Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ ಹಾಕಲಾಗಿದ್ದ KOCCA ಕಾಯ್ದೆಯನ್ನು ಕಳೆದ ಏಪ್ರಿಲ್ 23 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KOCCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಗೌರಿ ಲಂಕೇಶ್ ಕೊಲೆ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ KOCCA ಕಾಯಿದೆಯನ್ನು ಕಳೆದ ಏಪ್ರಿಲ್ 23 ರಂದು ರದ್ದು ಮಾಡಿತ್ತು. ಇದರಿಂದಾಗಿ ಆತನಿಗೂ ಹಾಗೂ ಸಹ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವ ಸಂಭವ ಉಂಟಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಬೇಕೆಂದು ಗೌರಿ ಲಂಕೆಶ್ ಅವರ ಸಹೋದರಿ, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಅವರು ಕರ್ನಾಟಕ ಗೃಹ ಸಚಿವ ಎಸ್‌.ಆರ್‌.ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು. ಸಚಿವರು ಕವಿತಾ ಲಂಕೆಶ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಕಾನೂನು ಪ್ರಕ್ರಿಯೆ ವಿಳಂಬವಾಗುತ್ತಲೇ ಸಾಗಿತ್ತು.

ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.


ಇದನ್ನೂ ಓದಿ : ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...