Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...