Homeಮುಖಪುಟ'ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು' ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

‘ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು’ ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

- Advertisement -
- Advertisement -

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ದೂರಿನ ಕುರಿತು ಶುಕ್ರವಾರ ನಡೆದ ವಿಚಾರಣೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್, ಅಕ್ಟೋಬರ್ 18, 2023ರ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ವಿಚಾರದ ಮೇಲೆ ದಾಖಲಾಗಿರುವ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಮತ್ತು ಅವರ ಹಕ್ಕನ್ನು ರಕ್ಷಿಸಿಕೊಳ್ಳಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ನ್ಯಾಯಾಧೀಶರು ಇಂತ ಪ್ರಕರಣಗಳನ್ನು ನಿರ್ವಹಿಸುವಾಗ ಬೋಧನೆ ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು’ ಎಂದು ಶುಕ್ರವಾರ ಹೇಳಿದೆ.

ಇದು ಹೆಣ್ಣು ಮಕ್ಕಳ ಕುರಿತು ಅತ್ಯಂತ ಆಕ್ಷೇಪಾರ್ಹವಾಗಿದ್ದು, ಸಂಪೂರ್ಣವಾಗಿ ಅನಗತ್ಯ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಹಾಗೂ ಮದುವೆ ಮತ್ತು ಇತರ ಅಪರಾಧಗಳ ಉದ್ದೇಶಕ್ಕಾಗಿ ಮಕ್ಕಳ ಅಪಹರಣ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಸಲಹೆ ನೀಡಿತ್ತು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕಾಗಿ ಹೈಕೋರ್ಟ್ ತನ್ನ ಆದೇಶದಲ್ಲಿ ಯಾವುದೇ ಸೂಕ್ತ ಕಾರಣಗಳನ್ನು ನೀಡಿಲ್ಲ’ ಎಂದು ಹೇಳಿದೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ವಿಚಾರಣೆಯನ್ನು 01-01-24ಕ್ಕೆ ಮುಂದೂಡಿದೆ.

‘ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸುಸುವು ಆಕೆಯ ಕರ್ತವ್ಯ ಹಾಗೂ ಬಾಧ್ಯತೆಯಾಗಿದೆ; ಆಕೆಯ ಘನತೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿಕೊಂಡು ಲಿಂಗಾಧಾರಿತ ಅಡೆತಡೆಗಳನ್ನು ಮೀರಿದ ಸ್ವಯಂ ಅಭಿವೃದ್ಧಿ ಕಾಣಬೇಕು. ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಬೇಕು. ಕೇವಲ ಎರಡು ನಿಮಿಷಗಳ ಲೈಂಗಿಕ ಆನಂದಕ್ಕಾಗಿ ಆಕೆ ಅವಕಾಶ ನೀಡಿದಾಗ ಅವಳು ಕಳೆದುಕೊಳ್ಳುವುದೇ ಹೆಚ್ಚು. ಆದ್ದರಿಂದ ಅವಳ ದೇಹದ ಸ್ವಾಯತ್ತತೆ ಮತ್ತು ಗೌಪ್ಯತೆಯ ಹಕ್ಕನ್ನು ರಕ್ಷಿಸಬೇಕು’ ಎಂಬ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ನಿರ್ದಿಷ್ಟವಾಗಿ ಆಕ್ಷೇಪಣೆಗೆ ತೆಗೆದುಕೊಂಡಿತು.

‘ನ್ಯಾಯಾಧೀಶರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅಥವಾ ಬೋಧಿಸಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ. ನ್ಯಾಯಾಧೀಶರ ಈ ಹೇಳಿಕೆಗಳು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಹದಿಹರೆಯದವರ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತವೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪೋಕ್ಸೋ ಪ್ರಕರಣದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಹೈಕೋರ್ಟ್ ನೀಡಿರು ಖುಲಾಸೆಯ ಆದೇಶವು ‘ಯಾವುದೇ ತರ್ಕಗಳಿಲ್ಲದ’ ಕಾರಣಕ್ಕೆ, ಸದರಿ ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸುವ ಬಗ್ಗೆ ಯೋಚಿಸಬೇಕು ಎಂದು ನ್ಯಾಯಾಲಯವು ಪಶ್ಚಿಮ ಬಂಗಾಳದ ವಕೀಲೆ ಆಸ್ತಾ ಶರ್ಮಾ ಅವರಿಗೆ ಸಲಹೆ ನೀಡಿದೆ.

ಅ.18, 2023 ರಂದು, ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ‘ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಮತ್ತು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸಬೇಕು’ ಎಂದು ಹೇಳಿತ್ತು.

ನಂತರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಹೆಣ್ಣು ಮಗುವಿನ ತಂದೆಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯನ್ನು ರದ್ದುಗೊಳಿಸಿದ್ದಲ್ಲದೆ, ‘ಇದು ವಯಸ್ಸಿನ ದೃಷ್ಟಿಯಿಂದ ಒಪ್ಪದೇ ಇರುವುದಕ್ಕೆ ಸಾಧ್ಯವಿಲ್ಲ. ಆದರೆ, ಇಬ್ಬರು ಹದಿಹರೆಯದವರ ನಡುವಿನ ಒಪ್ಪಿಗೆಯ, ಶೋಷಣೆಯಿಲ್ಲದ ಸಮ್ಮತಿ ಲೈಂಗಿಕ ಸಂಬಂಧದ ಪ್ರಕರಣವಾಗಿದೆ. ಇದರಲ್ಲಿ ಬಲಿಪಶು ಎಂಬುದು ಅಪ್ರಸ್ತುತ’ ಎಂದು ಹೇಳಿದೆ.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...