Homeಮುಖಪುಟಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

ಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

- Advertisement -
- Advertisement -

ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ”ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ” ಇದು ಎಂದು ಮೊಯಿತ್ರಾ ಬಣ್ಣಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ED ಯ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ನನ್ನ ವಕೀಲರು – ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ಅವರ ತಂಡಕ್ಕೆ ಧನ್ಯವಾದಗಳು. ಇದು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯಗಳು” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ”ಇಡಿ ನಿರ್ದೇಶಕರ ವಿಸ್ತರಣೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ನನ್ನ ಮನವಿಗೆ ಜಯ ಸಿಕ್ಕಿದೆ. ಕಾನೂನುಬಾಹಿರ ವಿಸ್ತರಣೆ ಎಂದಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು” ಎಂದಿದ್ದಾರೆ.

”ಬಿಜೆಪಿಗರೇ, ನಾವು ನಿಮ್ಮೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ, ನಾವು ನಿಮ್ಮೊಂದಿಗೆ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ನಾವು ಹೊಲಗಳಲ್ಲಿ ಮತ್ತು ಬೀದಿಗಳಲ್ಲಿ ಹೋರಾಡುತ್ತೇವೆ, ನಾವು ಎಂದಿಗೂ ಶರಣಾಗುವುದಿಲ್ಲ” ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಮತ್ತು ಬಿಜೆಪಿಯು ತನ್ನ ವೈಯಕ್ತಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಬಳಸುವ ‘ಕೈಗೊಂಬೆ’ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಂಗಳವಾರ ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಗಂಟೆಗಳ ನಂತರ ವಾಗ್ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನವೆಂಬರ್ 2021 ಮತ್ತು ನವೆಂಬರ್ 2022ರಲ್ಲಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದು ಕಾನೂನುಬಾಹಿರ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಆದಾಗ್ಯೂ, ಹೊಸ ಮುಖ್ಯಸ್ಥರನ್ನು ಹುಡುಕುವ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ ನಂತರ ಜುಲೈ 31ರವರೆಗೆ ಕುಮಾರ್ ಅವರ ಸ್ಥಾನದಲ್ಲಿ ಮುಂದುವರಿಯಲು ನ್ಯಾಯಾಲಯ ಅನುಮತಿ ನೀಡಿದೆ.

ವಿಸ್ತರಣೆಗಳು ಸುಪ್ರೀಂ ಕೋರ್ಟ್‌ನ 2021 ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಪೀಠವು ಗಮನಿಸಿದೆ. ಇದರಲ್ಲಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನವೆಂಬರ್ 2021ರಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿತು.

ನವೆಂಬರ್ 17, 2021 ಮತ್ತು ನವೆಂಬರ್ 17, 2022 ರಂದು ಮಿಶ್ರಾ ಅವರಿಗೆ ನೀಡಲಾದ ವಿಸ್ತರಣೆಗಳನ್ನು ಪ್ರಶ್ನಿಸಿ ಅನೇಕ ಅರ್ಜಿಗಳು ಬಂದವು ಅವರಲ್ಲಿ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕೂಡ ಇದ್ದಾರೆ.

”ಸುಪ್ರೀಂ ಕೋರ್ಟ್ ತೀರ್ಪಿನ ದೃಷ್ಟಿಯಿಂದ, 2021ರ ವಿಸ್ತರಣೆಯ ನಂತರ ಮಿಶ್ರಾ ಕೈಗೊಂಡ ಎಲ್ಲಾ ಕ್ರಮಗಳನ್ನು “ಕಾನೂನುಬಾಹಿರ ಮತ್ತು ಕಳಂಕಿತ” ಎಂದು ಪರಿಗಣಿಸಬಹುದು” ಎಂದು ಮಂಗಳವಾರ ಸುರ್ಜೆವಾಲಾ ಅವರು ಹೇಳಿದರು.

”ನವೆಂಬರ್ 17, 2021 ಮತ್ತು 17 ನೇ ನವೆಂಬರ್, 2022 ರಂದು ಇಡಿ ನಿರ್ದೇಶಕರಿಗೆ ಎರಡು ಕಾನೂನುಬಾಹಿರ ವಿಸ್ತರಣೆ ನೀಡಿರುವುದಕ್ಕೆ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಜವಾಬ್ದಾರರಲ್ಲ. ಅವರ ವಿಸ್ತರಣೆ ಜವಾಬ್ದಾರಿಯನ್ನು ಸ್ವತಃ ಪ್ರಧಾನಿಯೇ ಹೊರಬೇಕು. ಹಾಗಾಗಿ ಪ್ರಧಾನಿ ಮೋದಿ ಅವರು ಕ್ಷಮೆ ಯಾಚಿಸಬೇಕು” ಎಂದು ಸುರ್ಜೆವಾಲಾ ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯದ ಗೆಲುವು ಎಂದು ಸುರ್ಜೇವಾಲಾ ಬಣ್ಣಿಸಿದ್ದು, ”ರಾಜಕೀಯ ವಿರೋಧಿಗಳನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿ ಭಯೋತ್ಪಾದನೆಯನ್ನು ಹರಡಲು ಮೋದಿ ಸರ್ಕಾರವು ರಾಜಕೀಯ ಸೇಡಿಗಾಗಿ ಇಡಿ ಯ ದುರುಪಯೋಗ ಮಾಡಿಕೊಂಡಿದೆ” ಎಂದು ಅವರು ಹೇಳಿದರು.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತೋಷವಾಗಿರುವವರು ವಿವಿಧ ಕಾರಣಗಳಿಗಾಗಿ ಭ್ರಮೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ”ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ತಂದ ತಿದ್ದುಪಡಿಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...