Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ ಹಾಕಲಾಗಿದ್ದ KOCCA ಕಾಯ್ದೆಯನ್ನು ಕಳೆದ ಏಪ್ರಿಲ್ 23 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KOCCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಗೌರಿ ಲಂಕೇಶ್ ಕೊಲೆ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ KOCCA ಕಾಯಿದೆಯನ್ನು ಕಳೆದ ಏಪ್ರಿಲ್ 23 ರಂದು ರದ್ದು ಮಾಡಿತ್ತು. ಇದರಿಂದಾಗಿ ಆತನಿಗೂ ಹಾಗೂ ಸಹ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವ ಸಂಭವ ಉಂಟಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಬೇಕೆಂದು ಗೌರಿ ಲಂಕೆಶ್ ಅವರ ಸಹೋದರಿ, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಅವರು ಕರ್ನಾಟಕ ಗೃಹ ಸಚಿವ ಎಸ್‌.ಆರ್‌.ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು. ಸಚಿವರು ಕವಿತಾ ಲಂಕೆಶ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಕಾನೂನು ಪ್ರಕ್ರಿಯೆ ವಿಳಂಬವಾಗುತ್ತಲೇ ಸಾಗಿತ್ತು.

ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.


ಇದನ್ನೂ ಓದಿ : ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...

ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ

ಒಡಿಶಾದ ಕೇಂದ್ರಪಾರ ಸಂಸದ ಬೈಜಯಂತ್ ಪಾಂಡಾ ಅವರು ಭಾನುವಾರ ರಾಜನಗರ ಬ್ಲಾಕ್‌ನ ನುಗಾಂವ್‌ಗೆ ಭೇಟಿ ನೀಡಿ ಸ್ಥಳೀಯ ಅಂಗನವಾಡಿ ಕೇಂದ್ರದ ದಲಿತ ಮಹಿಳೆ ತಯಾರಿಸಿದ ಊಟವನ್ನು ಸೇವಿಸಿದರು. ಜಾತಿ ಕಾರಣಕ್ಕೆ ಗ್ರಾಮಸ್ಥರು ಮಕ್ಕಳನ್ನು...

ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

ಪಶ್ಚಿಮ ಬಂಗಾಳದಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ (ಎಇಆರ್‌ಒ) ಕಾರ್ಯ ನಿರ್ವಹಿಸುತ್ತಿರುವ ಏಳು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇವರ ವಿರುದ್ಧ 'ಗಂಭೀರ ದುರ್ನಡತೆ' ಆರೋಪ ಮಾಡಿದೆ...

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ...

ಬಂಗಾಳ: ಎಸ್‌ಐಆರ್ ವಿಚಾರಣೆಗೆಂದು ಕರೆ ಮಾಡಿ ವ್ಯಕ್ತಿಯನ್ನು ಕೊಂದು, ಕತ್ತರಿಸಿ, ಮೂರು ಚೀಲಗಳಲ್ಲಿ ಕಾಲುವೆಗೆ ಎಸೆದ ಬಿಎಲ್‌ಒ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರ ಭೀಕರ ಕೊಲೆ ಮತ್ತು ಛಿದ್ರಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ...

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ...