Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...