Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...