Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...