಜನ ತಳವರ್ಗಗಳ ಮೀಸಲಾತಿಯನ್ನು ವಿರೋಧಿಸುತ್ತ ಬಂದಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಆಚರಣೆಯಲ್ಲಿ ಕೊಂದಿರುವವರು, ಬಾಯಿಮಾತಿನಲ್ಲಿ ಅವರನ್ನು ಕೊಂಡಾಡತೊಡಗಿದ್ದಾರೆ. ಅವರ ಹೆಸರಿನಲ್ಲಿ ಸ್ಥಾವರಗಳನ್ನು ಎಬ್ಬಿಸಿ ನಿಲ್ಲಿಸತೊಡಗಿದ್ದಾರೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನು ಕೇಂದ್ರ ಮಂತ್ರಿಗಳೇ ಆಡತೊಡಗಿದ್ದಾರೆ. ಮೂಲ ಸಂವಿಧಾನದಲ್ಲಿ ಇರಲಿಲ್ಲವೆಂದು ಹೇಳಿ ಸೆಕ್ಯೂಲರ್ ಪದವನ್ನೇ ಸಂವಿಧಾನದ ಮುನ್ನುಡಿಯಿಂದ ಕೈ ಬಿಡುವ ಹುನ್ನಾರವೂ ಜರುಗಿತು. ಹಿಂದೂ ಬಹುಸಂಖ್ಯಾತ ರಾಷ್ಟ್ರವಾದ ವಿಜೃಂಭಿಸತೊಡಗಿದೆ. ಅಲ್ಪಸಂಖ್ಯಾತರು ದಲಿತರು ಆದಿವಾಸಿಗಳ ಬದುಕುಗಳು ದುರ್ಭರವಾಗಿವೆ. ರಾಜ್ಯಸಭೆಯಲ್ಲಿ ಆಳುವ ಪಕ್ಷಕ್ಕೆ ಬಹುಮತ ಇಲ್ಲದಿದ್ದರೂ ತ್ರಿವಳಿ ತಲಾಖ್ ರದ್ದು ಮಾಡಿದ ಮಸೂದೆಗೆ ಅಂಗೀಕಾರ ದಕ್ಕಿಸಿಕೊಳ್ಳಲಾಯಿತು. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಅಲ್ಲಿನ ಜನಪ್ರತಿಧಿನಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ರದ್ದು ಮಾಡಿ ಜೀರ್ಣಿಸಿಕೊಳ್ಳಲಾಗುತ್ತಿದೆ. ಮೀಸಲಾತಿಯ ಕಡುಬೆಂಬಲಿಗ ಶಕ್ತಿಗಳ ದನಿ ಕ್ಷೀಣವಾಗಿದೆ. ಕಬ್ಬಿಣ ಇಷ್ಟು ಬಿಸಿಯಾಗಿರುವ ಸನ್ನಿವೇಶವಿದು. ಇಂತಹ ಸನ್ನಿವೇಶದಲ್ಲಿ ಮೀಸಲಾತಿ ಕುರಿತು ಚರ್ಚೆ ಮಾಡಬೇಕೆಂದು ಸರಸಂಘಚಾಲಕರು ಕರೆ ನೀಡಿದ್ದು ಆಕಸ್ಮಿಕ ಆಗಿರಲಿಲ್ಲ.

ಮೀಸಲಾತಿಯನ್ನು ನಿಷ್ಪಕ್ಷಪಾತ ಜನರ ಸಮಿತಿಯೊಂದು ಮರುವಿಮರ್ಶೆಗೆ ಒಳಪಡಿಸಬೇಕು ಎಂಬ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾ 1981ರಲ್ಲೇ ಅಂಗೀಕರಿಸಿತ್ತು. 1985ರಲ್ಲಿ ಇದೇ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಅಂಗೀಕರಿಸಲಾಗಿತ್ತು.

ಈ ಸಮಾಜದಲ್ಲಿ ಅಸಮಾನತೆ ಇರುವತನಕ ನಾವು ಮೀಸಲಾತಿಯನ್ನು ಬೆಂಬಲಿಸುತ್ತೇವೆ ಎಂಬ ಮಾತನ್ನು ಆಡುತ್ತಲೇ ಮರುವಿಮರ್ಶೆಯ ಕಿಡಿಯನ್ನೂ ಆರದಂತೆ ಕಾಪಾಡಿಕೊಂಡು ಬಂದಿದ್ದಾರೆ ಮೋಹನ್ ಭಾಗವತ್.

ಮೋದಿ-ಶಾ ಜೋಡಿಗೆ ಮೀಸಲಾತಿ ಕುರಿತು ಯಾವ ಸಹಾನುಭೂತಿಯೂ ಇಲ್ಲ. ಸಹಾನುಭೂತಿಯ ಸೈದ್ಧಾಂತಿಕ ಹಿನ್ನೆಲೆಯಿಂದ ಬಂದವರೂ ಅಲ್ಲ. ಮೀಸಲಾತಿಗೆ ಮಂಗಳ ಹಾಡುವ ಕಾರ್ಯಸೂಚಿಯ ಹಿನ್ನೆಲೆ ಅವರದು. ಆದರೆ ಚುನಾವಣಾ ರಾಜಕಾರಣ ಅವರ ಕೈಗಳನ್ನು ಈಗಲೂ ಕಟ್ಟಿ ಹಾಕಿದೆ. ಹೀಗಾಗಿ ತಳವರ್ಗಗಳ ಮೀಸಲಾತಿಯನ್ನು ತರಾತುರಿಯಲ್ಲಿ ಕಿತ್ತು ಹಾಕಲು ಅವರು ಕೈಹಾಕುತ್ತಿಲ್ಲ. ಅನುಕೂಲಕರ ಸಮಯದ ನಿರೀಕ್ಷೆಯಲ್ಲಿದ್ದಾರೆ ಅವರು.

ಇಂತಹ ಸನ್ನಿವೇಶದಲ್ಲಿ ಹೊರಬಿದ್ದಿರುವ ಸುಪ್ರೀಮ್ ಕೋರ್ಟ್ ತೀರ್ಪಿನ ಬಳಕೆ-ದುರ್ಬಳಕೆ ಹೇಗೆಲ್ಲ ಆಗಲಿದೆ ಎಂಬುದು ಆತಂಕದಿಂದ ಕಾದು ನೋಡಬೇಕಿರುವ ಮತ್ತು ಹೋರಾಟಕ್ಕೆ ಸಜ್ಜಾಗಬೇಕಿರುವ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...