Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ ಹಾಕಲಾಗಿದ್ದ KOCCA ಕಾಯ್ದೆಯನ್ನು ಕಳೆದ ಏಪ್ರಿಲ್ 23 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KOCCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಗೌರಿ ಲಂಕೇಶ್ ಕೊಲೆ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ KOCCA ಕಾಯಿದೆಯನ್ನು ಕಳೆದ ಏಪ್ರಿಲ್ 23 ರಂದು ರದ್ದು ಮಾಡಿತ್ತು. ಇದರಿಂದಾಗಿ ಆತನಿಗೂ ಹಾಗೂ ಸಹ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವ ಸಂಭವ ಉಂಟಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಬೇಕೆಂದು ಗೌರಿ ಲಂಕೆಶ್ ಅವರ ಸಹೋದರಿ, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಅವರು ಕರ್ನಾಟಕ ಗೃಹ ಸಚಿವ ಎಸ್‌.ಆರ್‌.ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು. ಸಚಿವರು ಕವಿತಾ ಲಂಕೆಶ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಕಾನೂನು ಪ್ರಕ್ರಿಯೆ ವಿಳಂಬವಾಗುತ್ತಲೇ ಸಾಗಿತ್ತು.

ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.


ಇದನ್ನೂ ಓದಿ : ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...