Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...