Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...