Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...