Homeಮುಖಪುಟ'ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು' ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

‘ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು’ ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

- Advertisement -
- Advertisement -

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ದೂರಿನ ಕುರಿತು ಶುಕ್ರವಾರ ನಡೆದ ವಿಚಾರಣೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್, ಅಕ್ಟೋಬರ್ 18, 2023ರ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ವಿಚಾರದ ಮೇಲೆ ದಾಖಲಾಗಿರುವ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಮತ್ತು ಅವರ ಹಕ್ಕನ್ನು ರಕ್ಷಿಸಿಕೊಳ್ಳಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ನ್ಯಾಯಾಧೀಶರು ಇಂತ ಪ್ರಕರಣಗಳನ್ನು ನಿರ್ವಹಿಸುವಾಗ ಬೋಧನೆ ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು’ ಎಂದು ಶುಕ್ರವಾರ ಹೇಳಿದೆ.

ಇದು ಹೆಣ್ಣು ಮಕ್ಕಳ ಕುರಿತು ಅತ್ಯಂತ ಆಕ್ಷೇಪಾರ್ಹವಾಗಿದ್ದು, ಸಂಪೂರ್ಣವಾಗಿ ಅನಗತ್ಯ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಹಾಗೂ ಮದುವೆ ಮತ್ತು ಇತರ ಅಪರಾಧಗಳ ಉದ್ದೇಶಕ್ಕಾಗಿ ಮಕ್ಕಳ ಅಪಹರಣ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಸಲಹೆ ನೀಡಿತ್ತು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕಾಗಿ ಹೈಕೋರ್ಟ್ ತನ್ನ ಆದೇಶದಲ್ಲಿ ಯಾವುದೇ ಸೂಕ್ತ ಕಾರಣಗಳನ್ನು ನೀಡಿಲ್ಲ’ ಎಂದು ಹೇಳಿದೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ವಿಚಾರಣೆಯನ್ನು 01-01-24ಕ್ಕೆ ಮುಂದೂಡಿದೆ.

‘ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸುಸುವು ಆಕೆಯ ಕರ್ತವ್ಯ ಹಾಗೂ ಬಾಧ್ಯತೆಯಾಗಿದೆ; ಆಕೆಯ ಘನತೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿಕೊಂಡು ಲಿಂಗಾಧಾರಿತ ಅಡೆತಡೆಗಳನ್ನು ಮೀರಿದ ಸ್ವಯಂ ಅಭಿವೃದ್ಧಿ ಕಾಣಬೇಕು. ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಬೇಕು. ಕೇವಲ ಎರಡು ನಿಮಿಷಗಳ ಲೈಂಗಿಕ ಆನಂದಕ್ಕಾಗಿ ಆಕೆ ಅವಕಾಶ ನೀಡಿದಾಗ ಅವಳು ಕಳೆದುಕೊಳ್ಳುವುದೇ ಹೆಚ್ಚು. ಆದ್ದರಿಂದ ಅವಳ ದೇಹದ ಸ್ವಾಯತ್ತತೆ ಮತ್ತು ಗೌಪ್ಯತೆಯ ಹಕ್ಕನ್ನು ರಕ್ಷಿಸಬೇಕು’ ಎಂಬ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ನಿರ್ದಿಷ್ಟವಾಗಿ ಆಕ್ಷೇಪಣೆಗೆ ತೆಗೆದುಕೊಂಡಿತು.

‘ನ್ಯಾಯಾಧೀಶರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅಥವಾ ಬೋಧಿಸಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ. ನ್ಯಾಯಾಧೀಶರ ಈ ಹೇಳಿಕೆಗಳು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಹದಿಹರೆಯದವರ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತವೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪೋಕ್ಸೋ ಪ್ರಕರಣದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಹೈಕೋರ್ಟ್ ನೀಡಿರು ಖುಲಾಸೆಯ ಆದೇಶವು ‘ಯಾವುದೇ ತರ್ಕಗಳಿಲ್ಲದ’ ಕಾರಣಕ್ಕೆ, ಸದರಿ ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸುವ ಬಗ್ಗೆ ಯೋಚಿಸಬೇಕು ಎಂದು ನ್ಯಾಯಾಲಯವು ಪಶ್ಚಿಮ ಬಂಗಾಳದ ವಕೀಲೆ ಆಸ್ತಾ ಶರ್ಮಾ ಅವರಿಗೆ ಸಲಹೆ ನೀಡಿದೆ.

ಅ.18, 2023 ರಂದು, ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ‘ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಮತ್ತು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸಬೇಕು’ ಎಂದು ಹೇಳಿತ್ತು.

ನಂತರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಹೆಣ್ಣು ಮಗುವಿನ ತಂದೆಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯನ್ನು ರದ್ದುಗೊಳಿಸಿದ್ದಲ್ಲದೆ, ‘ಇದು ವಯಸ್ಸಿನ ದೃಷ್ಟಿಯಿಂದ ಒಪ್ಪದೇ ಇರುವುದಕ್ಕೆ ಸಾಧ್ಯವಿಲ್ಲ. ಆದರೆ, ಇಬ್ಬರು ಹದಿಹರೆಯದವರ ನಡುವಿನ ಒಪ್ಪಿಗೆಯ, ಶೋಷಣೆಯಿಲ್ಲದ ಸಮ್ಮತಿ ಲೈಂಗಿಕ ಸಂಬಂಧದ ಪ್ರಕರಣವಾಗಿದೆ. ಇದರಲ್ಲಿ ಬಲಿಪಶು ಎಂಬುದು ಅಪ್ರಸ್ತುತ’ ಎಂದು ಹೇಳಿದೆ.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...