Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ ಹಾಕಲಾಗಿದ್ದ KOCCA ಕಾಯ್ದೆಯನ್ನು ಕಳೆದ ಏಪ್ರಿಲ್ 23 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KOCCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಗೌರಿ ಲಂಕೇಶ್ ಕೊಲೆ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ KOCCA ಕಾಯಿದೆಯನ್ನು ಕಳೆದ ಏಪ್ರಿಲ್ 23 ರಂದು ರದ್ದು ಮಾಡಿತ್ತು. ಇದರಿಂದಾಗಿ ಆತನಿಗೂ ಹಾಗೂ ಸಹ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವ ಸಂಭವ ಉಂಟಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಬೇಕೆಂದು ಗೌರಿ ಲಂಕೆಶ್ ಅವರ ಸಹೋದರಿ, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಅವರು ಕರ್ನಾಟಕ ಗೃಹ ಸಚಿವ ಎಸ್‌.ಆರ್‌.ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು. ಸಚಿವರು ಕವಿತಾ ಲಂಕೆಶ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಕಾನೂನು ಪ್ರಕ್ರಿಯೆ ವಿಳಂಬವಾಗುತ್ತಲೇ ಸಾಗಿತ್ತು.

ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.


ಇದನ್ನೂ ಓದಿ : ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...