Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...