Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...