Homeಮುಖಪುಟಸೂರತ್‌ ಡೈಮಂಡ್ ಬೋರ್ಸ್‌ನಿಂದ ಉದ್ಯೋಗ ನಷ್ಟ: ಶರದ್ ಪವಾರ್

ಸೂರತ್‌ ಡೈಮಂಡ್ ಬೋರ್ಸ್‌ನಿಂದ ಉದ್ಯೋಗ ನಷ್ಟ: ಶರದ್ ಪವಾರ್

- Advertisement -
- Advertisement -

ಗುಜರಾತ್‌ನ ಸೂರತ್‌ನಲ್ಲಿ ವಿಶ್ವದ ಅತೀ ದೊಡ್ಡ ಕಚೇರಿ ಕಟ್ಟಡ ‘ಸೂರತ್ ಡೈಮಂಡ್ ಬೋರ್ಸ್‌’ (ಎಸ್‌ಡಿಬಿ) ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ. ಇದು ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯವಹಾರದ ಅತಿ ದೊಡ್ಡ ಕೇಂದ್ರ ಎನ್ನಲಾಗಿದೆ.

ಆದರೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ನಾಯಕ ಶರದ್ ಪವಾರ್ ಅವರು ಮೋದಿ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ಮುಂಬೈನಿಂದ ಸೂರತ್‌ಗೆ ವಜ್ರ ವ್ಯವಹಾರ ಕೇಂದ್ರ ಸ್ಥಳಾಂತರಿಸಿರುವುದನ್ನು ಅವರು ವಿರೋಧಿಸಿದ್ದಾರೆ.

ಮಹಾರಾಷ್ಟ್ರದ ರಾಯಗಢದಲ್ಲಿ ಆಯೋಜಿಸಿದ್ದ ಎನ್‌ಸಿಪಿಯ ಸ್ವಾಭಿಮಾನ ಸಭೆಯಲ್ಲಿ ಮಾತನಾಡಿದ ಪವಾರ್, ಈ ಮೊದಲು ವಜ್ರದ ವ್ಯಾಪಾರವು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿತ್ತು. ಅದನ್ನು ಅಲ್ಲಿಂದ ಗುಜರಾತ್‌ಗೆ ಸ್ಥಳಾಂತರಿಸಲಾಗಿದೆ. ಇಂದು ಅಧಿಕಾರದಲ್ಲಿರುವವರಿಗೆ ದೇಶದ ಬಗ್ಗೆ ಯೋಚಿಸುವ ಶಕ್ತಿ ಇಲ್ಲ ಎಂದಿದ್ದಾರೆ.

ವಜ್ರದ ವ್ಯಾಪಾರವು ಸೂರತ್‌ಗೆ ಸ್ಥಳಾಂತರಗೊಳ್ಳುವುದರಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಮುಂಬೈ ಮಾರುಕಟ್ಟೆಯಿಂದ ಲಕ್ಷಗಟ್ಟಲೆ ಜನರಿಗೆ ಉದ್ಯೋಗ ಸಿಕ್ಕಿತ್ತು. ಸೂರತ್‌ಗೆ ವಜ್ರದ ವ್ಯಾಪಾರ ಸ್ಥಳಾಂತರವಾಗುವುದರಿಂದ ಸ್ಥಳೀಯರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.

ನೈನಾ ಯೋಜನೆಯಿಂದಾಗಿ (ನವಿ ಮುಂಬೈ ವಿಮಾನ ನಿಲ್ದಾಣದ ಅಧಿಸೂಚಿತ ಪ್ರದೇಶ) ರೈತರ ಉದ್ಯೋಗ, ಸಂಪನ್ಮೂಲಗಳನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಶರದ್ ಪವಾರ್ ಕಿಡಿಕಾರಿದ್ದಾರೆ.

ಸೂರತ್‌ನ ಖಾಜೋದ್ ಪ್ರದೇಶದಲ್ಲಿ ನಿರ್ಮಿಸಲಾದ ‘ಸೂರತ್ ಡೈಮಂಡ್ ಬೋರ್ಸ್’ ರಾಜ್ಯ ಮತ್ತು ದೇಶದ ಆರ್ಥಿಕ ಅಭಿವೃದ್ಧಿಗೆ ಹೊಸ ಮೈಲಿಗಲ್ಲು ಆಗಲಿದೆ ಎಂದು ಹೇಳಲಾಗಿದೆ.

ವಿಶ್ವದ ಅತಿದೊಡ್ಡ ಕಾರ್ಪೋರೇಟ್ ಕಟ್ಟಡವಾದ ಡೈಮಂಡ್ ಬೋರ್ಸ್‌ ಅನ್ನು3,400 ಕೋಟಿ ರೂಪಾಯಿ ವೆಚ್ಚದಲ್ಲಿ ಸೂರತ್‌ನ 35.54 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ಇದು ಒರಟು ಮತ್ತು ಪಾಲಿಶ್ ಮಾಡಿದ ವಜ್ರದ ವ್ಯಾಪಾರಕ್ಕೆ ಜಾಗತಿಕ ಕೇಂದ್ರವಾಗಲಿದೆ. ಇದರಿಂದ 1.5 ಲಕ್ಷ ಜನರಿಗೆ ಉದ್ಯೋಗವಕಾಶ ಸಿಗಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಧಾರಾವಿ ಪುನರಾಭಿವೃದ್ಧಿ ಯೋಜನೆ ಅದಾನಿ ತೆಕ್ಕೆಗೆ: ಭುಗಿಲೆದ್ದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...