Homeಬಹುಜನ ಭಾರತಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಸುಪ್ರೀಮ್ ತೀರ್ಪು- ಮೀಸಲಾತಿಗೆ ಮತ್ತೆ ಒದಗಿದ ಕುತ್ತು

ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸರ್ಕಾರಿ ಉದ್ಯೋಗಗಳು ಮತ್ತು ಬಡ್ತಿಯಲ್ಲಿ ಮೀಸಲಾತಿ ಕಡ್ಡಾಯ ಅಲ್ಲ ಎಂದು ಉತ್ತರಾಖಂಡದ ಪ್ರಕರಣವೊಂದರಲ್ಲಿ ಸುಪ್ರೀಮ್ ಕೋರ್ಟ್ ನೀಡಿರುವ ತೀರ್ಪು ಕಳವಳಕಾರಿ. ನೂರಾರು ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವೊಂದಕ್ಕೆ ಆಗಿರುವ ಹಿನ್ನಡೆ. ಸಾಮಾಜಿಕ ನ್ಯಾಯ ನೀಡಿಕೆಯ ಪರಿಕಲ್ಪನೆಯ ಬೇರಿಗೆ ಬೀಸಿದ ಕೊಡಲಿಯೇಟು.

ಒಂದು ಅರ್ಥದಲ್ಲಿ ಮೀಸಲಾತಿ ಒದಗಿಸುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದುಬಿಟ್ಟಿದೆ. ಮೀಸಲಾತಿಯನ್ನು ನೀಡಬಯಸುವ ರಾಜ್ಯವು ಮೊದಲು ಆಯಾ ಜಾತಿಗಳು ಪಂಗಡಗಳು ಸರ್ಕಾರಿ ಸೇವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾತಿನಿಧ್ಯ ಪಡೆದಿಲ್ಲ ಎಂಬ ಅಂಕಿಅಂಶಗಳನ್ನು ಕಲೆಹಾಕಬೇಕು ಎಂದು ವಿಧಿಸಿದೆ.

ಮೀಸಲಾತಿ ಮೂಲಭೂತ ಹಕ್ಕು ಅಲ್ಲ. ಹೀಗಾಗಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಬೇಕೆಂಬುದು ಕಡ್ಡಾಯವೇನೂ ಅಲ್ಲ ಎಂದೂ ನ್ಯಾಯಾಲಯ ಸಾರಿ ಹೇಳಿದೆ. ಆದರೆ ಸಂವಿಧಾನದ 16ನೆಯ ಅನುಚ್ಛೇದವು ಸಮಾನತೆಯ ಹಕ್ಕನ್ನೂ ನೀಡುತ್ತದೆ. ಸರ್ಕಾರಿ ಉದ್ಯೋಗಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ದೊರೆಯದ ಗುಂಪುಗಳ ರಕ್ಷಣೆಗೆ ಧಾವಿಸುವುದು ಸರ್ಕಾರದ ಆದ್ಯ ಕರ್ತವ್ಯ ಎನ್ನುತ್ತಾರೆ ಸಂವಿಧಾನ ತಜ್ಞರು.

ಮೀಸಲಾತಿ ನೀಡಬೇಕಿದ್ದರೆ ಆಯಾ ಜಾತಿ ಪಂಗಡಗಳ ಹಿಂದುಳಿದಿರುವಿಕೆಯನ್ನು ಸಾಬೀತುಪಡಿಸಬೇಕು ಎಂಬುದು ಸುಪ್ರೀಮ್ ಕೋರ್ಟ್ ಈ ಹಿಂದೆ ನಾಗರಾಜ್ ತೀರ್ಪಿನಲ್ಲಿ ವಿಧಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿಂದುಳಿದಿರುವಿಕೆಯು ಅವುಗಳನ್ನು ಸಂಸತ್ತು ಅಧ್ಯಕ್ಷೀಯ ಪಟ್ಟಿಗೆ ಸೇರಿಸಿದ ಕ್ಷಣವೇ ಸ್ಥಾಪಿತವಾಗಿರುತ್ತದೆ. ಜಾತಿ ಪಂಗಡಗಳು ಹಿಂದುಳಿದಿವೆ ಎಂಬುದನ್ನು ಒಮ್ಮೆ ಸಾರಿದ ನಂತರವೂ ಸರ್ಕಾರಗಳು ಅವುಗಳಿಗೆ ನೆರವು ನೀಡಕೂಡದು ಎಂದು ಹೇಳುವುದು ಅಸಂಬದ್ಧ. ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವುಗಳು ಎಂಬ ವರ್ಗೀಕರಣಕ್ಕೆ ಅರ್ಥವೇ ಇಲ್ಲವಾಗುತ್ತದೆ.

ಮೀಸಲಾತಿಯನ್ನು ನೀಡುವುದಿಲ್ಲವೆಂಬ ಉತ್ತರಾಖಂಡ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿಯುವ ಸುಪ್ರೀಮ್ ಕೋರ್ಟು, ಮೀಸಲಾತಿ ನಿರಾಕರಿಸುವ ರಾಜ್ಯ ಸರ್ಕಾರದ ವಿವೇಚನೆಯನ್ನು ಮಾನ್ಯ ಮಾಡುತ್ತದೆ. ಆದರೆ ಮೀಸಲಾತಿಯನ್ನು ನೀಡಲು ಮುಂದಾಗುವ ರಾಜ್ಯ ಸರ್ಕಾರವನ್ನು ಸಮಾನತೆಯ ಕಾರಣ ಮುಂದೆ ಮಾಡಿ ನಿರ್ಬಂಧಿಸುತ್ತದೆ. ರಾಜ್ಯ ಸರ್ಕಾರಗಳ ವಿವೇಚನಾ ಅಧಿಕಾರವನ್ನು ಮಾನ್ಯ ಮಾಡುವುದಿಲ್ಲ. ಈ ಮಾತಿಗೆ ಹಲವು ನಿದರ್ಶನಗಳಿವೆ.

ಜಾತಿವ್ಯವಸ್ಥೆಯ ಒಳಿತನ್ನು ಎತ್ತಿ ಹೇಳುವ ಮತ್ತು ಮೀಸಲಾತಿಯನ್ನು ಅಂತ್ಯಗೊಳಿಸುವ ಹಾಗೂ ಸಂವಿಧಾನವನ್ನು ಬದಲಾಯಿಸುವ ಮಾತುಗಳು ಕೇಂದ್ರ ಸರ್ಕಾರದ ಒಳಗಿನಿಂದ ಮತ್ತು ಹೊರಗಿನಿಂದ ಕಾಲಕಾಲಕ್ಕೆ ಕೇಳಿಬರುತ್ತಿವೆ. ಭಯ ಮತ್ತು ಅಪಮಾನದ ಲಜ್ಜೆಯನ್ನು ಬದಿಗೊತ್ತಿರುವ ದಲಿತರು ಪ್ರತಿರೋಧದ ಮತ್ತು ತಿಳಿವಳಿಕೆಯ ಹಾದಿ ಹಿಡಿದಿರುವುದು ಮೇಲ್ಜಾತಿಗಳನ್ನು ಇನ್ನಷ್ಟು ಕೆರಳಿಸಿ ದೌರ್ಜನ್ಯಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಅಂಶವನ್ನು ಅಧ್ಯಯನಗಳು ಸಾರಿವೆ. ಇಂತಹ ಕಠೋರ ವಾಸ್ತವದ ನಡುವೆಯೂ ಪರಿಶಿಷ್ಟ ಜಾತಿ ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆಗುತ್ತಿದೆ ಎಂಬುದಾಗಿ 2018ರಲ್ಲಿ ಸುಪ್ರೀಮ್ ಕೋರ್ಟ್ ಹೇಳಿದ್ದು ಗಾಯದ ಮೇಲೆ ಬರೆ ಎಳೆದದ್ದಕ್ಕಿಂತಲೂ ಕಡಿಮೆಯೇನೂ ಅಲ್ಲ.

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ.66ರಷ್ಟು ಹೆಚ್ಚಿದೆ. ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಬಲಾತ್ಕಾರ ನಡೆಯುತ್ತಿದೆ. ಈ ಹತ್ತು ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣಗಳು ಇಮ್ಮಡಿಯಾಗಿವೆ. ವಿಚಾರಣೆಗೆ ಕಾದಿರುವ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ಬಾಕಿಯ ಬೆಟ್ಟ ಬೆಳೆಯುತ್ತಿದೆ. ಸಜೆಯಲ್ಲಿ ಕೊನೆಯಾಗುವ ಪ್ರಕರಣಗಳ ಪ್ರಮಾಣ ಶೇ.28ಕ್ಕೆ ಕುಸಿದಿದೆ

2015ರಲ್ಲಿ ಸರಸಂಘ ಚಾಲಕ ಮೋಹನ್ ರಾವ್ ಭಾಗವತ್ ಜಾತಿ ಆಧಾರಿತ ಮೀಸಲಾತಿಯ ಅಗತ್ಯದ ಕುರಿತು ಸಂದೇಹ ಪ್ರಕಟಿಸಿದ್ದರು. ಪ್ರತಿಪಕ್ಷಗಳು ಹುಯಿಲೆಬ್ಬಿಸಿದ್ದವು. ಬಿಹಾರದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲು ಉಂಡಿತು. ನಿತೀಶ್ ಅವರ ಸಂಯುಕ್ತ ಜನತಾದಳ ಮತ್ತು ಲಾಲೂಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಒಟ್ಟುಗೂಡಿ ಅಧಿಕಾರ ಸೂತ್ರ ಹಿಡಿದವು. ಜಾತಿ ಆಧಾರಿತ ಮೀಸಲಾತಿ ಕುರಿತು ಸಾಮರಸ್ಯದ ವಾತಾವರಣದಲ್ಲಿ ಚರ್ಚೆ ನಡೆಯಬೇಕೆಂದು ಇತ್ತೀಚೆಗೆ ಮತ್ತೆ ಹೇಳಿದ್ದರು ಸರಸಂಘಚಾಲಕರು.

ಮೀಸಲಾತಿ ಎಂಬುದು ಅಭಿವೃದ್ಧಿಗೆ ಅಡ್ಡಿ ಎಂಬ ನಿರಂತರ ಪ್ರಚಾರವನ್ನು ಜಾರಿಯಲ್ಲಿ ಇಡಲಾಗಿದೆ. ನೂರಕ್ಕೆ ನೂರು ಮೀಸಲಾತಿ ಪಡೆಯುತ್ತ ಬಂದಿರುವ ಒಂದು ಸಂಘಟನೆಯ ಜನ ತಳವರ್ಗಗಳ ಮೀಸಲಾತಿಯನ್ನು ವಿರೋಧಿಸುತ್ತ ಬಂದಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಆಚರಣೆಯಲ್ಲಿ ಕೊಂದಿರುವವರು, ಬಾಯಿಮಾತಿನಲ್ಲಿ ಅವರನ್ನು ಕೊಂಡಾಡತೊಡಗಿದ್ದಾರೆ. ಅವರ ಹೆಸರಿನಲ್ಲಿ ಸ್ಥಾವರಗಳನ್ನು ಎಬ್ಬಿಸಿ ನಿಲ್ಲಿಸತೊಡಗಿದ್ದಾರೆ. ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನು ಕೇಂದ್ರ ಮಂತ್ರಿಗಳೇ ಆಡತೊಡಗಿದ್ದಾರೆ. ಮೂಲ ಸಂವಿಧಾನದಲ್ಲಿ ಇರಲಿಲ್ಲವೆಂದು ಹೇಳಿ ಸೆಕ್ಯೂಲರ್ ಪದವನ್ನೇ ಸಂವಿಧಾನದ ಮುನ್ನುಡಿಯಿಂದ ಕೈ ಬಿಡುವ ಹುನ್ನಾರವೂ ಜರುಗಿತು. ಹಿಂದೂ ಬಹುಸಂಖ್ಯಾತ ರಾಷ್ಟ್ರವಾದ ವಿಜೃಂಭಿಸತೊಡಗಿದೆ. ಅಲ್ಪಸಂಖ್ಯಾತರು ದಲಿತರು ಆದಿವಾಸಿಗಳ ಬದುಕುಗಳು ದುರ್ಭರವಾಗಿವೆ. ರಾಜ್ಯಸಭೆಯಲ್ಲಿ ಆಳುವ ಪಕ್ಷಕ್ಕೆ ಬಹುಮತ ಇಲ್ಲದಿದ್ದರೂ ತ್ರಿವಳಿ ತಲಾಖ್ ರದ್ದು ಮಾಡಿದ ಮಸೂದೆಗೆ ಅಂಗೀಕಾರ ದಕ್ಕಿಸಿಕೊಳ್ಳಲಾಯಿತು. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಅಲ್ಲಿನ ಜನಪ್ರತಿಧಿನಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ರದ್ದು ಮಾಡಿ ಜೀರ್ಣಿಸಿಕೊಳ್ಳಲಾಗುತ್ತಿದೆ. ಮೀಸಲಾತಿಯ ಕಡುಬೆಂಬಲಿಗ ಶಕ್ತಿಗಳ ದನಿ ಕ್ಷೀಣವಾಗಿದೆ. ಕಬ್ಬಿಣ ಇಷ್ಟು ಬಿಸಿಯಾಗಿರುವ ಸನ್ನಿವೇಶವಿದು. ಇಂತಹ ಸನ್ನಿವೇಶದಲ್ಲಿ ಮೀಸಲಾತಿ ಕುರಿತು ಚರ್ಚೆ ಮಾಡಬೇಕೆಂದು ಸರಸಂಘಚಾಲಕರು ಕರೆ ನೀಡಿದ್ದು ಆಕಸ್ಮಿಕ ಆಗಿರಲಿಲ್ಲ.

ಮೀಸಲಾತಿಯನ್ನು ನಿಷ್ಪಕ್ಷಪಾತ ಜನರ ಸಮಿತಿಯೊಂದು ಮರುವಿಮರ್ಶೆಗೆ ಒಳಪಡಿಸಬೇಕು ಎಂಬ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭಾ 1981ರಲ್ಲೇ ಅಂಗೀಕರಿಸಿತ್ತು. 1985ರಲ್ಲಿ ಇದೇ ಗೊತ್ತುವಳಿಯನ್ನು ಆರೆಸ್ಸೆಸ್‌ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದಲ್ಲಿ ಅಂಗೀಕರಿಸಲಾಗಿತ್ತು.

ಈ ಸಮಾಜದಲ್ಲಿ ಅಸಮಾನತೆ ಇರುವತನಕ ನಾವು ಮೀಸಲಾತಿಯನ್ನು ಬೆಂಬಲಿಸುತ್ತೇವೆ ಎಂಬ ಮಾತನ್ನು ಆಡುತ್ತಲೇ ಮರುವಿಮರ್ಶೆಯ ಕಿಡಿಯನ್ನೂ ಆರದಂತೆ ಕಾಪಾಡಿಕೊಂಡು ಬಂದಿದ್ದಾರೆ ಮೋಹನ್ ಭಾಗವತ್.

ಮೋದಿ-ಶಾ ಜೋಡಿಗೆ ಮೀಸಲಾತಿ ಕುರಿತು ಯಾವ ಸಹಾನುಭೂತಿಯೂ ಇಲ್ಲ. ಸಹಾನುಭೂತಿಯ ಸೈದ್ಧಾಂತಿಕ ಹಿನ್ನೆಲೆಯಿಂದ ಬಂದವರೂ ಅಲ್ಲ. ಮೀಸಲಾತಿಗೆ ಮಂಗಳ ಹಾಡುವ ಕಾರ್ಯಸೂಚಿಯ ಹಿನ್ನೆಲೆ ಅವರದು. ಆದರೆ ಚುನಾವಣಾ ರಾಜಕಾರಣ ಅವರ ಕೈಗಳನ್ನು ಈಗಲೂ ಕಟ್ಟಿ ಹಾಕಿದೆ. ಹೀಗಾಗಿ ತಳವರ್ಗಗಳ ಮೀಸಲಾತಿಯನ್ನು ತರಾತುರಿಯಲ್ಲಿ ಕಿತ್ತು ಹಾಕಲು ಅವರು ಕೈಹಾಕುತ್ತಿಲ್ಲ. ಅನುಕೂಲಕರ ಸಮಯದ ನಿರೀಕ್ಷೆಯಲ್ಲಿದ್ದಾರೆ ಅವರು.

ಇಂತಹ ಸನ್ನಿವೇಶದಲ್ಲಿ ಹೊರಬಿದ್ದಿರುವ ಸುಪ್ರೀಮ್ ಕೋರ್ಟ್ ತೀರ್ಪಿನ ಬಳಕೆ-ದುರ್ಬಳಕೆ ಹೇಗೆಲ್ಲ ಆಗಲಿದೆ ಎಂಬುದು ಆತಂಕದಿಂದ ಕಾದು ನೋಡಬೇಕಿರುವ ಮತ್ತು ಹೋರಾಟಕ್ಕೆ ಸಜ್ಜಾಗಬೇಕಿರುವ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...