Homeಮುಖಪುಟ'ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು' ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

‘ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು’ ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

- Advertisement -
- Advertisement -

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ದೂರಿನ ಕುರಿತು ಶುಕ್ರವಾರ ನಡೆದ ವಿಚಾರಣೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್, ಅಕ್ಟೋಬರ್ 18, 2023ರ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ವಿಚಾರದ ಮೇಲೆ ದಾಖಲಾಗಿರುವ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಮತ್ತು ಅವರ ಹಕ್ಕನ್ನು ರಕ್ಷಿಸಿಕೊಳ್ಳಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ನ್ಯಾಯಾಧೀಶರು ಇಂತ ಪ್ರಕರಣಗಳನ್ನು ನಿರ್ವಹಿಸುವಾಗ ಬೋಧನೆ ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು’ ಎಂದು ಶುಕ್ರವಾರ ಹೇಳಿದೆ.

ಇದು ಹೆಣ್ಣು ಮಕ್ಕಳ ಕುರಿತು ಅತ್ಯಂತ ಆಕ್ಷೇಪಾರ್ಹವಾಗಿದ್ದು, ಸಂಪೂರ್ಣವಾಗಿ ಅನಗತ್ಯ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಹಾಗೂ ಮದುವೆ ಮತ್ತು ಇತರ ಅಪರಾಧಗಳ ಉದ್ದೇಶಕ್ಕಾಗಿ ಮಕ್ಕಳ ಅಪಹರಣ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಸಲಹೆ ನೀಡಿತ್ತು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕಾಗಿ ಹೈಕೋರ್ಟ್ ತನ್ನ ಆದೇಶದಲ್ಲಿ ಯಾವುದೇ ಸೂಕ್ತ ಕಾರಣಗಳನ್ನು ನೀಡಿಲ್ಲ’ ಎಂದು ಹೇಳಿದೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ವಿಚಾರಣೆಯನ್ನು 01-01-24ಕ್ಕೆ ಮುಂದೂಡಿದೆ.

‘ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸುಸುವು ಆಕೆಯ ಕರ್ತವ್ಯ ಹಾಗೂ ಬಾಧ್ಯತೆಯಾಗಿದೆ; ಆಕೆಯ ಘನತೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿಕೊಂಡು ಲಿಂಗಾಧಾರಿತ ಅಡೆತಡೆಗಳನ್ನು ಮೀರಿದ ಸ್ವಯಂ ಅಭಿವೃದ್ಧಿ ಕಾಣಬೇಕು. ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಬೇಕು. ಕೇವಲ ಎರಡು ನಿಮಿಷಗಳ ಲೈಂಗಿಕ ಆನಂದಕ್ಕಾಗಿ ಆಕೆ ಅವಕಾಶ ನೀಡಿದಾಗ ಅವಳು ಕಳೆದುಕೊಳ್ಳುವುದೇ ಹೆಚ್ಚು. ಆದ್ದರಿಂದ ಅವಳ ದೇಹದ ಸ್ವಾಯತ್ತತೆ ಮತ್ತು ಗೌಪ್ಯತೆಯ ಹಕ್ಕನ್ನು ರಕ್ಷಿಸಬೇಕು’ ಎಂಬ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ನಿರ್ದಿಷ್ಟವಾಗಿ ಆಕ್ಷೇಪಣೆಗೆ ತೆಗೆದುಕೊಂಡಿತು.

‘ನ್ಯಾಯಾಧೀಶರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅಥವಾ ಬೋಧಿಸಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ. ನ್ಯಾಯಾಧೀಶರ ಈ ಹೇಳಿಕೆಗಳು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಹದಿಹರೆಯದವರ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತವೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪೋಕ್ಸೋ ಪ್ರಕರಣದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಹೈಕೋರ್ಟ್ ನೀಡಿರು ಖುಲಾಸೆಯ ಆದೇಶವು ‘ಯಾವುದೇ ತರ್ಕಗಳಿಲ್ಲದ’ ಕಾರಣಕ್ಕೆ, ಸದರಿ ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸುವ ಬಗ್ಗೆ ಯೋಚಿಸಬೇಕು ಎಂದು ನ್ಯಾಯಾಲಯವು ಪಶ್ಚಿಮ ಬಂಗಾಳದ ವಕೀಲೆ ಆಸ್ತಾ ಶರ್ಮಾ ಅವರಿಗೆ ಸಲಹೆ ನೀಡಿದೆ.

ಅ.18, 2023 ರಂದು, ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ‘ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಮತ್ತು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸಬೇಕು’ ಎಂದು ಹೇಳಿತ್ತು.

ನಂತರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಹೆಣ್ಣು ಮಗುವಿನ ತಂದೆಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯನ್ನು ರದ್ದುಗೊಳಿಸಿದ್ದಲ್ಲದೆ, ‘ಇದು ವಯಸ್ಸಿನ ದೃಷ್ಟಿಯಿಂದ ಒಪ್ಪದೇ ಇರುವುದಕ್ಕೆ ಸಾಧ್ಯವಿಲ್ಲ. ಆದರೆ, ಇಬ್ಬರು ಹದಿಹರೆಯದವರ ನಡುವಿನ ಒಪ್ಪಿಗೆಯ, ಶೋಷಣೆಯಿಲ್ಲದ ಸಮ್ಮತಿ ಲೈಂಗಿಕ ಸಂಬಂಧದ ಪ್ರಕರಣವಾಗಿದೆ. ಇದರಲ್ಲಿ ಬಲಿಪಶು ಎಂಬುದು ಅಪ್ರಸ್ತುತ’ ಎಂದು ಹೇಳಿದೆ.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...