Homeದಲಿತ್ ಫೈಲ್ಸ್ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

ಸುರಕೋಡ: ಮಠಕ್ಕೆ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ; 23 ಸವರ್ಣೀಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಸುರಕೋಡ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ನಡೆಸಲಾಗಿದ್ದು, 23 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮಾದಿಗ ಸಮುದಾಯದವರು ಡೊಳ್ಳು ಭಾರಿಸಿದರೆಂಬ ಕಾರಣವೊಡ್ಡಿ ಹಲ್ಲೆ ನಡೆಸಿದ್ದು ಸುರಕೊಡ ಪೊಲೀಸ್ ಠಾಣೆಯಲ್ಲಿ ವಿಠ್ಠಲ ಮಾದರ ದೂರು ನೀಡಿದ್ದಾರೆ. ಅದರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕಾಶ್ ‍ಗುಲ್ಲಪ್ಪ, ಬಾಲಪ್ಪ ಬಡಿಗೇರ, ನವೀನ್‌ ರಾಯನಗೌಡ್ರ, ಮಲ್ಲಪ್ಪ ಪ್ರಭು ಚವಡಿ, ಸುನಿಲ್‌ ಪ್ರಭು ಚವಡಿ, ಆಕಾಶ್ ಹಾದಿಮನಿ, ಮಹೇಶ್‌ ಪಾಣಿಗತ್ತಿ, ಶಿವು ಸಿಂಧೆ, ಯಲ್ಲಪ್ಪ ಹಡಗಲಿ, ಈರಣ್ಣ ಸಬರದ, ಶಂಕರಪ್ಪ ಜುಮ್ಮನ್ನವರ, ಅನಿಲ್ ಹಂದಿಗೋಳ, ರಾಜು ಅಗಸರ, ಶಿವು ಹಂದಿಗೋಳ, ಮಾರುತಿ ಹವಲ್ದಾರ, ಪುಟ್ಟರಾಜ್‌ ಮೂಲಿಮನಿ, ಪ್ರದೀಪ್‌ ಮುಂಗನೂರ್‌‌,  ಚಿದಾನಂದ್‌ ಪತ್ತಾರ್‌, ಗಣೇಶ್‌ ಮುನೇನ್‌ಕೊಪ್ಪ, ಮುತ್ತಪ್ಪ ತಿಪ್ಪನಗೌಡ್ರ, ಗಡಿಯಪ್ಪ ಮುರಿಗೌಡ್ರ, ಅಪ್ಪು ಮರಿಗೌಡ್ರ, ಹನಮಂತ ಚಿಗಾರಿ  ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಲಿತ ಸಮುದಾಯದ ಪುರುಷರು ಹಾಗೂ ಮಹಿಳೆಯರು ಸೇರಿ ಸುಮಾರು 33 ಜನರು ಗಾಯಗೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್‌ 143, 147, 148, 323, 324, 354, 504, 506, 149 ಹಾಗೂ ಎ‌ಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಠಕ್ಕೆ ಪ್ರವೇಶಿಸಿದ ನಂತರ ದ್ವೇಷ ಆರಂಭ

ಊರಿನಲ್ಲಿರುವ ಸಾರ್ವಜನಿಕ ಮಠಕ್ಕೆ ಪ್ರವೇಶ ಮಾಡಿದ್ದರಿಂದಲೇ ದಲಿತರ ಮೇಲೆ ಹಗೆ ಸಾಧಿಸಲಾಗಿದೆ. ಹಬ್ಬದ ದಿನ ಡೊಳ್ಳು ಭಾರಿಸುವುದನ್ನು ನಿಲ್ಲಿಸಲಿಲ್ಲ ಎಂಬ ನೆಪವೊಡ್ಡಿ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

“ನಮ್ಮೂರಿನ ಶಿವರುದ್ರ ಶಿವಯೋಗಿ ಮಠಕ್ಕೆ ದಲಿತರು ಪ್ರವೇಶ ಮಾಡುವಾಗ ಸವರ್ಣೀಯರ ವಿರೋಧ ವ್ಯಕ್ತವಾಗಿತ್ತು. ಊರಿನ ಹಿರಿಯರು ಕೂತು ಸಮಸ್ಯೆ ಬಗೆಹರಿಸಿದ್ದರು. ಆದರೆ ದಿನಾಂಕ 6-05-2022ರಂದು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದ್ಯಾವಪ್ಪ, ದುರ್ಗಮ್ಮ ದೇವರ ಜಾತ್ರೆಯ ದಿನ ಡೊಳ್ಳು ಭಾರಿಸಲು ಕರೆಸಲಾಗಿತ್ತು. ಡೊಳ್ಳು ಭಾರಿಸುತ್ತಿದ್ದ ದಲಿತರ ಮೇಲೆ ಹಾಗೂ ಬಿಡಿಸಲು ಬಂದ ದಲಿತ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರದಾರ ವಿಠ್ಠಲ್‌ ಮಾದರ ಹೇಳುತ್ತಾರೆ.

“ದಲಿತರ ಮೇಲಿನ ದ್ವೇಷದಿಂದಾಗಿ ಈ ಹಲ್ಲೆ ನಡೆಸಲಾಗಿದೆ. ಡೊಳ್ಳು ಬಡಿಯುವುದನ್ನು ನಿಲ್ಲಿಸಲು ನಿಮಗೆ ಹೇಳಿದರೂ ಬಡಿಯುತ್ತಿದ್ದೀರಿ ಎಂದು ಆರೋಪಿಸಿ, ಅವ್ಯಾಚ್ಯ ಪದಗಳಿಂದ ನಿಂದಿಸಿ ಏಕಾಏಕಿ ಕೈ ಹಾಗೂ ಕಟ್ಟಿಗೆಯಿಂದ ಹೊಡೆದರು. ನಮ್ಮ ಚೀರಾಟ ಕೇಳಿ ದಲಿತ ಮಹಿಳೆಯರು ಬಂದಾಗ ಮಹಿಳೆಯ ಮೇಲೂ ಹಲ್ಲೆ ನಡೆಸಿ ಅವಮಾನ ಮಾಡಿದ್ದಾರೆ. ಘಟನೆಯ ಬಳಿಕ ನರಗುಂದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲಾಗಿದೆ” ಎಂದು ವಿಠ್ಠಲ್‌ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಮುಖಂಡ ಮುತ್ತಣ್ಣ ಸೋಮನಕಟ್ಟೆ, “ಊರಿನಲ್ಲಿ ನಾಲ್ಕೈದು ಜಾತಿಗಳಿದ್ದು, ಸವರ್ಣೀಯ ಜಾತಿಗಳೆಲ್ಲ ಒಂದಾಗಿವೆ. ದಲಿತರನ್ನು ಒಂದು ಕಡೆ ನಿಲ್ಲಿಸಲಾಗಿದೆ. ಯಾವುದೇ ಕೆಲಸ ಕಾರ್ಯಗಳಿಗೆ ದಲಿತರನ್ನು ಕರೆಯದೆ ಸಾಮಾಜಿಕ ಬಹಿಷ್ಕಾರ ಹಾಕುವ ಮಾತುಗಳನ್ನು ಸವರ್ಣೀಯರು ಆಡುತ್ತಿದ್ದಾರೆಂದು ತಿಳಿದು ಬಂದಿದೆ. ಮತ್ತೊಂದೆಡೆ ಕೌಂಟರ್‌ ಕೇಸ್‌ ಹಾಕುವ ಪ್ರಯತ್ನಗಳನ್ನು ನಡೆಸಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ಗೆ ಸಿಪಿಐ ಎನ್‌.ಜಿ.ಮಠಪತಿ ಪ್ರತಿಕ್ರಿಯೆ ನೀಡಿದ್ದು, “ಯಾವುದೇ ಕಾರಣಕ್ಕೂ ದಲಿತರ ಮೇಲೆ ಕೌಂಟರ್‌ ಕೇಸ್ ಹಾಕುವುದಿಲ್ಲ. ದಲಿತರು ಹೆದರಬೇಕಿಲ್ಲ. ಈವರೆಗೆ ಹತ್ತು ಮಂದಿಯನ್ನು ಬಂಧಿಸಲಾಗಿದೆ” ಎಂದರು.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷರು, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿಗಳಾದ ಕರಿಯಪ್ಪ ಗುಡಿಮನಿ ಪ್ರತಿಕ್ರಿಯೆ ನೀಡಿ, “ಹಲ್ಲೆ ಮಾಡಿದವರನ್ನು ಮೊದಲು ದಸ್ತುಗಿರಿ ಮಾಡಬೇಕು. ನೊಂದ ಗಾಯಾಳುಗಳಿಗೆ ಆರ್ಥಿಕ ಭದ್ರತೆ ನೀಡಬೇಕು. ನಿಗಮಗಳ ಮೂಲಕ ಸುರುಕೊಡ ಗ್ರಾಮದ ದಲಿತ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುವ ಮೂಲಕ ಹೈನುಗಾರಿಕೆಗೆ ನೇರ ಸಾಲ ಮಂಜೂರಿ ಮಾಡಬೇಕು. ಗ್ರಾಮ ಪಂಚಾಯಿತಿಯು ಈ ದಲಿತರಿಗೆ ಉದ್ಯೋಗವನ್ನು ಒದಗಿಸಬೇಕು. ಪೊಲೀಸರು ದಲಿತರಿಗೆ ಭದ್ರತೆ ನೀಡಬೇಕು. ಊರಿನಲ್ಲಿ ಶಾಂತಿ ನೆಲಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರ ಹಾಕಿದರೆ ಇಡೀ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ” ಎಂದು ಎಚ್ಚರಿಸಿದರು.

“ಸುರುಕೊಡ ಗ್ರಾಮದ ಶೋಷಿತ ಸಮುದಾಯಕ್ಕೆ ಕರ್ನಾಟಕ ಜನಶಕ್ತಿ ಹಾಗೂ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಬೆಂಬಲವಾಗಿ ನಿಲ್ಲುತ್ತದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಮಶೀದಿ ಗುಡಿಗುಂಡಾರಗಳು ಮಠದೊಳಗೆ ಪ್ರವೇಶ ದಲಿತರಿಗೆ ನಿರಾಕರಿಸುತ್ತಾರೆ ಅಲಿಗೆ ಹೋಗೊದು ನೀಲಿಸಿಬೀಡಿ

  2. ಸವರ್ಣಿಯರ ಉಸಾಬರಿ ಮೊದಲು ಬಿಡಿ. ಡೊಳ್ಳು. ತಮಟೆ. ಕುಣಿತ. ನಮ್ಮ ಜನಾಂಗಕ್ಕೆ ಮೀಸಲಿಡಿ ಬಡಿದು ನೀವೇ ಖುಷಿಪಡಿ. ಹೆಚ್ಚು ಹೆಚ್ಚು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಿ. ದೇವರು ದೆವ್ವ ಮೂಡನಂಬಿಕೆಗಳಿಂದ ದೂರ ಇರಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...