Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...