Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...