Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...