Homeಮುಖಪುಟಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

ಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

- Advertisement -
- Advertisement -

ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ”ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ” ಇದು ಎಂದು ಮೊಯಿತ್ರಾ ಬಣ್ಣಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ED ಯ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ನನ್ನ ವಕೀಲರು – ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ಅವರ ತಂಡಕ್ಕೆ ಧನ್ಯವಾದಗಳು. ಇದು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯಗಳು” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ”ಇಡಿ ನಿರ್ದೇಶಕರ ವಿಸ್ತರಣೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ನನ್ನ ಮನವಿಗೆ ಜಯ ಸಿಕ್ಕಿದೆ. ಕಾನೂನುಬಾಹಿರ ವಿಸ್ತರಣೆ ಎಂದಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು” ಎಂದಿದ್ದಾರೆ.

”ಬಿಜೆಪಿಗರೇ, ನಾವು ನಿಮ್ಮೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ, ನಾವು ನಿಮ್ಮೊಂದಿಗೆ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ನಾವು ಹೊಲಗಳಲ್ಲಿ ಮತ್ತು ಬೀದಿಗಳಲ್ಲಿ ಹೋರಾಡುತ್ತೇವೆ, ನಾವು ಎಂದಿಗೂ ಶರಣಾಗುವುದಿಲ್ಲ” ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಮತ್ತು ಬಿಜೆಪಿಯು ತನ್ನ ವೈಯಕ್ತಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಬಳಸುವ ‘ಕೈಗೊಂಬೆ’ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಂಗಳವಾರ ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಗಂಟೆಗಳ ನಂತರ ವಾಗ್ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನವೆಂಬರ್ 2021 ಮತ್ತು ನವೆಂಬರ್ 2022ರಲ್ಲಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದು ಕಾನೂನುಬಾಹಿರ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಆದಾಗ್ಯೂ, ಹೊಸ ಮುಖ್ಯಸ್ಥರನ್ನು ಹುಡುಕುವ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ ನಂತರ ಜುಲೈ 31ರವರೆಗೆ ಕುಮಾರ್ ಅವರ ಸ್ಥಾನದಲ್ಲಿ ಮುಂದುವರಿಯಲು ನ್ಯಾಯಾಲಯ ಅನುಮತಿ ನೀಡಿದೆ.

ವಿಸ್ತರಣೆಗಳು ಸುಪ್ರೀಂ ಕೋರ್ಟ್‌ನ 2021 ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಪೀಠವು ಗಮನಿಸಿದೆ. ಇದರಲ್ಲಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನವೆಂಬರ್ 2021ರಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿತು.

ನವೆಂಬರ್ 17, 2021 ಮತ್ತು ನವೆಂಬರ್ 17, 2022 ರಂದು ಮಿಶ್ರಾ ಅವರಿಗೆ ನೀಡಲಾದ ವಿಸ್ತರಣೆಗಳನ್ನು ಪ್ರಶ್ನಿಸಿ ಅನೇಕ ಅರ್ಜಿಗಳು ಬಂದವು ಅವರಲ್ಲಿ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕೂಡ ಇದ್ದಾರೆ.

”ಸುಪ್ರೀಂ ಕೋರ್ಟ್ ತೀರ್ಪಿನ ದೃಷ್ಟಿಯಿಂದ, 2021ರ ವಿಸ್ತರಣೆಯ ನಂತರ ಮಿಶ್ರಾ ಕೈಗೊಂಡ ಎಲ್ಲಾ ಕ್ರಮಗಳನ್ನು “ಕಾನೂನುಬಾಹಿರ ಮತ್ತು ಕಳಂಕಿತ” ಎಂದು ಪರಿಗಣಿಸಬಹುದು” ಎಂದು ಮಂಗಳವಾರ ಸುರ್ಜೆವಾಲಾ ಅವರು ಹೇಳಿದರು.

”ನವೆಂಬರ್ 17, 2021 ಮತ್ತು 17 ನೇ ನವೆಂಬರ್, 2022 ರಂದು ಇಡಿ ನಿರ್ದೇಶಕರಿಗೆ ಎರಡು ಕಾನೂನುಬಾಹಿರ ವಿಸ್ತರಣೆ ನೀಡಿರುವುದಕ್ಕೆ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಜವಾಬ್ದಾರರಲ್ಲ. ಅವರ ವಿಸ್ತರಣೆ ಜವಾಬ್ದಾರಿಯನ್ನು ಸ್ವತಃ ಪ್ರಧಾನಿಯೇ ಹೊರಬೇಕು. ಹಾಗಾಗಿ ಪ್ರಧಾನಿ ಮೋದಿ ಅವರು ಕ್ಷಮೆ ಯಾಚಿಸಬೇಕು” ಎಂದು ಸುರ್ಜೆವಾಲಾ ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯದ ಗೆಲುವು ಎಂದು ಸುರ್ಜೇವಾಲಾ ಬಣ್ಣಿಸಿದ್ದು, ”ರಾಜಕೀಯ ವಿರೋಧಿಗಳನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿ ಭಯೋತ್ಪಾದನೆಯನ್ನು ಹರಡಲು ಮೋದಿ ಸರ್ಕಾರವು ರಾಜಕೀಯ ಸೇಡಿಗಾಗಿ ಇಡಿ ಯ ದುರುಪಯೋಗ ಮಾಡಿಕೊಂಡಿದೆ” ಎಂದು ಅವರು ಹೇಳಿದರು.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತೋಷವಾಗಿರುವವರು ವಿವಿಧ ಕಾರಣಗಳಿಗಾಗಿ ಭ್ರಮೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ”ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ತಂದ ತಿದ್ದುಪಡಿಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...