Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...