Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...