Homeಮುಖಪುಟಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ: 'ಮ್ಯಾಚ್ ಫಿಕ್ಸಿಂಗ್' ಎಂದ ಜೈರಾಮ್ ರಮೇಶ್

ಸೂರತ್ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ: ‘ಮ್ಯಾಚ್ ಫಿಕ್ಸಿಂಗ್’ ಎಂದ ಜೈರಾಮ್ ರಮೇಶ್

"ನಮ್ಮ ಚುನಾವಣೆಗಳು, ಪ್ರಜಾಪ್ರಭುತ್ವ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಲ್ಲವೂ ಅಪಾಯದಲ್ಲಿವೆ. ಇದು ನಮ್ಮ ಜೀವಮಾನದ ಪ್ರಮುಖ ಚುನಾವಣೆ" ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಕಣದಲ್ಲಿದ್ದ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡ ಹಿನ್ನೆಲೆ, ಬಿಜೆಪಿಯ ಮುಖೇಶ್ ದಲಾಲ್ ಅವರು ಸೂರತ್ ಲೋಕಸಭಾ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಈ ಕುರಿತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತೀವ್ರ ಕಳವಳ, ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಜೈರಾಮ್ ರಮೇಶ್, ಸೂರತ್ ಬಿಜೆಪಿ ಅಭ್ಯರ್ಥಿ ಹೇಗೆ ಅವಿರೋಧವಾಗಿ ಆಯ್ಕೆಯಾದರು ಎಂಬುವುದನ್ನು ವಿವರಿಸಿದ್ದಾರೆ.

ಜೈರಾಮ್ ರಮೇಶ್ ವಿವರಿಸಿದಂತೆ, ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರವನ್ನು ಮೂವರು ಸೂಚಕರ ಸಹಿ ಇಲ್ಲಾ ಎಂಬ ಕಾರಣ ನೀಡಿ ಜಿಲ್ಲಾ ಚುನಾವಣಾಧಿಕಾರಿ ಏಪ್ರಿಲ್ 21 ರಂದು ತಿರಸ್ಕರಿಸಿದ್ದರು. ಅದೇ ಕಾರಣ ನೀಡಿ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವನ್ನೂ ಅಧಿಕಾರಿಗಳು ತಿರಸ್ಕರಿಸಿದ್ದರು. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಇಲ್ಲದಂತಾಯಿತು.

ನಂತರ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂತೆಗೆಕೊಂಡರು. ಏಪ್ರಿಲ್ 22, 2024 ರಂದು ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ “ಅವಿರೋಧವಾಗಿ ಆಯ್ಕೆಯಾಗಿದ್ದಾರೆ” ಎಂದು ಚುನಾವಣಾಧಿಕಾರಿಗಳು ಘೋಷಿಸಿದರು. ಮೇ 7ರಂದು ಕ್ಷೇತ್ರದಲ್ಲಿ ಮತದಾನ ನಡೆಯಬೇಕಿತ್ತು. ಅದಕ್ಕೂ ಎರಡು ವಾರಗಳ ಮೊದಲು ಈ ಬೆಳವಣಿಗೆ ನಡೆದಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

“ಮೋದಿಯವರ ‘ಅನ್ಯಾಯ ಕಾಲ’ದಲ್ಲಿ ಎಂಎಸ್‌ಎಂಇ ಮಾಲೀಕರು ಮತ್ತು ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟ ಮತ್ತು ಅವರ ಆಕ್ರೋಶ ಬಿಜೆಪಿಯನ್ನು ಯಾವ ಹಂತಕ್ಕೆ ಕೊಂಡೊಯ್ದಿದೆ ಎಂದರೆ, ಅವರು 1984ರಿಂದ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ಕ್ಷೇತ್ರದಲ್ಲಿ “ಮ್ಯಾಚ್-ಫಿಕ್ಸ್’ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ನಮ್ಮ ಚುನಾವಣೆಗಳು, ನಮ್ಮ ಪ್ರಜಾಪ್ರಭುತ್ವ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಲ್ಲವೂ ಅಪಾಯದಲ್ಲಿದೆ. ಇದು ನಮ್ಮ ಜೀವಮಾನದ ಪ್ರಮುಖ ಚುನಾವಣೆ!” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ 2024: ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...