Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ ಹಾಕಲಾಗಿದ್ದ KOCCA ಕಾಯ್ದೆಯನ್ನು ಕಳೆದ ಏಪ್ರಿಲ್ 23 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KOCCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಗೌರಿ ಲಂಕೇಶ್ ಕೊಲೆ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ KOCCA ಕಾಯಿದೆಯನ್ನು ಕಳೆದ ಏಪ್ರಿಲ್ 23 ರಂದು ರದ್ದು ಮಾಡಿತ್ತು. ಇದರಿಂದಾಗಿ ಆತನಿಗೂ ಹಾಗೂ ಸಹ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವ ಸಂಭವ ಉಂಟಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಬೇಕೆಂದು ಗೌರಿ ಲಂಕೆಶ್ ಅವರ ಸಹೋದರಿ, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಅವರು ಕರ್ನಾಟಕ ಗೃಹ ಸಚಿವ ಎಸ್‌.ಆರ್‌.ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು. ಸಚಿವರು ಕವಿತಾ ಲಂಕೆಶ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಕಾನೂನು ಪ್ರಕ್ರಿಯೆ ವಿಳಂಬವಾಗುತ್ತಲೇ ಸಾಗಿತ್ತು.

ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.


ಇದನ್ನೂ ಓದಿ : ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...