Homeಮುಖಪುಟ'ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು' ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

‘ಹದಿಹರೆಯದ ಹೆಣ್ಣು ಲೈಂಗಿಕ ಪ್ರಚೋದನೆ ನಿಗ್ರಹಿಸಬೇಕು’ ಎಂಬ ನ್ಯಾಯಾಧೀಶರ ಸಲಹೆಗೆ ಸುಪ್ರೀಂ ಆಕ್ಷೇಪ

- Advertisement -
- Advertisement -

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ದೂರಿನ ಕುರಿತು ಶುಕ್ರವಾರ ನಡೆದ ವಿಚಾರಣೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್, ಅಕ್ಟೋಬರ್ 18, 2023ರ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ‘ಹದಿಹರೆಯದವರ ಖಾಸಗಿತನದ ಹಕ್ಕು’ ಎಂಬ ವಿಚಾರದ ಮೇಲೆ ದಾಖಲಾಗಿರುವ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹದಿಹರೆಯದ ಹೆಣ್ಣುಮಕ್ಕಳು ತಮ್ಮ ಲೈಂಗಿಕ ಪ್ರಚೋದನೆಯನ್ನು ನಿಯಂತ್ರಿಸಬೇಕು ಮತ್ತು ಅವರ ಹಕ್ಕನ್ನು ರಕ್ಷಿಸಿಕೊಳ್ಳಬೇಕು ಎಂಬ ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ನ್ಯಾಯಾಧೀಶರು ಇಂತ ಪ್ರಕರಣಗಳನ್ನು ನಿರ್ವಹಿಸುವಾಗ ಬೋಧನೆ ಹಾಗೂ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು’ ಎಂದು ಶುಕ್ರವಾರ ಹೇಳಿದೆ.

ಇದು ಹೆಣ್ಣು ಮಕ್ಕಳ ಕುರಿತು ಅತ್ಯಂತ ಆಕ್ಷೇಪಾರ್ಹವಾಗಿದ್ದು, ಸಂಪೂರ್ಣವಾಗಿ ಅನಗತ್ಯ ಮತ್ತು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಹಾಗೂ ಮದುವೆ ಮತ್ತು ಇತರ ಅಪರಾಧಗಳ ಉದ್ದೇಶಕ್ಕಾಗಿ ಮಕ್ಕಳ ಅಪಹರಣ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಈ ಸಲಹೆ ನೀಡಿತ್ತು. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕಾಗಿ ಹೈಕೋರ್ಟ್ ತನ್ನ ಆದೇಶದಲ್ಲಿ ಯಾವುದೇ ಸೂಕ್ತ ಕಾರಣಗಳನ್ನು ನೀಡಿಲ್ಲ’ ಎಂದು ಹೇಳಿದೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ವಿಚಾರಣೆಯನ್ನು 01-01-24ಕ್ಕೆ ಮುಂದೂಡಿದೆ.

‘ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸುಸುವು ಆಕೆಯ ಕರ್ತವ್ಯ ಹಾಗೂ ಬಾಧ್ಯತೆಯಾಗಿದೆ; ಆಕೆಯ ಘನತೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿಕೊಂಡು ಲಿಂಗಾಧಾರಿತ ಅಡೆತಡೆಗಳನ್ನು ಮೀರಿದ ಸ್ವಯಂ ಅಭಿವೃದ್ಧಿ ಕಾಣಬೇಕು. ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಬೇಕು. ಕೇವಲ ಎರಡು ನಿಮಿಷಗಳ ಲೈಂಗಿಕ ಆನಂದಕ್ಕಾಗಿ ಆಕೆ ಅವಕಾಶ ನೀಡಿದಾಗ ಅವಳು ಕಳೆದುಕೊಳ್ಳುವುದೇ ಹೆಚ್ಚು. ಆದ್ದರಿಂದ ಅವಳ ದೇಹದ ಸ್ವಾಯತ್ತತೆ ಮತ್ತು ಗೌಪ್ಯತೆಯ ಹಕ್ಕನ್ನು ರಕ್ಷಿಸಬೇಕು’ ಎಂಬ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ನಿರ್ದಿಷ್ಟವಾಗಿ ಆಕ್ಷೇಪಣೆಗೆ ತೆಗೆದುಕೊಂಡಿತು.

‘ನ್ಯಾಯಾಧೀಶರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅಥವಾ ಬೋಧಿಸಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಕಲ್ಕತ್ತಾ ಹೈಕೋರ್ಟ್‌ನ ಸಲಹೆಗಳು ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ. ನ್ಯಾಯಾಧೀಶರ ಈ ಹೇಳಿಕೆಗಳು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಹದಿಹರೆಯದವರ ಹಕ್ಕುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತವೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪೋಕ್ಸೋ ಪ್ರಕರಣದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಹೈಕೋರ್ಟ್ ನೀಡಿರು ಖುಲಾಸೆಯ ಆದೇಶವು ‘ಯಾವುದೇ ತರ್ಕಗಳಿಲ್ಲದ’ ಕಾರಣಕ್ಕೆ, ಸದರಿ ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸುವ ಬಗ್ಗೆ ಯೋಚಿಸಬೇಕು ಎಂದು ನ್ಯಾಯಾಲಯವು ಪಶ್ಚಿಮ ಬಂಗಾಳದ ವಕೀಲೆ ಆಸ್ತಾ ಶರ್ಮಾ ಅವರಿಗೆ ಸಲಹೆ ನೀಡಿದೆ.

ಅ.18, 2023 ರಂದು, ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಪ್ರತಿ ಹದಿಹರೆಯದ ಹೆಣ್ಣುಮಕ್ಕಳು ‘ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಮತ್ತು ತನ್ನ ದೇಹದ ಸಮಗ್ರತೆಯ ಹಕ್ಕನ್ನು ರಕ್ಷಿಸಬೇಕು’ ಎಂದು ಹೇಳಿತ್ತು.

ನಂತರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಹೆಣ್ಣು ಮಗುವಿನ ತಂದೆಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯನ್ನು ರದ್ದುಗೊಳಿಸಿದ್ದಲ್ಲದೆ, ‘ಇದು ವಯಸ್ಸಿನ ದೃಷ್ಟಿಯಿಂದ ಒಪ್ಪದೇ ಇರುವುದಕ್ಕೆ ಸಾಧ್ಯವಿಲ್ಲ. ಆದರೆ, ಇಬ್ಬರು ಹದಿಹರೆಯದವರ ನಡುವಿನ ಒಪ್ಪಿಗೆಯ, ಶೋಷಣೆಯಿಲ್ಲದ ಸಮ್ಮತಿ ಲೈಂಗಿಕ ಸಂಬಂಧದ ಪ್ರಕರಣವಾಗಿದೆ. ಇದರಲ್ಲಿ ಬಲಿಪಶು ಎಂಬುದು ಅಪ್ರಸ್ತುತ’ ಎಂದು ಹೇಳಿದೆ.

ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...